Homeಮುಖಪುಟಮೊದಲ ಬಾರಿಗೆ ಚುನಾವಣಾ ಕಣಕ್ಕೆ ಠಾಕ್ರೆ ಕುಟುಂಬ? : ವರ್ಲಿ ಕ್ಷೇತ್ರದಿಂದ ಆದಿತ್ಯ ಠಾಕ್ರೆ ಸ್ಪರ್ಧೆ!

ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಠಾಕ್ರೆ ಕುಟುಂಬ? : ವರ್ಲಿ ಕ್ಷೇತ್ರದಿಂದ ಆದಿತ್ಯ ಠಾಕ್ರೆ ಸ್ಪರ್ಧೆ!

- Advertisement -
- Advertisement -

ಮಹರಾಷ್ಟ್ರದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಠಾಕ್ರೆ ಕುಟುಂಬ ಚುನಾವಣಾ ಕಣಕ್ಕಿಳಿಯುತ್ತಿರವ ಬಗ್ಗೆ ವರದಿಯಾಗುತ್ತಿದೆ. ಅಕ್ಟೋಬರ್ ೨೧ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹಿರಿಯ ಮಗ ಆದಿತ್ಯ ಠಾಕ್ರೆ ವರ್ಲಿ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಉಹಾಪೋಹಗಳು ಎದ್ದಿವೆ.

ವರ್ಲಿಯನ್ನು ಶಿವಸೇನೆಗೆ ಸುರಕ್ಷಿತ ಕ್ಷೇತ್ರವೆಂದು ಪರಿಗಣಿಸಲಾಗಿದ್ದು, ಈ ಸುದ್ದಿ ನಿಜವಾದಲ್ಲಿ ಆದಿತ್ಯ ಠಾಕ್ರೆ ಅವರು ಠಾಕ್ರೆ ಕುಟುಂಬದ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲ ಸದಸ್ಯರಾಗಲಿದ್ದಾರೆ.

“ವರ್ಲಿ ವಿಧಾನಸಭಾ ಕ್ಷೇತ್ರಕ್ಕೆ ಆದಿತ್ಯ ಠಾಕ್ರೆ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಹಾಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಿವಸೇನೆಯ ಶಾಸಕ ಸುನಿಲ್ ಶಿಂಧೆಯವರು ಆದಿತ್ಯ ಠಾಕ್ರೆಗಾಗಿ ಸ್ಥಾನವನ್ನು ಖಾಲಿ ಮಾಡುತ್ತಾರೆ” ಎಂದು ಶಿವಸೇನೆ ಮುಖ್ಯಸ್ಥರ ಆಪ್ತ ಸಹಾಯಕರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ವರ್ಲಿಯನ್ನು ಶಿವಸೇನೆಯ ಸುರಕ್ಷಿತ ಕ್ಷೇತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ, ಆದ್ದರಿಂದ ಆದಿತ್ಯ ಅವರ ಉಮೇದುವಾರಿಕೆಯನ್ನು ಅಂತಿಮಗೊಳಿಸಲಾಗಿದೆ. ಮಾಜಿ ಎನ್‌ಸಿಪಿ ನಾಯಕ ಸಚಿನ್ ಅಹಿರ್ ಇತ್ತೀಚೆಗೆ ಶಿವಸೇನೆ ಸೇರಿದ್ದಾರೆ. ಹಾಗಾಗಿ ಇದು ಠಾಕ್ರೆ ಅವರ ಗೆಲುವನ್ನು ಸುಲಭಗೊಳಿಸುತ್ತದೆ” ಎಂದು ಅವರು ಹೇಳಿದ್ದಾರೆ. ಸಚಿನ್ ಅಹಿರ್ ಅವರು 2014 ರ ವಿಧಾನಸಭಾ ಚುನಾವಣೆಯಲ್ಲಿ ಸುನಿಲ್ ಶಿಂಧೆ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

1966 ರಲ್ಲಿ ದಿವಂಗತ ಬಾಳ್ ಠಾಕ್ರೆ ಅವರು ಶಿವಸೇನೆ ಸ್ಥಾಪಿಸಿದಾಗಿನಿಂದ, ಕುಟುಂಬದ ಯಾವುದೇ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಅಥವಾ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಲಿಲ್ಲ. ಆದರೆ ಅವರು ಶಿವಸೇನೆಯ ರಾಜಕೀಯವನ್ನು ತಮ್ಮ ಕೈಯಲ್ಲಿಟ್ಟುಕೊಂಡು ನಡೆಸಿದ್ದಾರೆ.

ಉದ್ಧವ್ ಠಾಕ್ರೆ ಅವರ ಸೋದರಸಂಬಂಧಿಯು ಮತ್ತು ವಿರೋಧಿಯೂ ಆದ ಮಹಾರಾಷ್ಟ್ರ ನವನಿರ್ಮಾಣ್ ಸೇನೆಯ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು 2014 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಪ್ರಕಟಿಸಿದ್ದರು. ಆದರೆ, ನಂತರ ಅವರು ಮನಸ್ಸು ಬದಲಾಯಿಸಿದ್ದರು.

ಮುಂದಿನ ತಿಂಗಳ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಶಿವಸೇನೆ. ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಇನ್ನು ಚಾಲ್ತಿಯಲ್ಲಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ‘ಶಿವ ಸೈನಿಕ್’ (ಪಕ್ಷದ ಕಾರ್ಯಕರ್ತ) ಯನ್ನು ಘೋಷಿಸುವುದಾಗಿ ತಮ್ಮ ದಿವಂಗತ ತಂದೆ ಬಾಲ್ ಠಾಕ್ರೆ ಅವರಿಗೆ ನೀಡಿದ “ಭರವಸೆಯನ್ನು” ಉದ್ಧವ್ ಠಾಕ್ರೆ ಶನಿವಾರ ನೆನಪಿಸಿಕೊಂಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ಬೆಂಬಲಕ್ಕೆ ಧನ್ಯವಾದ ತಿಳಿಸಲು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಜನರ ಬೆಂಬಲವನ್ನು ಕೋರಲು ಜುಲೈನಲ್ಲಿ ಆದಿತ್ಯ ಠಾಕ್ರೆ ರಾಜ್ಯವ್ಯಾಪಿ ‘ಜನ ಆಶೀರ್ವಾಡ್ ಯಾತ್ರೆ’ ನಡೆಸಿದ್ದರು.

2014 ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಸ್ಥಾನ ಹಂಚಿಕೆಯಲ್ಲಿ ಭಿನ್ನಾಭಿಪ್ರಾಯ ಬಂದ ಕಾರಣ ಪ್ರತ್ಯೇಕವಾಗಿಯೇ ಸ್ಪರ್ಧಿಸಿದ್ದರು. ಬಿಜೆಪಿ ಸ್ಪರ್ಧಿಸಿದ 260 ಸ್ಥಾನಗಳಲ್ಲಿ 122 ಸ್ಥಾನಗಳನ್ನು ಗೆದ್ದರೆ, ಸೇನಾ 282 ಸ್ಥಾನಗಳಲ್ಲಿ 63 ಸ್ಥಾನಗಳನ್ನು ಗಳಿಸಿತ್ತು. ನಂತರ ಎರಡೂ ಪಕ್ಷಗಳು ಕೈಜೋಡಿಸಿ ಬಿಜೆಪಿ ನೇತೃತ್ವದ ಸರ್ಕಾರ ರಚಿಸಿದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...