Homeಮುಖಪುಟಮೊದಲ ಬಾರಿಗೆ ಚುನಾವಣಾ ಕಣಕ್ಕೆ ಠಾಕ್ರೆ ಕುಟುಂಬ? : ವರ್ಲಿ ಕ್ಷೇತ್ರದಿಂದ ಆದಿತ್ಯ ಠಾಕ್ರೆ ಸ್ಪರ್ಧೆ!

ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಠಾಕ್ರೆ ಕುಟುಂಬ? : ವರ್ಲಿ ಕ್ಷೇತ್ರದಿಂದ ಆದಿತ್ಯ ಠಾಕ್ರೆ ಸ್ಪರ್ಧೆ!

- Advertisement -
- Advertisement -

ಮಹರಾಷ್ಟ್ರದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಠಾಕ್ರೆ ಕುಟುಂಬ ಚುನಾವಣಾ ಕಣಕ್ಕಿಳಿಯುತ್ತಿರವ ಬಗ್ಗೆ ವರದಿಯಾಗುತ್ತಿದೆ. ಅಕ್ಟೋಬರ್ ೨೧ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹಿರಿಯ ಮಗ ಆದಿತ್ಯ ಠಾಕ್ರೆ ವರ್ಲಿ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಉಹಾಪೋಹಗಳು ಎದ್ದಿವೆ.

ವರ್ಲಿಯನ್ನು ಶಿವಸೇನೆಗೆ ಸುರಕ್ಷಿತ ಕ್ಷೇತ್ರವೆಂದು ಪರಿಗಣಿಸಲಾಗಿದ್ದು, ಈ ಸುದ್ದಿ ನಿಜವಾದಲ್ಲಿ ಆದಿತ್ಯ ಠಾಕ್ರೆ ಅವರು ಠಾಕ್ರೆ ಕುಟುಂಬದ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲ ಸದಸ್ಯರಾಗಲಿದ್ದಾರೆ.

“ವರ್ಲಿ ವಿಧಾನಸಭಾ ಕ್ಷೇತ್ರಕ್ಕೆ ಆದಿತ್ಯ ಠಾಕ್ರೆ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಹಾಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಿವಸೇನೆಯ ಶಾಸಕ ಸುನಿಲ್ ಶಿಂಧೆಯವರು ಆದಿತ್ಯ ಠಾಕ್ರೆಗಾಗಿ ಸ್ಥಾನವನ್ನು ಖಾಲಿ ಮಾಡುತ್ತಾರೆ” ಎಂದು ಶಿವಸೇನೆ ಮುಖ್ಯಸ್ಥರ ಆಪ್ತ ಸಹಾಯಕರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ವರ್ಲಿಯನ್ನು ಶಿವಸೇನೆಯ ಸುರಕ್ಷಿತ ಕ್ಷೇತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ, ಆದ್ದರಿಂದ ಆದಿತ್ಯ ಅವರ ಉಮೇದುವಾರಿಕೆಯನ್ನು ಅಂತಿಮಗೊಳಿಸಲಾಗಿದೆ. ಮಾಜಿ ಎನ್‌ಸಿಪಿ ನಾಯಕ ಸಚಿನ್ ಅಹಿರ್ ಇತ್ತೀಚೆಗೆ ಶಿವಸೇನೆ ಸೇರಿದ್ದಾರೆ. ಹಾಗಾಗಿ ಇದು ಠಾಕ್ರೆ ಅವರ ಗೆಲುವನ್ನು ಸುಲಭಗೊಳಿಸುತ್ತದೆ” ಎಂದು ಅವರು ಹೇಳಿದ್ದಾರೆ. ಸಚಿನ್ ಅಹಿರ್ ಅವರು 2014 ರ ವಿಧಾನಸಭಾ ಚುನಾವಣೆಯಲ್ಲಿ ಸುನಿಲ್ ಶಿಂಧೆ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

1966 ರಲ್ಲಿ ದಿವಂಗತ ಬಾಳ್ ಠಾಕ್ರೆ ಅವರು ಶಿವಸೇನೆ ಸ್ಥಾಪಿಸಿದಾಗಿನಿಂದ, ಕುಟುಂಬದ ಯಾವುದೇ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಅಥವಾ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಲಿಲ್ಲ. ಆದರೆ ಅವರು ಶಿವಸೇನೆಯ ರಾಜಕೀಯವನ್ನು ತಮ್ಮ ಕೈಯಲ್ಲಿಟ್ಟುಕೊಂಡು ನಡೆಸಿದ್ದಾರೆ.

ಉದ್ಧವ್ ಠಾಕ್ರೆ ಅವರ ಸೋದರಸಂಬಂಧಿಯು ಮತ್ತು ವಿರೋಧಿಯೂ ಆದ ಮಹಾರಾಷ್ಟ್ರ ನವನಿರ್ಮಾಣ್ ಸೇನೆಯ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು 2014 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಪ್ರಕಟಿಸಿದ್ದರು. ಆದರೆ, ನಂತರ ಅವರು ಮನಸ್ಸು ಬದಲಾಯಿಸಿದ್ದರು.

ಮುಂದಿನ ತಿಂಗಳ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಶಿವಸೇನೆ. ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಇನ್ನು ಚಾಲ್ತಿಯಲ್ಲಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ‘ಶಿವ ಸೈನಿಕ್’ (ಪಕ್ಷದ ಕಾರ್ಯಕರ್ತ) ಯನ್ನು ಘೋಷಿಸುವುದಾಗಿ ತಮ್ಮ ದಿವಂಗತ ತಂದೆ ಬಾಲ್ ಠಾಕ್ರೆ ಅವರಿಗೆ ನೀಡಿದ “ಭರವಸೆಯನ್ನು” ಉದ್ಧವ್ ಠಾಕ್ರೆ ಶನಿವಾರ ನೆನಪಿಸಿಕೊಂಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ಬೆಂಬಲಕ್ಕೆ ಧನ್ಯವಾದ ತಿಳಿಸಲು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಜನರ ಬೆಂಬಲವನ್ನು ಕೋರಲು ಜುಲೈನಲ್ಲಿ ಆದಿತ್ಯ ಠಾಕ್ರೆ ರಾಜ್ಯವ್ಯಾಪಿ ‘ಜನ ಆಶೀರ್ವಾಡ್ ಯಾತ್ರೆ’ ನಡೆಸಿದ್ದರು.

2014 ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಸ್ಥಾನ ಹಂಚಿಕೆಯಲ್ಲಿ ಭಿನ್ನಾಭಿಪ್ರಾಯ ಬಂದ ಕಾರಣ ಪ್ರತ್ಯೇಕವಾಗಿಯೇ ಸ್ಪರ್ಧಿಸಿದ್ದರು. ಬಿಜೆಪಿ ಸ್ಪರ್ಧಿಸಿದ 260 ಸ್ಥಾನಗಳಲ್ಲಿ 122 ಸ್ಥಾನಗಳನ್ನು ಗೆದ್ದರೆ, ಸೇನಾ 282 ಸ್ಥಾನಗಳಲ್ಲಿ 63 ಸ್ಥಾನಗಳನ್ನು ಗಳಿಸಿತ್ತು. ನಂತರ ಎರಡೂ ಪಕ್ಷಗಳು ಕೈಜೋಡಿಸಿ ಬಿಜೆಪಿ ನೇತೃತ್ವದ ಸರ್ಕಾರ ರಚಿಸಿದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...