Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...