Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...