Homeಕರ್ನಾಟಕಅಧ್ಯಾತ್ಮ ಎಂಬುದು ಆಂಗಿಕ ಅಭಿನಯವಲ್ಲ: ಕೃಷ್ಣಮೂರ್ತಿ ಹನೂರು

ಅಧ್ಯಾತ್ಮ ಎಂಬುದು ಆಂಗಿಕ ಅಭಿನಯವಲ್ಲ: ಕೃಷ್ಣಮೂರ್ತಿ ಹನೂರು

ಆರ್‌.ಸಂತೋಷ್‌ ನಾಯಕ್‌ ಅನುವಾದಿಸಿರುವ ಮುಕುಂದ ರಾವ್ ಅವರ ‘ಭ್ರಮೆ ಮತ್ತು ವಾಸ್ತವಗಳ ನಡುವೆ’ ಕೃತಿಯನ್ನು ಗೌರಿ ಮೀಡಿಯಾ ಟ್ರಸ್ಟ್‌ ವತಿಯಿಂದ ಮೈಸೂರಿನ ಸುರುಚಿ ರಂಗಮನೆಯಲ್ಲಿ ಭಾನುವಾರ ಬಿಡುಗಡೆ ಮಾಡಲಾಯಿತು.

- Advertisement -
- Advertisement -

ಅಧ್ಯಾತ್ಮ ಎಂಬುದು ಆಂಗಿಕ ಅಭಿನಯವಲ್ಲ; ಯಾವುದರಿಂದಲೋ ಪಡೆದುಕೊಳ್ಳುವಂತಹದ್ದೂ ಅಲ್ಲ. ಅದು ನಾವೇ ಕಂಡುಕೊಳ್ಳಬೇಕಾದ ಅನುಭವ ಎಂದು ಜಾನಪದ ವಿದ್ವಾಂಸರಾದ ಡಾ.ಕೃಷ್ಣಮೂರ್ತಿ ಹನೂರು ಹೇಳಿದರು.

ಗೌರಿ ಮೀಡಿಯಾ ಟ್ರಸ್ಟ್‌ ವತಿಯಿಂದ ಮೈಸೂರಿನ ಸುರುಚಿ ರಂಗಮನೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆರ್‌.ಸಂತೋಷ್‌ ನಾಯಕ್‌ ಅನುವಾದಿಸಿರುವ ಮುಕುಂದ ರಾವ್ ಅವರ ‘ಭ್ರಮೆ ಮತ್ತು ವಾಸ್ತವಗಳ ನಡುವೆ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃತಿ ಲೋಕಾರ್ಪಣೆ ಮಾಡಿದ ಅವರು, ಅಧ್ಯಾತ್ಮ ಕ್ಷೇತ್ರದ ಆಳ ಅಗಲಗಳ ಕುರಿತು ವಿವರಿಸಿದರು. ವಚನ ಸಾಹಿತ್ಯ, ಜಾನಪದ ಸಾಹಿತ್ಯ, ಜಾನಪದ ಪರಂಪರೆಯಲ್ಲಿ ಅಡಗಿರುವ ಆಧ್ಯಾತ್ಮಿಕ ಸೆಲೆಗಳ ಕುರಿತು ಚರ್ಚಿಸಿದರು.

ವಚನಕಾರ್ತಿ ಅಕ್ಕ ಮಹಾದೇವಿ ‘ಹಸಿವಾದರೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕರೆಹಳ್ಳ ಬಾವಿಗಳುಂಟು, ಶಯನಕ್ಕೆ ಹಾಳು ದೇಗುಲಗಳುಂಟು. ಆತ್ಮ ಸಂಗಾತಕ್ಕೆ ಚೆನ್ನಮಲ್ಲಿಕಾರ್ಜುನನುಂಟು’ ಎಂದಿರುವುದನ್ನು ಉಲ್ಲೇಖಿಸಿದ ಅವರು, ಅಕ್ಕ ಮಹಾದೇವಿಯವರು ಇಹಲೋಕದ ಬಗ್ಗೆ ಮಾತನಾಡುತ್ತಿರುವುದನ್ನು ಸ್ಮರಿಸಿದರು.

ಶಿರವಷ್ಟೇ ಅಲ್ಲ, ಪಾದವೂ ಮುಖ್ಯ ಎಂದು ಜನಪದರು ಸಾರಿದ್ದಾರೆ. ಹೀಗಾಗಿ ‘ನಿನ್ನ ಪಾದಕ್ಕರುವಾಗಲಪ್ಪ’ ಎಂದು ಹಾಡಿದ್ದಾರೆ. ಆದಿ ಜ್ಯೋತಿ, ಬೀದಿ ಜ್ಯೋತಿ, ಎಲ್ಲೆಲ್ಲೂ ಜ್ಯೋತಿಯನ್ನು ಕಂಡ ಜನಪದರು, ತಿಪ್ಪೆಯ ಮೇಲೆ ಪರಂಜ್ಯೋತಿಯನ್ನು ಕಂಡಿದ್ದು ಬಹುದೊಡ್ಡ ಸಂದೇಶ ಎಂದು ಬಣ್ಣಿಸಿದರು.

