Homeಮುಖಪುಟಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಹುಲ್ ಗಾಂಧಿ ಮತ್ತು ಆದಿತ್ಯನಾಥ್ ಅವರನ್ನು ಸಮೀಕರಿಸಿದ್ದು, “ಎಡಪಕ್ಷಗಳ ವಿಚಾರದಲ್ಲಿ ಇಬ್ಬರ ಭಾವನೆಯೂ ಒಂದೇ” ಎಂದು ಹೇಳಿದ್ದಾರೆ.

“ವಯನಾಡ್ ಸಂಸದ ರಾಹುಲ್‌ ಗಾಂಧಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಕೇರಳದ ಬಗ್ಗೆ ಭಿನ್ನ ದೃಷ್ಟಿಕೋನ ಹೊಂದಿರಬಹುದು; ಆದರೆ ಎಡಪಕ್ಷಗಳ ವಿಚಾರದಲ್ಲಿ ಇಬ್ಬರ ಭಾವನೆಯೂ ಒಂದೇ; ಆ ವಿಚಾರದಲ್ಲಿ ಅವರು ಒಗ್ಗಟ್ಟಾಗಿದ್ದಾರೆ” ಎಂದು ಪಿಣರಾಯಿ ವಿಜಯನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಕೇರಳಕ್ಕೆ ಭೇಟಿ ನೀಡಿದ್ದ ಇಬ್ಬರೂ ಮುಖಂಡರು ಎಡಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದ್ದನ್ನು ಉಲ್ಲೇಖಿಸಿದ ಪಿಣರಾಯಿ ವಿಜಯನ್, “ರಾಹುಲ್‌ ಗಾಂಧಿ ಕೇರಳಕ್ಕೆ ಬಂದು ರೈತರ ಟ್ರ್ಯಾಕ್ಟರ್ ಚಾಲನೆ ಮಾಡಿದ್ದಾರೆ; ಸಮುದ್ರದಲ್ಲಿ ಮೀನುಗಾರರ ಜತೆ ಈಜಿದ್ದಾರೆ; ಆದರೆ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿರ್ಲಕ್ಷಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

ವಯನಾಡ್‌ನಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಭಾಗವಹಿಸಿ ಸ್ವತಃ ಟ್ರ್ಯಾಕ್ಟರ್ ಚಾಲನೆ ಮಾಡಿದ್ದ ರಾಹುಲ್, ಎಡರಂಗ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಿಲ್ಲ ಹಾಗೂ ಮೀನುಗಾರರ ಜೀವನಾಧಾರವನ್ನು ನಾಶಪಡಿಸಿದೆ ಎಂದು ಆರೋಪಸಿದ್ದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧವೂ ಹರಿಹಾಯ್ದ ಪಿಣರಾಯಿ ವಿಜಯನ್, “ಕೇರಳ ಪ್ರತಿಯೊಂದರಲ್ಲೂ ಹಿಂದಿದೆ ಎಂದು ಆದಿತ್ಯನಾಥ್ ಹೇಳಿದ್ದಾರೆ. ಇಲ್ಲಿ ಉದ್ಯೋಗವಿಲ್ಲದೆ ಯುವಕರು ವಿದೇಶಕ್ಕೆ ಹೋಗುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ರಾಜ್ಯದಲ್ಲಿರುವ ವಲಸೆ ಕಾರ್ಮಿಕರ ಪೈಕಿ ಶೇಕಡ 15 ರಷ್ಟು ಮಂದಿ ಉತ್ತರ ಪ್ರದೇಶದವರು. ಅವರಿಗೆ ವಿಮೆ ಹಾಗೂ ಇತರ ಸೌಲಭ್ಯ ನೀಡಲಾಗಿದೆ. ಎಡರಂಗ ಸರ್ಕಾರ, ಜನ ಪರಸ್ಪರ ಹೊಡೆದಾಡಿಕೊಳ್ಳುವಂತೆ ಮಾಡಿದೆ ಎಂದು ಆದಿತ್ಯನಾಥ್ ಹೇಳಿದ್ದಾರೆ. ಆದರೆ ಕಳೆದ ಐದು ವರ್ಷದಲ್ಲಿ ಕೇರಳದಲ್ಲಿ ಯಾವುದೇ ಕೋಮುಗಲಭೆ ಆಗಿಲ್ಲ. ಆದರೆ ಉತ್ತರ ಪ್ರದೇಶದ ಸ್ಥಿತಿ ಏನು? ಮಹಿಳೆಯರ ವಿರುದ್ಧದ ಅಪರಾಧಗಳು ಉತ್ತರ ಪ್ರದೇಶದಲ್ಲಿ ಅತ್ಯಧಿಕ” ಎಂದು ವಿವರಣೆ ನೀಡಿದರು.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯ ಚುನಾವಣೆಗಳು ಘೋಷಣೆಯಾಗಲಿದ್ದು, ದೇಶದ ದೃಷ್ಟಿ ಈಗ ಈ ಪಂಚ ರಾಜ್ಯಗಳ ಮೇಲಿದೆ


ಇದನ್ನೂ ಓದಿ: ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...