Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...