Homeಮುಖಪುಟಆದಿತ್ಯ ಎಲ್ -1: ಭೂಬಂಧಿತ 3ನೇ ಕಾರ್ಯಾಚರಣೆ ಯಶಸ್ವಿ

ಆದಿತ್ಯ ಎಲ್ -1: ಭೂಬಂಧಿತ 3ನೇ ಕಾರ್ಯಾಚರಣೆ ಯಶಸ್ವಿ

- Advertisement -
- Advertisement -

ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಆದಿತ್ಯ ಎಲ್ -1 ಬಾಹ್ಯಾಕಾಶ ನೌಕೆಯು ಭಾನುವಾರ ನಸುಕಿನ ವೇಳೆ 3ನೇ ಭೂಬಂಧಿತ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಈಗ ಆದಿತ್ಯ ಭೂಮಿಯಿಂದ 296 ಕಿ.ಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು, ಮಾರಿಷಸ್, ಎಸ್‌ಡಿಎಸ್‌ಸಿ-ಎಸ್‌ಎಚ್‌ಎಆರ್ ಮತ್ತು ಪೋರ್ಟ್‌ ಬೇರ್‌ನಲ್ಲಿರುವ ಇಸ್ರೋ ಕೇಂದ್ರಗಳಲ್ಲಿ ಟ್ರ್ಯಾಕ್ ಮಾಡಲಾಗಿದೆ. ಮುಂದಿನ (ನಾಲ್ಕನೆ ಹಂತದ ಕಕ್ಕೆ ಬದಲಾವಣೆ ಸಪ್ಟೆಂಬರ್ 15ರಂದು ನಿಗದಿಯಾಗಿದೆ.

ಸೆಪ್ಟೆಂಬರ್ 2ರಂದು ಸೂರ್ಯನ ಅಧ್ಯಯನದ ಉದ್ದೇಶದ ಭಾರತದ ಮಹತ್ವಾಕಾಂಕ್ಷೆಯ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್ ಅನ್ನು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉದ್ಯಯನ ಮಾಡಲಾಗಿತ್ತು.

ಭೂಮಿಯಿಂದ 15 ಲಕ್ಷ ಕಿ.ಮೀ. ದೂರದಲ್ಲಿರುವ ಅಗ್ರಾಂಜಿಯನ್ ಬಿಂದುವಿನಲ್ಲಿ ಆದಿಶ್ಯ ಎಲ್-1 ಅಂತರಿಕ ವೀಕ್ಷಣಾಲಯವನ್ನು ಇರಿಸಲಾಗುವುದು. 125 ದಿನಗಳಲ್ಲಿ ಎಲ್-1 ಬಿಂದುವಿಗೆ ಸೇರಿಸಲಾಗುತ್ತದೆ.

ಆದಿತ್ಯ-ಎಲ್1 ಮಿಷನ್ ಸೆಪ್ಟೆಂಬರ್ 2ರಂದು ಉಡಾವಣೆಗೊಂಡಿತ್ತು. ಈ ಉಪಗ್ರಹ ಇದೀಗ 296 ಕಿಲೋಮೀಟರ್ 71767 ಕಿಲೋಮೀಟರ್ ಕಕ್ಷೆಯಲ್ಲಿದ್ದು, ಸೆಪ್ಟೆಂಬರ್ 15ರಂದು ಮುಂಜಾನೆ 2 ಗಂಟೆಗೆ ಮುಂದಿನ ಭೂಬಂಧಿತ ಕಾರ್ಯಾಚರಣೆ ನಡೆಯಲಿದೆ ಎಂದು ಇಸ್ರೋ ಸ್ಪಷ್ಟಪಡಿಸಿದೆ. ಸೆಪ್ಟೆಂಬರ್ 15ರ ಕಾರ್ಯಾಚರಣೆ ಸೇರಿದಂತೆ ಆದಿತ್ಯ ಎಲ್-1 ಇಂಥ ಎರಡು ಕಾರ್ಯಾಚರಣೆಗಳನ್ನು ಹೊಂದಿದ್ದು, ಎಲ್1 ತಾಣದತ್ತ ತನ್ನ ಪಯಣದ ಅಗತ್ಯ ವೇಗವರ್ಧನೆಯನ್ನು ಗಳಿಸಿಕೊಳ್ಳಲು ಇದು ಅಗತ್ಯವಾಗಿದೆ.

ಉಡಾವಣೆಯ 16 ದಿನಗಳಲ್ಲಿ ಭೂಬಂಧಿತ ಕಾರ್ಯಾಚರಣೆಗಳು ಪೂರ್ಣಗೊಂಡ ಬಳಿಕ ಆದಿತ್ಯ ಎಲ್-1 ಟಿಎಲ್1 ಕಾರ್ಯಾಚರಣೆಗೆ ಒಳಗಾಗಲಿದೆ. ಇದು ಎಲ್1ನ 110 ದಿನಗಳ ಪಥದ ಆರಂಭ ಎನಿಸಲಿದೆ.

ಇದನ್ನೂ ಓದಿ: ಭಾರತದ ಮೊದಲ ಸೌರ ಮಿಷನ್ ಆದಿತ್ಯ-ಎಲ್ 1 ಯಶಸ್ವಿಯಾಗಿ ಉಡಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...