Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...