Homeಕರ್ನಾಟಕಅಧ್ಯಾತ್ಮ ಎಂಬುದು ಆಂಗಿಕ ಅಭಿನಯವಲ್ಲ: ಕೃಷ್ಣಮೂರ್ತಿ ಹನೂರು

ಅಧ್ಯಾತ್ಮ ಎಂಬುದು ಆಂಗಿಕ ಅಭಿನಯವಲ್ಲ: ಕೃಷ್ಣಮೂರ್ತಿ ಹನೂರು

ಆರ್‌.ಸಂತೋಷ್‌ ನಾಯಕ್‌ ಅನುವಾದಿಸಿರುವ ಮುಕುಂದ ರಾವ್ ಅವರ ‘ಭ್ರಮೆ ಮತ್ತು ವಾಸ್ತವಗಳ ನಡುವೆ’ ಕೃತಿಯನ್ನು ಗೌರಿ ಮೀಡಿಯಾ ಟ್ರಸ್ಟ್‌ ವತಿಯಿಂದ ಮೈಸೂರಿನ ಸುರುಚಿ ರಂಗಮನೆಯಲ್ಲಿ ಭಾನುವಾರ ಬಿಡುಗಡೆ ಮಾಡಲಾಯಿತು.

- Advertisement -
- Advertisement -

ಅಧ್ಯಾತ್ಮ ಎಂಬುದು ಆಂಗಿಕ ಅಭಿನಯವಲ್ಲ; ಯಾವುದರಿಂದಲೋ ಪಡೆದುಕೊಳ್ಳುವಂತಹದ್ದೂ ಅಲ್ಲ. ಅದು ನಾವೇ ಕಂಡುಕೊಳ್ಳಬೇಕಾದ ಅನುಭವ ಎಂದು ಜಾನಪದ ವಿದ್ವಾಂಸರಾದ ಡಾ.ಕೃಷ್ಣಮೂರ್ತಿ ಹನೂರು ಹೇಳಿದರು.

ಗೌರಿ ಮೀಡಿಯಾ ಟ್ರಸ್ಟ್‌ ವತಿಯಿಂದ ಮೈಸೂರಿನ ಸುರುಚಿ ರಂಗಮನೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆರ್‌.ಸಂತೋಷ್‌ ನಾಯಕ್‌ ಅನುವಾದಿಸಿರುವ ಮುಕುಂದ ರಾವ್ ಅವರ ‘ಭ್ರಮೆ ಮತ್ತು ವಾಸ್ತವಗಳ ನಡುವೆ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃತಿ ಲೋಕಾರ್ಪಣೆ ಮಾಡಿದ ಅವರು, ಅಧ್ಯಾತ್ಮ ಕ್ಷೇತ್ರದ ಆಳ ಅಗಲಗಳ ಕುರಿತು ವಿವರಿಸಿದರು. ವಚನ ಸಾಹಿತ್ಯ, ಜಾನಪದ ಸಾಹಿತ್ಯ, ಜಾನಪದ ಪರಂಪರೆಯಲ್ಲಿ ಅಡಗಿರುವ ಆಧ್ಯಾತ್ಮಿಕ ಸೆಲೆಗಳ ಕುರಿತು ಚರ್ಚಿಸಿದರು.

ವಚನಕಾರ್ತಿ ಅಕ್ಕ ಮಹಾದೇವಿ ‘ಹಸಿವಾದರೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕರೆಹಳ್ಳ ಬಾವಿಗಳುಂಟು, ಶಯನಕ್ಕೆ ಹಾಳು ದೇಗುಲಗಳುಂಟು. ಆತ್ಮ ಸಂಗಾತಕ್ಕೆ ಚೆನ್ನಮಲ್ಲಿಕಾರ್ಜುನನುಂಟು’ ಎಂದಿರುವುದನ್ನು ಉಲ್ಲೇಖಿಸಿದ ಅವರು, ಅಕ್ಕ ಮಹಾದೇವಿಯವರು ಇಹಲೋಕದ ಬಗ್ಗೆ ಮಾತನಾಡುತ್ತಿರುವುದನ್ನು ಸ್ಮರಿಸಿದರು.

ಶಿರವಷ್ಟೇ ಅಲ್ಲ, ಪಾದವೂ ಮುಖ್ಯ ಎಂದು ಜನಪದರು ಸಾರಿದ್ದಾರೆ. ಹೀಗಾಗಿ ‘ನಿನ್ನ ಪಾದಕ್ಕರುವಾಗಲಪ್ಪ’ ಎಂದು ಹಾಡಿದ್ದಾರೆ. ಆದಿ ಜ್ಯೋತಿ, ಬೀದಿ ಜ್ಯೋತಿ, ಎಲ್ಲೆಲ್ಲೂ ಜ್ಯೋತಿಯನ್ನು ಕಂಡ ಜನಪದರು, ತಿಪ್ಪೆಯ ಮೇಲೆ ಪರಂಜ್ಯೋತಿಯನ್ನು ಕಂಡಿದ್ದು ಬಹುದೊಡ್ಡ ಸಂದೇಶ ಎಂದು ಬಣ್ಣಿಸಿದರು.

