Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...