Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...