ಇದನ್ನೂ ಓದಿರಿ: ಬುದ್ಧನ ಹೆಜ್ಜೆ ಗುರುತುಗಳು; ತಿಚ್ ನ್ಹಾತ್ ಹಾನ್ ಬರಹದ ಅನುವಾದ

ತಮ್ಮ ಕ್ಷೇತ್ರ ಕಾರ್ಯವನ್ನು ಮೆಲುಕು ಹಾಕಿದ ಅವರು, “ಕೊಳ್ಳೇಗಾಲ ತಾಲ್ಲೂಕಿನಲ್ಲಿ ಕಾವೇರಿ ನದಿ ಪಕ್ಕದಲ್ಲಿ ಅಲ್ಲಮನ ಗದ್ದುಗೆ ಇದೆ ಎಂದು ಜನರು ತೋರಿಸಿದರು. ಅಲ್ಲಿ ಏನೂ ಇರಲಿಲ್ಲ. ಎರಡು ಪಾದ ಮಾತ್ರ ಇತ್ತು. ಮತ್ತೊಂದು ಕಡೆ ಕನಕದಾಸರು ಬಂದಿದ್ದ ಸ್ಥಳವೆಂದು ತೋರಿಸಿದ್ದರು. ಅಲ್ಲಿ ಖಾಲಿ ಕೋಣೆ ಮಾತ್ರ ಇತ್ತು. ಅಂದರೆ ಶೂನ್ಯ ಕೋಣೆ. ಅಧ್ಯಾತ್ಮದ ತುದಿ ಇದೆಯಲ್ಲ ಅದು ಘನ ನೀಲಿ. ನಮ್ಮಂಥ ನಿಮ್ಮಂಥವರಿಗೆ ಸಾಧ್ಯವಾಗದ ತುದಿಯದು. ಸಾಧ್ಯವಾದರೆ ಸಂತೋಷ” ಎಂದು ತಿಳಿಸಿದರು.

ಹಗಲು ನಮ್ಮ ಕಣ್ಣಿಗೆ ಕಾಣಿಸದೆ ಹೋಗಬಹುದು. ಆದರೆ ರಾತ್ರಿ ಇದೆಯಲ್ಲ, ಹೊಳೆಯುವ ಬೆಳಗನ್ನು ತೋರಿಸಬಹುದು. ಆದರೆ ನಾವು ಇದಕ್ಕೆ ವಿರುದ್ಧವಾಗಿ ತಿಳಿದುಕೊಂಡಿದ್ದೇವೆ. ಭ್ರಮೆ ಮತ್ತು ವಾಸ್ತವ ಕೃತಿಯಲ್ಲಿ ಇದ್ದದ್ದನ್ನು ಇದ್ದಂತೆ ಹೇಳಲಾಗಿದೆ. ಇಂಥದ್ದೇ ಅಧ್ಯಾತ್ಮ ಎಂದೂ ಬೊಟ್ಟು ಮಾಡುವುದಿಲ್ಲ ಎಂದು ವಿವರಿಸಿದರು.

ರಮಣ ಮಹರ್ಷಿಯವರು ಕ್ಯಾನ್ಸರ್‌ ಬಗ್ಗೆ ಮಾತನಾಡುತ್ತಾ, ಅದರ ಪಾಡಿಗೆ ಅದು ಬಂದರೆ ನಾವೇಕೆ ವಿಚಲಿತರಾಗಬೇಕು ಎಂದಿದ್ದರು. ಕಳ್ಳರು ಆಶ್ರಮಕ್ಕೆ ಬಂದಿದ್ದಾರೆ ಎಂದಾಗ ರಮಣ ಮಹರ್ಷಿಯವರು, ಅವರು ಬಂದಿದ್ದಾರೆ ತಮ್ಮ ಕೆಲಸ ಮುಗಿಸಿಕೊಂಡು ಹೋಗ್ತಾರೆ ಬಿಡಿ ಎಂದು ಪ್ರತಿಕ್ರಿಯೆ ನೀಡಿದ್ದರು. ಬಹಳ ಒಳ್ಳೆಯ ಕಳ್ಳತನ, ಬಹಳ ಒಳ್ಳೆಯ ಭ್ರಷ್ಟಾಚಾರ ಇವೆಲ್ಲವೂ ಇದೆ. ಆ ರೀತಿಯಲ್ಲಿ ಮುಕುಂದ್‌ರಾವ್ ಮಾತನಾಡುತ್ತಾರೆ. ಅವರು ಅಧ್ಯಾತ್ಮದ ಪರ ವಹಿಸಿಯೂ ಅದನ್ನು ವಿರೋಧಿಸಿಯೂ ಮಾತನಾಡಲ್ಲ. ಈ ಕಾರಣಕ್ಕೆ ಈ ಕೃತಿ ಮುಖ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಂತರ ಅನುಯಾಯಿಗಳಿಗೆ ನಿಷ್ಠುರ ಪ್ರಜ್ಞೆ ಮುಖ್ಯ: ಡಾ.ರಂಗನಾಥ್‌

