Homeಕರ್ನಾಟಕಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಚಿ.ಉದಯಶಂಕರ್‌ ಅವರು ಬರೆದ ಹಾಡನ್ನು ಆರ್‌.ಎನ್‌.ಜಯಗೋಪಾಲ್‌ ಹೆಸರಲ್ಲಿ ನೂತನ ಪಠ್ಯಪುಸ್ತಕದಲ್ಲಿ ಪ್ರಕಟಿಸಲಾಗಿದೆ.

- Advertisement -
- Advertisement -

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಟ್ರೋಲ್‌ಗಳಿಂದ ಹೆಸರಾಗಿದ್ದ ರೋಹಿತ್‌ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಪಠ್ಯಪುಸ್ತಕಗಳಲ್ಲಿ ಸಾಲು ಸಾಲು ತಪ್ಪುಗಳು ಕಂಡುಬರುತ್ತಿದ್ದು, “ಆಡಿಸಿ ನೋಡು, ಬೀಳಿಸಿ ನೋಡು” ಹಾಡು ಬರೆದವರ ಹೆಸರನ್ನೇ ತಪ್ಪಾಗಿ ಪ್ರಕಟಿಸಲಾಗಿದೆ.

ಏಳನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಪದ್ಯವನ್ನು ಪೂರಕ ಪಠ್ಯವಾಗಿ ರೋಹಿತ್ ಚಕ್ರತೀರ್ಥ ಸಮಿತಿ ನೀಡಿದೆ. ಅದನ್ನು ಬರೆದವರು ‘ಆರ್‌.ಎನ್‌.ಜಯಗೋಪಾಲ್‌’ ಎಂದು ತಿಳಿಸಿ ಕವಿ ಪರಿಚಯವನ್ನೂ ನೀಡಲಾಗಿದೆ. ವಾಸ್ತವದಲ್ಲಿ ಇದನ್ನು ಬರೆದವರು ಖ್ಯಾತ ಗೀತರಚನಾಕಾರ ಚಿ.ಉದಯಶಂಕರ್‌ ಎಂಬುದು ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ, ಸಿನಿಮಾ ನಿರ್ದೇಶಕರು ಆದ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆ ಈ ಹಿಂದೆ ಪರಿಷ್ಕರಣೆಗೊಂಡಿದ್ದ ಪಠ್ಯದಲ್ಲಿ ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಪೂರಕ ಪಠ್ಯವಾಗಿ ನೀಡಲಾಗಿತ್ತು. ಅದರ ಬದಲಾಗಿ ಆರ್‌.ಎನ್‌.ಜಯಗೋಪಾಲ್‌ ಪಠ್ಯವನ್ನು ನೀಡಲು ಹೋಗಿರುವ ಚಕ್ರತೀರ್ತ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ಎಡವಟ್ಟು ಮಾಡಿಕೊಂಡಿದೆ. ‘ಗೊಂಬೆ ಕಲಿಸುವ ನೀತಿ’ ಶೀರ್ಷಿಕೆಯಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡನ್ನು ಮುದ್ರಣಕ್ಕೆ ಕಳುಹಿಸಲಾಗಿದ್ದು, ಇದನ್ನು ಬರೆದದ್ದು ಚಿ.ಉದಯಶಂಕರ್‌ ಆಗಿದ್ದಾರೆ. ಆದರೆ ಪಠ್ಯದಲ್ಲಿ ಆರ್‌.ಎನ್‌.ಜಯಗೋಪಾಲ್‌ ಅವರ ಹೆಸರು ಹಾಗೂ ಪರಿಚಯವನ್ನು ಮಾಡಿಕೊಡಲಾಗಿದೆ.

‘ಆಡಿಸಿ ನೋಡು, ಬೀಳಿಸಿ ನೋಡು’ ಹಾಡು ಕನ್ನಡಿಗರ ಜನಮನಗೆದ್ದ ‘ಕಸ್ತೂರಿ ನಿವಾಸ’ದಲ್ಲಿದೆ. ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿದ್ದ ಈ ಸಿನಿಮಾವನ್ನು ಕನ್ನಡಿಗರು ಎಂದಿಗೂ ಮರೆಯಲಾರರು. ಈ ಸಿನಿಮಾಕ್ಕೆ ಹಾಡುಗಳನ್ನು ಮೂವರು ಚಿತ್ರಸಾಹಿತಿಗಳು ರಚನೆ ಮಾಡಿದ್ದಾರೆ. ಚಿ.ಉದಯಶಂಕರ್‌ ಅವರೇ ಹೆಚ್ಚಿನ ಹಾಡುಗಳನ್ನು ರಚಿಸಿದ್ದು, ಆರ್‌.ಎನ್‌.ಜಯಗೋಪಾಲ್‌ ಹಾಗೂ ವಿಜಯ ನಾರಸಿಂಹ ಅವರು ಕೆಲವು ಹಾಡುಗಳನ್ನು ಬರೆದಿದ್ದಾರೆ. ಆದರೆ ‘ಆಡಿಸಿ ನೋಡು, ಬೀಳಿಸಿ ನೋಡು’ ಬರೆದವರು ಚಿ.ಉದಯಶಂಕರ್‌ ಎಂಬ ಮಾಹಿತಿ ವಿಕಿಪಿಡಿಯಾದಲ್ಲೂ ಕೂಡ ಲಭ್ಯವಿದೆ. ಅಧಿಕೃತ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಅಪ್‌ಲೋಡ್‌ ಮಾಡಲಾಗಿರುವ ವಿಡಿಯೊಗಳಲ್ಲೂ ಇದೇ ಮಾಹಿತಿ ಇದೆ.

ಹಂಸಲೇಖ ಅವರು ಬರೆದ ‘ಈ ಭೂಮಿ ಬಣ್ಣದ ಬುಗುರಿ’ ಹಾಡನ್ನು ಈ ಹಿಂದಿನ ಪಠ್ಯದಲ್ಲಿ ನೀಡಲಾಗಿತ್ತು. ಹಂಸಲೇಖ ಅವರು ‘ಮಾಂಸಾಹಾರ ಹಾಗೂ ಅಸ್ಪಶ್ಯತೆ’ ಕುರಿತು ಮಾತನಾಡುತ್ತಾ, ಪೇಜಾವರ ಶ್ರೀಗಳನ್ನು ಉಲ್ಲೇಖಿಸಿದ್ದಕ್ಕೆ ದೊಡ್ಡ ಮಟ್ಟದ ವಿರೋಧವನ್ನು ಒಂದು ವರ್ಗದ ಜನರು ತೋರಿದ್ದರು. ಆ ನಂತರದಲ್ಲಿ ‘ಬಾಡೇ ನಮ್‌ ಗಾಡು’ ಎಂಬ ಅಭಿಯಾನವೂ ನಡೆದಿತ್ತು. ಹಂಸಲೇಖ ಅವರ ಕೆಲವರು ದೂರು ನೀಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹವರನ್ನ ನಾವು ನೀಡುವ ತೆರಿಗೆ ಹಣದಲ್ಲಿ ಪೋಷಣೆ ಮಾಡುತ್ತಿದೆಯಲ್ಲಾ ನಾಚಿಗೆಗೆಟ್ಟ ಸರ್ಕಾರ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...