Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...