ವಿಮರ್ಶಕರಾದ ಡಾ.ರಂಗನಾಥ್ ಕಂತನಕುಂಟೆ ಮಾತನಾಡಿ, “ಈ ಕೃತಿಯು ಅಧ್ಯಾತ್ಮದ ಪ್ರವಾಸ ಕಥನದ ಹಾಗೆ ಇದೆ. ಅಧ್ಯಾತ್ಮದ ಅನುಭವದ ಹುಡುಕಾಟದಲ್ಲಿ ಆಸಕ್ತಿ ಇರುವವರ ನಿಜದ ವ್ಯಕ್ತಿತ್ವ ಯಾವ ರೀತಿ ಇರುತ್ತದೆ ಎಂಬುದು ಇಲ್ಲಿ ವ್ಯಕ್ತವಾಗಿದೆ” ಎಂದು ತಿಳಿಸಿದರು.

“ಅನುಭಾವ ಎಂಬುವುದು ಸಾಹಿತ್ಯದ ವಿದ್ಯಾರ್ಥಿಗಳಾದ ನಮಗೆ ಕಾಣಿಸುವ ಬಗೆ ಬೇರೆ. ಆದರೆ ಲೋಕರೂಢಿಯಾಗಿ, ಬಹಳ ಜನಪ್ರಿಯವಾಗಿ ಬೆಳೆದಿರುವ ಗುರುಗಳು, ಸದ್ಗುರುಗಳು ಅಧ್ಯಾತ್ಮವನ್ನು ಮಾರುಕಟ್ಟೆ ಮಾಡಿಕೊಂಡು ಬಹುರಾಷ್ಟ್ರೀಯ ಕಂಪನಿಗಳಂತೆ ಆಶ್ರಮಗಳನ್ನು, ಮಠಗಳನ್ನು ಬೆಳೆಸಿಕೊಂಡಿದ್ದಾರೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಓಶೋ ಕಂಡಂತೆ ವಿವೇಕಾನಂದರು

ನಾವು ಸಾಗುತ್ತಿರುವ ಹಾದಿಯಲ್ಲಿ ಯಾರನ್ನು ನಾವು ಗುರುಗಳೆಂದು ಭಾವಿಸಿರುತ್ತೇವೋ ಅವರ ಅಂತರಂಗ ಬಹಿರಂಗಳನ್ನು ಅರಿತುಕೊಂಡು ಟೊಳ್ಳುತನವನ್ನು ಬಯಲು ಮಾಡುವುದು ಮುಖ್ಯ. ಇಂದು ಸಂತರೆಂದು ಬಿಂಬಿಸಿಕೊಳ್ಳುತ್ತಿರುವವರ ಅನುಯಾಯಿಗಳು ನಿಷ್ಠುರ ಪ್ರಜ್ಞೆಯನ್ನೂ ಉಳಿಸಿಕೊಳ್ಳದೆ ಸಂಪೂರ್ಣವಾಗಿ ಕುರುಡಾಗಿ ಕಾಲಿಗೆ ಬೀಳುತ್ತಿದ್ದಾರೆ. ಯಾಕೆಂದರೆ ಅವರಿಗೆ ಅಧಾತ್ಮದ ತಿಳಿವಳಿಕೆಯ ಕೊರತೆ ಇದೆ ಎಂದರು.