ಇದನ್ನೂ ಓದಿರಿ: ಬುದ್ಧನ ಹೆಜ್ಜೆ ಗುರುತುಗಳು; ತಿಚ್ ನ್ಹಾತ್ ಹಾನ್ ಬರಹದ ಅನುವಾದ

ತಮ್ಮ ಕ್ಷೇತ್ರ ಕಾರ್ಯವನ್ನು ಮೆಲುಕು ಹಾಕಿದ ಅವರು, “ಕೊಳ್ಳೇಗಾಲ ತಾಲ್ಲೂಕಿನಲ್ಲಿ ಕಾವೇರಿ ನದಿ ಪಕ್ಕದಲ್ಲಿ ಅಲ್ಲಮನ ಗದ್ದುಗೆ ಇದೆ ಎಂದು ಜನರು ತೋರಿಸಿದರು. ಅಲ್ಲಿ ಏನೂ ಇರಲಿಲ್ಲ. ಎರಡು ಪಾದ ಮಾತ್ರ ಇತ್ತು. ಮತ್ತೊಂದು ಕಡೆ ಕನಕದಾಸರು ಬಂದಿದ್ದ ಸ್ಥಳವೆಂದು ತೋರಿಸಿದ್ದರು. ಅಲ್ಲಿ ಖಾಲಿ ಕೋಣೆ ಮಾತ್ರ ಇತ್ತು. ಅಂದರೆ ಶೂನ್ಯ ಕೋಣೆ. ಅಧ್ಯಾತ್ಮದ ತುದಿ ಇದೆಯಲ್ಲ ಅದು ಘನ ನೀಲಿ. ನಮ್ಮಂಥ ನಿಮ್ಮಂಥವರಿಗೆ ಸಾಧ್ಯವಾಗದ ತುದಿಯದು. ಸಾಧ್ಯವಾದರೆ ಸಂತೋಷ” ಎಂದು ತಿಳಿಸಿದರು.

ಹಗಲು ನಮ್ಮ ಕಣ್ಣಿಗೆ ಕಾಣಿಸದೆ ಹೋಗಬಹುದು. ಆದರೆ ರಾತ್ರಿ ಇದೆಯಲ್ಲ, ಹೊಳೆಯುವ ಬೆಳಗನ್ನು ತೋರಿಸಬಹುದು. ಆದರೆ ನಾವು ಇದಕ್ಕೆ ವಿರುದ್ಧವಾಗಿ ತಿಳಿದುಕೊಂಡಿದ್ದೇವೆ. ಭ್ರಮೆ ಮತ್ತು ವಾಸ್ತವ ಕೃತಿಯಲ್ಲಿ ಇದ್ದದ್ದನ್ನು ಇದ್ದಂತೆ ಹೇಳಲಾಗಿದೆ. ಇಂಥದ್ದೇ ಅಧ್ಯಾತ್ಮ ಎಂದೂ ಬೊಟ್ಟು ಮಾಡುವುದಿಲ್ಲ ಎಂದು ವಿವರಿಸಿದರು.

ರಮಣ ಮಹರ್ಷಿಯವರು ಕ್ಯಾನ್ಸರ್‌ ಬಗ್ಗೆ ಮಾತನಾಡುತ್ತಾ, ಅದರ ಪಾಡಿಗೆ ಅದು ಬಂದರೆ ನಾವೇಕೆ ವಿಚಲಿತರಾಗಬೇಕು ಎಂದಿದ್ದರು. ಕಳ್ಳರು ಆಶ್ರಮಕ್ಕೆ ಬಂದಿದ್ದಾರೆ ಎಂದಾಗ ರಮಣ ಮಹರ್ಷಿಯವರು, ಅವರು ಬಂದಿದ್ದಾರೆ ತಮ್ಮ ಕೆಲಸ ಮುಗಿಸಿಕೊಂಡು ಹೋಗ್ತಾರೆ ಬಿಡಿ ಎಂದು ಪ್ರತಿಕ್ರಿಯೆ ನೀಡಿದ್ದರು. ಬಹಳ ಒಳ್ಳೆಯ ಕಳ್ಳತನ, ಬಹಳ ಒಳ್ಳೆಯ ಭ್ರಷ್ಟಾಚಾರ ಇವೆಲ್ಲವೂ ಇದೆ. ಆ ರೀತಿಯಲ್ಲಿ ಮುಕುಂದ್‌ರಾವ್ ಮಾತನಾಡುತ್ತಾರೆ. ಅವರು ಅಧ್ಯಾತ್ಮದ ಪರ ವಹಿಸಿಯೂ ಅದನ್ನು ವಿರೋಧಿಸಿಯೂ ಮಾತನಾಡಲ್ಲ. ಈ ಕಾರಣಕ್ಕೆ ಈ ಕೃತಿ ಮುಖ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಂತರ ಅನುಯಾಯಿಗಳಿಗೆ ನಿಷ್ಠುರ ಪ್ರಜ್ಞೆ ಮುಖ್ಯ: ಡಾ.ರಂಗನಾಥ್‌

