Homeಮುಖಪುಟಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

‘ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ’ ಎಂದು ಪ್ರಧಾನಿ ಮೋದಿಗೆ ಹೇಳಿದ್ದ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ಅಖಿಲೇಶ್‌ ನಿರಾಕರಿಸಿದ್ದಾರೆ

- Advertisement -
- Advertisement -

ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ನದಿಯ ನೀರು ಶುದ್ಧವಾಗಿಲ್ಲ ಎಂದು ತಿಳಿದಿರುವುದರಿಂದಲೇ ಆದಿತ್ಯನಾಥ್‌ ಅವರು ಪ್ರಧಾನಿ ನರೇಂದ್ರ ಮೋದಿಯಂತೆ ಗಂಗಾದಲ್ಲಿ ಸ್ನಾನ ಮಾಡುವುದನ್ನು ಜಾಣತನದಿಂದ ತಪ್ಪಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ” ಎಂಬ ತಮ್ಮ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ನಿರಾಕರಿಸಿದ ಅಖಿಲೇಶ್‌ ಯಾದವ್‌, ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಸಮಾಜವಾದಿ ಪಕ್ಷದ ಆಡಳಿತದಲ್ಲಿ ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ಮೊದಲು ದೇವಸ್ಥಾನದಲ್ಲಿ ನಿಂತು ಒಪ್ಪಿಕೊಳ್ಳಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

“ಮುಖ್ಯಮಂತ್ರಿ ಎಷ್ಟು ಬುದ್ಧಿವಂತರು (‘ಹೋಶಿಯಾರ್’) ನೋಡಿ, ಅವರು ಗಂಗಾದಲ್ಲಿ ಸ್ನಾನ ಮಾಡಲಿಲ್ಲ. ಅವರು ಯಾಕೆ ಸ್ನಾನ ಮಾಡಲಿಲ್ಲ? ನಾನು ಮೀರತ್‌ಗೆ ಹೋಗಿದ್ದೆ, ಹಿಂಡನ್ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿತ್ತು” ಎಂದು ಅಖಿಲೇಶ್‌ ಹೇಳಿದ್ದಾರೆ.

ಹಿಂಡನ್‌ ನದಿಯು ಯಮುನಾ ನದಿಯ ಉಪನದಿಯಾಗಿದ್ದು, ಯಮುನಾ ಗಂಗಾ ನದಿಯ ಉಪನದಿಯಾಗಿದೆ.

“ಕಾಳಿ ನದಿಯು ಈಗಾಗಲೇ ಕಪ್ಪಾಗಿದೆ, ಯಮುನಾ ನದಿಯ ದಡವು ಕಪ್ಪಾಗಿದೆ, ಚಂಬಲ್ ನದಿಯು ಯಮುನಾವನ್ನು ಸೇರದಿದ್ದರೆ, ಯಮುನೆಯು ಸತ್ತಂತೆ” ಎಂದು ಅಖಿಲೇಶ್‌ ಹೇಳಿದ್ದಾರೆ.

“ತಾಯಿ ಗಂಗೆ ಶುದ್ದೀಕರಣ ಮಾಡುವುದಾಗಿ ಹೇಳಿದ್ದು ಯಾರು? ಗೋಮತಿ ನದಿಯನ್ನು ಸ್ವಚ್ಛಗೊಳಿಸಲಾಗಿದೆಯೇ? ಬಜೆಟ್ ಹರಿದಿದೆ, ಆದರೆ ನದಿಗಳನ್ನು ಸ್ವಚ್ಛಗೊಳಿಸಿಲ್ಲ. ಯಾವುದೇ ನದಿಗಳು ಸ್ವಚ್ಛವಾಗಿಲ್ಲ ಎಂದು ನಮ್ಮ ಸಿಎಂಗೆ ತಿಳಿದಿದೆ, ಆದ್ದರಿಂದ ಅವರು ಗಂಗಾ ನದಿಯಲ್ಲಿ ಮುಳುಗಿಲ್ಲ” ಎಂದು ಯುಪಿಯ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್‌ ಯಾದವ್‌ ಜಾನ್‌ಪುರದಲ್ಲಿ ತಿಳಿಸಿದರು.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ಸೋಮವಾರ ಪ್ರಧಾನಿ ಮೋದಿ ವಾರಣಾಸಿಗೆ ಭೇಟಿ ನೀಡಿದ್ದರು. ಕಾಶಿಯ ಕಾಲ ಭೈರವ ದೇವಾಲಯ ಮತ್ತು ಕಾಶಿ ವಿಶ್ವನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ್ದ ಮೋದಿ, ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದರು.

ಈ ಬಗ್ಗೆ ವ್ಯಂಗ್ಯವಾಗಿ ಟೀಕಿಸಿದ್ದ ಅಖಿಲೇಶ್‌ ಯಾದವ್, “ಇದು ತುಂಬಾ ಒಳ್ಳೆಯ ವಿಷಯ. ಕೇವಲ ಒಂದು ತಿಂಗಳಲ್ಲ. ಎರಡು ತಿಂಗಳು, ಮೂರು ತಿಂಗಳು ಅಲ್ಲಿಯೇ ಇರಬೇಕು. ಅದು ಉಳಿಯಲು ಇರುವ ಸ್ಥಳವಾಗಿದೆ. ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯುತ್ತಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ವಿರೋಧಿಸಿರುವ ಬಿಜೆಪಿ ಕ್ಷಮೆಕೇಳಲು ಒತ್ತಾಯಿಸುತ್ತಿದೆ. ಆದರೆ ಇದಕ್ಕೆ ನಿರಾಕರಿಸಿರುವ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ.

“ಕ್ಷಮೆಯಾಚಿಸಲು ಯಾರು ಒತ್ತಾಯಿಸುತ್ತಿದ್ದಾರೆ? ಕಾಶಿ ವಿಶ್ವನಾಥ ಕಾರಿಡಾರ್‌ನ ಕಾಮಗಾರಿ ಯಾವಾಗ ಪ್ರಾರಂಭವಾಯಿತು? ಇದಕ್ಕೆ ಬಿಜೆಪಿ ಯಾವಾಗ ಉತ್ತರಿಸುತ್ತದೆ. ದೇವಾಲಯದಲ್ಲಿ ನಿಂತು ಅವರು ಸತ್ಯ ಹೇಳಿದರೆ ನಂತರ ನೀವು ನನ್ನಿಂದ ಉತ್ತರವನ್ನು ಪಡೆಯಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...