ಜಗದ್ಗುರುಗಳಿಗೆ ಬಲಿಯಾಗುತ್ತಿರುವವರು ಅನಕ್ಷರಸ್ಥರಲ್ಲ. ಅವರೆಲ್ಲರೂ ಪದವೀಧರರು, ಸಾಧಕರು, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸದಲ್ಲಿರುವವರು. ಜಗದ್ಗುರುಗಳ, ಸದ್ಗುರುಗಳ ಪಾದದಲ್ಲಿ ಬಿದ್ದು ಹೊರಳಾಡುವ ಗುಲಾಮಗಿರಿಯನ್ನು ಕೃತಿಯಲ್ಲಿ ಚಿತ್ರಿಸಲಾಗಿದೆ. ನಿಷ್ಠುರವಾದ ಮಾತುಗಳನ್ನು ಅಧ್ಯಾತ್ಮಿಕ ಗುರುಗಳ ಕುರಿತು ಈ ಕೃತಿಯಲ್ಲಿ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಅನುವಾದದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, “ಅನೇಕರು ಇಂಗ್ಲಿಷ್‌ ಅನುವಾದ ಮಾಡುವಾಗ ಕನ್ನಡದ ಜಾಯಮಾನಕ್ಕೆ ಹೊಂದದ ಪದಗಳನ್ನು ಬಳಸಿಬಿಡುತ್ತಾರೆ. ಅದು ಅನುವಾದ ಎನಿಸುವುದೇ ಇಲ್ಲ. ಆದರೆ ‘ಬಿಟ್ವಿನ್ ದ ಸಸ್ಟೆಂಟ್ ಅಂಡ್ ದ ರೋಪ್’ ಕೃತಿಯನ್ನು ಕನ್ನಡ ಜಾಯಮಾನ‌ಕ್ಕೆ ಒಗ್ಗುವಂತೆ ಸಂತೋಷ್‌ ನಾಯಕ್ ಅನುವಾದ ಮಾಡಿದ್ದಾರೆ” ಎಂದರು.

ಮೈಸೂರು ವಿವಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ವಿ.ಶೋಭಾ ಮಾತನಾಡಿ, “ಭ್ರಮೆಗಳನ್ನು ತುಂಬಿಕೊಂಡಾಗ ನಾವು ವಾಸ್ತವದಲ್ಲಿ ಬದುಕಲು ಆಗಲ್ಲ. ಇಡೀ ಕೃತಿಯುದ್ದಕ್ಕೂ ಮುಕುಂದರಾವ್ ಅವರ ಆಧ್ಯಾತ್ಮಿಕ ಪಯಣ ಢಾಳಾಗಿ ಚಿತ್ರಿತವಾಗಿದೆ. ಬಾಲ್ಯದಿಂದಲೂ ಅವರು ಆಧ್ಯಾತ್ಮಿಕದ ಪಯಣ ಮಾಡಿರುವುದನ್ನು ಇಲ್ಲಿ ಕಾಣಬಹುದು” ಎಂದು ತಿಳಿಸಿದರು.

‘ವಿಜಯವಾಣಿ’ ದಿನಪತ್ರಿಕೆಯ ಹಿರಿಯ ಉಪಸಂಪಾದಕ ಮುಳ್ಳೂರು ರಾಜು ಮಾತನಾಡಿ, “ನಾವೆಲ್ಲರೂ ಭ್ರಮೆ ಹಾಗೂ ವಾಸ್ತವಗಳ ನಡುವೆ ಬದುಕುತ್ತಲೇ ಇದ್ದೇವೆ. ಭ್ರಮೆ ಹಾಗೂ ವಾಸ್ತವ ಯಾವುದು ಎಂದು ಈ ಕೃತಿಯಿಂದ ತಿಳಿಯುತ್ತದೆ. ಭ್ರಮೆಗಳ ಕುರಿತು ತಿಳಿಯದಿದ್ದರೆ ಮತ್ತೊಬ್ಬರು ನಮ್ಮಿಂದ ಲಾಭ ಮಾಡಿಕೊಳ್ಳುತ್ತಿರುತ್ತಾರೆ” ಎಂದು ಎಚ್ಚರಿಸಿದರು.

ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್‌ ಅಧ್ಯಕ್ಷತೆ ವಹಿಸಿದ್ದರು. ಕೃತಿಯ ಕರ್ತೃ ಮುಕುಂದ ರಾವ್‌, ಅನುವಾದಕ ಆರ್‌.ಸಂತೋಷ್‌ ನಾಯಕ್‌, ಅರಿವು ಶಾಲೆ ಶಿಕ್ಷಕಿ ಜೆ.ರಜನಿ, ಪ್ರಗತಿಪರ ಹೋರಾಟಗಾರರಾದ ದೊಡ್ಡಿಪಾಳ್ಯ ನರಸಿಂಹಮೂರ್ತಿ, ‘ನ್ಯಾಯಪಥ’ ವಾರಪತ್ರಿಕೆಯ ಸಂಪಾದಕರಾದ ಡಿ.ಎನ್‌.ಗುರುಪ್ರಸಾದ್ ಹಾಜರಿದ್ದರು. ಅರಿವು ಶಾಲೆಯ ಮನೋಹರ್‌ ಕಾರ್ಯಕ್ರಮ ನಿರೂಪಿಸಿದರು.


ಇದನ್ನೂ ಓದಿರಿ: ವಿಪರೀತದ ಬೆಳಗು ಫುಲೆ ಮಾರ್ಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...