ವಿಮರ್ಶಕರಾದ ಡಾ.ರಂಗನಾಥ್ ಕಂತನಕುಂಟೆ ಮಾತನಾಡಿ, “ಈ ಕೃತಿಯು ಅಧ್ಯಾತ್ಮದ ಪ್ರವಾಸ ಕಥನದ ಹಾಗೆ ಇದೆ. ಅಧ್ಯಾತ್ಮದ ಅನುಭವದ ಹುಡುಕಾಟದಲ್ಲಿ ಆಸಕ್ತಿ ಇರುವವರ ನಿಜದ ವ್ಯಕ್ತಿತ್ವ ಯಾವ ರೀತಿ ಇರುತ್ತದೆ ಎಂಬುದು ಇಲ್ಲಿ ವ್ಯಕ್ತವಾಗಿದೆ” ಎಂದು ತಿಳಿಸಿದರು.

“ಅನುಭಾವ ಎಂಬುವುದು ಸಾಹಿತ್ಯದ ವಿದ್ಯಾರ್ಥಿಗಳಾದ ನಮಗೆ ಕಾಣಿಸುವ ಬಗೆ ಬೇರೆ. ಆದರೆ ಲೋಕರೂಢಿಯಾಗಿ, ಬಹಳ ಜನಪ್ರಿಯವಾಗಿ ಬೆಳೆದಿರುವ ಗುರುಗಳು, ಸದ್ಗುರುಗಳು ಅಧ್ಯಾತ್ಮವನ್ನು ಮಾರುಕಟ್ಟೆ ಮಾಡಿಕೊಂಡು ಬಹುರಾಷ್ಟ್ರೀಯ ಕಂಪನಿಗಳಂತೆ ಆಶ್ರಮಗಳನ್ನು, ಮಠಗಳನ್ನು ಬೆಳೆಸಿಕೊಂಡಿದ್ದಾರೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಓಶೋ ಕಂಡಂತೆ ವಿವೇಕಾನಂದರು

ನಾವು ಸಾಗುತ್ತಿರುವ ಹಾದಿಯಲ್ಲಿ ಯಾರನ್ನು ನಾವು ಗುರುಗಳೆಂದು ಭಾವಿಸಿರುತ್ತೇವೋ ಅವರ ಅಂತರಂಗ ಬಹಿರಂಗಳನ್ನು ಅರಿತುಕೊಂಡು ಟೊಳ್ಳುತನವನ್ನು ಬಯಲು ಮಾಡುವುದು ಮುಖ್ಯ. ಇಂದು ಸಂತರೆಂದು ಬಿಂಬಿಸಿಕೊಳ್ಳುತ್ತಿರುವವರ ಅನುಯಾಯಿಗಳು ನಿಷ್ಠುರ ಪ್ರಜ್ಞೆಯನ್ನೂ ಉಳಿಸಿಕೊಳ್ಳದೆ ಸಂಪೂರ್ಣವಾಗಿ ಕುರುಡಾಗಿ ಕಾಲಿಗೆ ಬೀಳುತ್ತಿದ್ದಾರೆ. ಯಾಕೆಂದರೆ ಅವರಿಗೆ ಅಧಾತ್ಮದ ತಿಳಿವಳಿಕೆಯ ಕೊರತೆ ಇದೆ ಎಂದರು.

