Homeಮುಖಪುಟಆದಿತ್ಯ ಎಲ್ -1: ಭೂಬಂಧಿತ 3ನೇ ಕಾರ್ಯಾಚರಣೆ ಯಶಸ್ವಿ

ಆದಿತ್ಯ ಎಲ್ -1: ಭೂಬಂಧಿತ 3ನೇ ಕಾರ್ಯಾಚರಣೆ ಯಶಸ್ವಿ

- Advertisement -
- Advertisement -

ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಆದಿತ್ಯ ಎಲ್ -1 ಬಾಹ್ಯಾಕಾಶ ನೌಕೆಯು ಭಾನುವಾರ ನಸುಕಿನ ವೇಳೆ 3ನೇ ಭೂಬಂಧಿತ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಈಗ ಆದಿತ್ಯ ಭೂಮಿಯಿಂದ 296 ಕಿ.ಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು, ಮಾರಿಷಸ್, ಎಸ್‌ಡಿಎಸ್‌ಸಿ-ಎಸ್‌ಎಚ್‌ಎಆರ್ ಮತ್ತು ಪೋರ್ಟ್‌ ಬೇರ್‌ನಲ್ಲಿರುವ ಇಸ್ರೋ ಕೇಂದ್ರಗಳಲ್ಲಿ ಟ್ರ್ಯಾಕ್ ಮಾಡಲಾಗಿದೆ. ಮುಂದಿನ (ನಾಲ್ಕನೆ ಹಂತದ ಕಕ್ಕೆ ಬದಲಾವಣೆ ಸಪ್ಟೆಂಬರ್ 15ರಂದು ನಿಗದಿಯಾಗಿದೆ.

ಸೆಪ್ಟೆಂಬರ್ 2ರಂದು ಸೂರ್ಯನ ಅಧ್ಯಯನದ ಉದ್ದೇಶದ ಭಾರತದ ಮಹತ್ವಾಕಾಂಕ್ಷೆಯ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್ ಅನ್ನು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉದ್ಯಯನ ಮಾಡಲಾಗಿತ್ತು.

ಭೂಮಿಯಿಂದ 15 ಲಕ್ಷ ಕಿ.ಮೀ. ದೂರದಲ್ಲಿರುವ ಅಗ್ರಾಂಜಿಯನ್ ಬಿಂದುವಿನಲ್ಲಿ ಆದಿಶ್ಯ ಎಲ್-1 ಅಂತರಿಕ ವೀಕ್ಷಣಾಲಯವನ್ನು ಇರಿಸಲಾಗುವುದು. 125 ದಿನಗಳಲ್ಲಿ ಎಲ್-1 ಬಿಂದುವಿಗೆ ಸೇರಿಸಲಾಗುತ್ತದೆ.

ಆದಿತ್ಯ-ಎಲ್1 ಮಿಷನ್ ಸೆಪ್ಟೆಂಬರ್ 2ರಂದು ಉಡಾವಣೆಗೊಂಡಿತ್ತು. ಈ ಉಪಗ್ರಹ ಇದೀಗ 296 ಕಿಲೋಮೀಟರ್ 71767 ಕಿಲೋಮೀಟರ್ ಕಕ್ಷೆಯಲ್ಲಿದ್ದು, ಸೆಪ್ಟೆಂಬರ್ 15ರಂದು ಮುಂಜಾನೆ 2 ಗಂಟೆಗೆ ಮುಂದಿನ ಭೂಬಂಧಿತ ಕಾರ್ಯಾಚರಣೆ ನಡೆಯಲಿದೆ ಎಂದು ಇಸ್ರೋ ಸ್ಪಷ್ಟಪಡಿಸಿದೆ. ಸೆಪ್ಟೆಂಬರ್ 15ರ ಕಾರ್ಯಾಚರಣೆ ಸೇರಿದಂತೆ ಆದಿತ್ಯ ಎಲ್-1 ಇಂಥ ಎರಡು ಕಾರ್ಯಾಚರಣೆಗಳನ್ನು ಹೊಂದಿದ್ದು, ಎಲ್1 ತಾಣದತ್ತ ತನ್ನ ಪಯಣದ ಅಗತ್ಯ ವೇಗವರ್ಧನೆಯನ್ನು ಗಳಿಸಿಕೊಳ್ಳಲು ಇದು ಅಗತ್ಯವಾಗಿದೆ.

ಉಡಾವಣೆಯ 16 ದಿನಗಳಲ್ಲಿ ಭೂಬಂಧಿತ ಕಾರ್ಯಾಚರಣೆಗಳು ಪೂರ್ಣಗೊಂಡ ಬಳಿಕ ಆದಿತ್ಯ ಎಲ್-1 ಟಿಎಲ್1 ಕಾರ್ಯಾಚರಣೆಗೆ ಒಳಗಾಗಲಿದೆ. ಇದು ಎಲ್1ನ 110 ದಿನಗಳ ಪಥದ ಆರಂಭ ಎನಿಸಲಿದೆ.

ಇದನ್ನೂ ಓದಿ: ಭಾರತದ ಮೊದಲ ಸೌರ ಮಿಷನ್ ಆದಿತ್ಯ-ಎಲ್ 1 ಯಶಸ್ವಿಯಾಗಿ ಉಡಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...