Homeಮುಖಪುಟಆದಿತ್ಯ ಎಲ್ -1: ಭೂಬಂಧಿತ 3ನೇ ಕಾರ್ಯಾಚರಣೆ ಯಶಸ್ವಿ

ಆದಿತ್ಯ ಎಲ್ -1: ಭೂಬಂಧಿತ 3ನೇ ಕಾರ್ಯಾಚರಣೆ ಯಶಸ್ವಿ

- Advertisement -
- Advertisement -

ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಆದಿತ್ಯ ಎಲ್ -1 ಬಾಹ್ಯಾಕಾಶ ನೌಕೆಯು ಭಾನುವಾರ ನಸುಕಿನ ವೇಳೆ 3ನೇ ಭೂಬಂಧಿತ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಈಗ ಆದಿತ್ಯ ಭೂಮಿಯಿಂದ 296 ಕಿ.ಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು, ಮಾರಿಷಸ್, ಎಸ್‌ಡಿಎಸ್‌ಸಿ-ಎಸ್‌ಎಚ್‌ಎಆರ್ ಮತ್ತು ಪೋರ್ಟ್‌ ಬೇರ್‌ನಲ್ಲಿರುವ ಇಸ್ರೋ ಕೇಂದ್ರಗಳಲ್ಲಿ ಟ್ರ್ಯಾಕ್ ಮಾಡಲಾಗಿದೆ. ಮುಂದಿನ (ನಾಲ್ಕನೆ ಹಂತದ ಕಕ್ಕೆ ಬದಲಾವಣೆ ಸಪ್ಟೆಂಬರ್ 15ರಂದು ನಿಗದಿಯಾಗಿದೆ.

ಸೆಪ್ಟೆಂಬರ್ 2ರಂದು ಸೂರ್ಯನ ಅಧ್ಯಯನದ ಉದ್ದೇಶದ ಭಾರತದ ಮಹತ್ವಾಕಾಂಕ್ಷೆಯ ಆದಿತ್ಯ ಎಲ್1 ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್ ಅನ್ನು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉದ್ಯಯನ ಮಾಡಲಾಗಿತ್ತು.

ಭೂಮಿಯಿಂದ 15 ಲಕ್ಷ ಕಿ.ಮೀ. ದೂರದಲ್ಲಿರುವ ಅಗ್ರಾಂಜಿಯನ್ ಬಿಂದುವಿನಲ್ಲಿ ಆದಿಶ್ಯ ಎಲ್-1 ಅಂತರಿಕ ವೀಕ್ಷಣಾಲಯವನ್ನು ಇರಿಸಲಾಗುವುದು. 125 ದಿನಗಳಲ್ಲಿ ಎಲ್-1 ಬಿಂದುವಿಗೆ ಸೇರಿಸಲಾಗುತ್ತದೆ.

ಆದಿತ್ಯ-ಎಲ್1 ಮಿಷನ್ ಸೆಪ್ಟೆಂಬರ್ 2ರಂದು ಉಡಾವಣೆಗೊಂಡಿತ್ತು. ಈ ಉಪಗ್ರಹ ಇದೀಗ 296 ಕಿಲೋಮೀಟರ್ 71767 ಕಿಲೋಮೀಟರ್ ಕಕ್ಷೆಯಲ್ಲಿದ್ದು, ಸೆಪ್ಟೆಂಬರ್ 15ರಂದು ಮುಂಜಾನೆ 2 ಗಂಟೆಗೆ ಮುಂದಿನ ಭೂಬಂಧಿತ ಕಾರ್ಯಾಚರಣೆ ನಡೆಯಲಿದೆ ಎಂದು ಇಸ್ರೋ ಸ್ಪಷ್ಟಪಡಿಸಿದೆ. ಸೆಪ್ಟೆಂಬರ್ 15ರ ಕಾರ್ಯಾಚರಣೆ ಸೇರಿದಂತೆ ಆದಿತ್ಯ ಎಲ್-1 ಇಂಥ ಎರಡು ಕಾರ್ಯಾಚರಣೆಗಳನ್ನು ಹೊಂದಿದ್ದು, ಎಲ್1 ತಾಣದತ್ತ ತನ್ನ ಪಯಣದ ಅಗತ್ಯ ವೇಗವರ್ಧನೆಯನ್ನು ಗಳಿಸಿಕೊಳ್ಳಲು ಇದು ಅಗತ್ಯವಾಗಿದೆ.

ಉಡಾವಣೆಯ 16 ದಿನಗಳಲ್ಲಿ ಭೂಬಂಧಿತ ಕಾರ್ಯಾಚರಣೆಗಳು ಪೂರ್ಣಗೊಂಡ ಬಳಿಕ ಆದಿತ್ಯ ಎಲ್-1 ಟಿಎಲ್1 ಕಾರ್ಯಾಚರಣೆಗೆ ಒಳಗಾಗಲಿದೆ. ಇದು ಎಲ್1ನ 110 ದಿನಗಳ ಪಥದ ಆರಂಭ ಎನಿಸಲಿದೆ.

ಇದನ್ನೂ ಓದಿ: ಭಾರತದ ಮೊದಲ ಸೌರ ಮಿಷನ್ ಆದಿತ್ಯ-ಎಲ್ 1 ಯಶಸ್ವಿಯಾಗಿ ಉಡಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...