ಜಗದ್ಗುರುಗಳಿಗೆ ಬಲಿಯಾಗುತ್ತಿರುವವರು ಅನಕ್ಷರಸ್ಥರಲ್ಲ. ಅವರೆಲ್ಲರೂ ಪದವೀಧರರು, ಸಾಧಕರು, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸದಲ್ಲಿರುವವರು. ಜಗದ್ಗುರುಗಳ, ಸದ್ಗುರುಗಳ ಪಾದದಲ್ಲಿ ಬಿದ್ದು ಹೊರಳಾಡುವ ಗುಲಾಮಗಿರಿಯನ್ನು ಕೃತಿಯಲ್ಲಿ ಚಿತ್ರಿಸಲಾಗಿದೆ. ನಿಷ್ಠುರವಾದ ಮಾತುಗಳನ್ನು ಅಧ್ಯಾತ್ಮಿಕ ಗುರುಗಳ ಕುರಿತು ಈ ಕೃತಿಯಲ್ಲಿ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಅನುವಾದದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, “ಅನೇಕರು ಇಂಗ್ಲಿಷ್‌ ಅನುವಾದ ಮಾಡುವಾಗ ಕನ್ನಡದ ಜಾಯಮಾನಕ್ಕೆ ಹೊಂದದ ಪದಗಳನ್ನು ಬಳಸಿಬಿಡುತ್ತಾರೆ. ಅದು ಅನುವಾದ ಎನಿಸುವುದೇ ಇಲ್ಲ. ಆದರೆ ‘ಬಿಟ್ವಿನ್ ದ ಸಸ್ಟೆಂಟ್ ಅಂಡ್ ದ ರೋಪ್’ ಕೃತಿಯನ್ನು ಕನ್ನಡ ಜಾಯಮಾನ‌ಕ್ಕೆ ಒಗ್ಗುವಂತೆ ಸಂತೋಷ್‌ ನಾಯಕ್ ಅನುವಾದ ಮಾಡಿದ್ದಾರೆ” ಎಂದರು.

ಮೈಸೂರು ವಿವಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ವಿ.ಶೋಭಾ ಮಾತನಾಡಿ, “ಭ್ರಮೆಗಳನ್ನು ತುಂಬಿಕೊಂಡಾಗ ನಾವು ವಾಸ್ತವದಲ್ಲಿ ಬದುಕಲು ಆಗಲ್ಲ. ಇಡೀ ಕೃತಿಯುದ್ದಕ್ಕೂ ಮುಕುಂದರಾವ್ ಅವರ ಆಧ್ಯಾತ್ಮಿಕ ಪಯಣ ಢಾಳಾಗಿ ಚಿತ್ರಿತವಾಗಿದೆ. ಬಾಲ್ಯದಿಂದಲೂ ಅವರು ಆಧ್ಯಾತ್ಮಿಕದ ಪಯಣ ಮಾಡಿರುವುದನ್ನು ಇಲ್ಲಿ ಕಾಣಬಹುದು” ಎಂದು ತಿಳಿಸಿದರು.

‘ವಿಜಯವಾಣಿ’ ದಿನಪತ್ರಿಕೆಯ ಹಿರಿಯ ಉಪಸಂಪಾದಕ ಮುಳ್ಳೂರು ರಾಜು ಮಾತನಾಡಿ, “ನಾವೆಲ್ಲರೂ ಭ್ರಮೆ ಹಾಗೂ ವಾಸ್ತವಗಳ ನಡುವೆ ಬದುಕುತ್ತಲೇ ಇದ್ದೇವೆ. ಭ್ರಮೆ ಹಾಗೂ ವಾಸ್ತವ ಯಾವುದು ಎಂದು ಈ ಕೃತಿಯಿಂದ ತಿಳಿಯುತ್ತದೆ. ಭ್ರಮೆಗಳ ಕುರಿತು ತಿಳಿಯದಿದ್ದರೆ ಮತ್ತೊಬ್ಬರು ನಮ್ಮಿಂದ ಲಾಭ ಮಾಡಿಕೊಳ್ಳುತ್ತಿರುತ್ತಾರೆ” ಎಂದು ಎಚ್ಚರಿಸಿದರು.

ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್‌ ಅಧ್ಯಕ್ಷತೆ ವಹಿಸಿದ್ದರು. ಕೃತಿಯ ಕರ್ತೃ ಮುಕುಂದ ರಾವ್‌, ಅನುವಾದಕ ಆರ್‌.ಸಂತೋಷ್‌ ನಾಯಕ್‌, ಅರಿವು ಶಾಲೆ ಶಿಕ್ಷಕಿ ಜೆ.ರಜನಿ, ಪ್ರಗತಿಪರ ಹೋರಾಟಗಾರರಾದ ದೊಡ್ಡಿಪಾಳ್ಯ ನರಸಿಂಹಮೂರ್ತಿ, ‘ನ್ಯಾಯಪಥ’ ವಾರಪತ್ರಿಕೆಯ ಸಂಪಾದಕರಾದ ಡಿ.ಎನ್‌.ಗುರುಪ್ರಸಾದ್ ಹಾಜರಿದ್ದರು. ಅರಿವು ಶಾಲೆಯ ಮನೋಹರ್‌ ಕಾರ್ಯಕ್ರಮ ನಿರೂಪಿಸಿದರು.


ಇದನ್ನೂ ಓದಿರಿ: ವಿಪರೀತದ ಬೆಳಗು ಫುಲೆ ಮಾರ್ಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...