Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...