Homeಮುಖಪುಟಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಹುಲ್ ಗಾಂಧಿ ಮತ್ತು ಆದಿತ್ಯನಾಥ್ ಅವರನ್ನು ಸಮೀಕರಿಸಿದ್ದು, “ಎಡಪಕ್ಷಗಳ ವಿಚಾರದಲ್ಲಿ ಇಬ್ಬರ ಭಾವನೆಯೂ ಒಂದೇ” ಎಂದು ಹೇಳಿದ್ದಾರೆ.

“ವಯನಾಡ್ ಸಂಸದ ರಾಹುಲ್‌ ಗಾಂಧಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಕೇರಳದ ಬಗ್ಗೆ ಭಿನ್ನ ದೃಷ್ಟಿಕೋನ ಹೊಂದಿರಬಹುದು; ಆದರೆ ಎಡಪಕ್ಷಗಳ ವಿಚಾರದಲ್ಲಿ ಇಬ್ಬರ ಭಾವನೆಯೂ ಒಂದೇ; ಆ ವಿಚಾರದಲ್ಲಿ ಅವರು ಒಗ್ಗಟ್ಟಾಗಿದ್ದಾರೆ” ಎಂದು ಪಿಣರಾಯಿ ವಿಜಯನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಕೇರಳಕ್ಕೆ ಭೇಟಿ ನೀಡಿದ್ದ ಇಬ್ಬರೂ ಮುಖಂಡರು ಎಡಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದ್ದನ್ನು ಉಲ್ಲೇಖಿಸಿದ ಪಿಣರಾಯಿ ವಿಜಯನ್, “ರಾಹುಲ್‌ ಗಾಂಧಿ ಕೇರಳಕ್ಕೆ ಬಂದು ರೈತರ ಟ್ರ್ಯಾಕ್ಟರ್ ಚಾಲನೆ ಮಾಡಿದ್ದಾರೆ; ಸಮುದ್ರದಲ್ಲಿ ಮೀನುಗಾರರ ಜತೆ ಈಜಿದ್ದಾರೆ; ಆದರೆ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿರ್ಲಕ್ಷಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

ವಯನಾಡ್‌ನಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಭಾಗವಹಿಸಿ ಸ್ವತಃ ಟ್ರ್ಯಾಕ್ಟರ್ ಚಾಲನೆ ಮಾಡಿದ್ದ ರಾಹುಲ್, ಎಡರಂಗ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಿಲ್ಲ ಹಾಗೂ ಮೀನುಗಾರರ ಜೀವನಾಧಾರವನ್ನು ನಾಶಪಡಿಸಿದೆ ಎಂದು ಆರೋಪಸಿದ್ದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧವೂ ಹರಿಹಾಯ್ದ ಪಿಣರಾಯಿ ವಿಜಯನ್, “ಕೇರಳ ಪ್ರತಿಯೊಂದರಲ್ಲೂ ಹಿಂದಿದೆ ಎಂದು ಆದಿತ್ಯನಾಥ್ ಹೇಳಿದ್ದಾರೆ. ಇಲ್ಲಿ ಉದ್ಯೋಗವಿಲ್ಲದೆ ಯುವಕರು ವಿದೇಶಕ್ಕೆ ಹೋಗುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ರಾಜ್ಯದಲ್ಲಿರುವ ವಲಸೆ ಕಾರ್ಮಿಕರ ಪೈಕಿ ಶೇಕಡ 15 ರಷ್ಟು ಮಂದಿ ಉತ್ತರ ಪ್ರದೇಶದವರು. ಅವರಿಗೆ ವಿಮೆ ಹಾಗೂ ಇತರ ಸೌಲಭ್ಯ ನೀಡಲಾಗಿದೆ. ಎಡರಂಗ ಸರ್ಕಾರ, ಜನ ಪರಸ್ಪರ ಹೊಡೆದಾಡಿಕೊಳ್ಳುವಂತೆ ಮಾಡಿದೆ ಎಂದು ಆದಿತ್ಯನಾಥ್ ಹೇಳಿದ್ದಾರೆ. ಆದರೆ ಕಳೆದ ಐದು ವರ್ಷದಲ್ಲಿ ಕೇರಳದಲ್ಲಿ ಯಾವುದೇ ಕೋಮುಗಲಭೆ ಆಗಿಲ್ಲ. ಆದರೆ ಉತ್ತರ ಪ್ರದೇಶದ ಸ್ಥಿತಿ ಏನು? ಮಹಿಳೆಯರ ವಿರುದ್ಧದ ಅಪರಾಧಗಳು ಉತ್ತರ ಪ್ರದೇಶದಲ್ಲಿ ಅತ್ಯಧಿಕ” ಎಂದು ವಿವರಣೆ ನೀಡಿದರು.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಯ ಚುನಾವಣೆಗಳು ಘೋಷಣೆಯಾಗಲಿದ್ದು, ದೇಶದ ದೃಷ್ಟಿ ಈಗ ಈ ಪಂಚ ರಾಜ್ಯಗಳ ಮೇಲಿದೆ


ಇದನ್ನೂ ಓದಿ: ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....