Homeಮುಖಪುಟಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

‘ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ’ ಎಂದು ಪ್ರಧಾನಿ ಮೋದಿಗೆ ಹೇಳಿದ್ದ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ಅಖಿಲೇಶ್‌ ನಿರಾಕರಿಸಿದ್ದಾರೆ

- Advertisement -
- Advertisement -

ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ನದಿಯ ನೀರು ಶುದ್ಧವಾಗಿಲ್ಲ ಎಂದು ತಿಳಿದಿರುವುದರಿಂದಲೇ ಆದಿತ್ಯನಾಥ್‌ ಅವರು ಪ್ರಧಾನಿ ನರೇಂದ್ರ ಮೋದಿಯಂತೆ ಗಂಗಾದಲ್ಲಿ ಸ್ನಾನ ಮಾಡುವುದನ್ನು ಜಾಣತನದಿಂದ ತಪ್ಪಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ” ಎಂಬ ತಮ್ಮ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ನಿರಾಕರಿಸಿದ ಅಖಿಲೇಶ್‌ ಯಾದವ್‌, ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಸಮಾಜವಾದಿ ಪಕ್ಷದ ಆಡಳಿತದಲ್ಲಿ ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ಮೊದಲು ದೇವಸ್ಥಾನದಲ್ಲಿ ನಿಂತು ಒಪ್ಪಿಕೊಳ್ಳಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

“ಮುಖ್ಯಮಂತ್ರಿ ಎಷ್ಟು ಬುದ್ಧಿವಂತರು (‘ಹೋಶಿಯಾರ್’) ನೋಡಿ, ಅವರು ಗಂಗಾದಲ್ಲಿ ಸ್ನಾನ ಮಾಡಲಿಲ್ಲ. ಅವರು ಯಾಕೆ ಸ್ನಾನ ಮಾಡಲಿಲ್ಲ? ನಾನು ಮೀರತ್‌ಗೆ ಹೋಗಿದ್ದೆ, ಹಿಂಡನ್ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿತ್ತು” ಎಂದು ಅಖಿಲೇಶ್‌ ಹೇಳಿದ್ದಾರೆ.

ಹಿಂಡನ್‌ ನದಿಯು ಯಮುನಾ ನದಿಯ ಉಪನದಿಯಾಗಿದ್ದು, ಯಮುನಾ ಗಂಗಾ ನದಿಯ ಉಪನದಿಯಾಗಿದೆ.

“ಕಾಳಿ ನದಿಯು ಈಗಾಗಲೇ ಕಪ್ಪಾಗಿದೆ, ಯಮುನಾ ನದಿಯ ದಡವು ಕಪ್ಪಾಗಿದೆ, ಚಂಬಲ್ ನದಿಯು ಯಮುನಾವನ್ನು ಸೇರದಿದ್ದರೆ, ಯಮುನೆಯು ಸತ್ತಂತೆ” ಎಂದು ಅಖಿಲೇಶ್‌ ಹೇಳಿದ್ದಾರೆ.

“ತಾಯಿ ಗಂಗೆ ