Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...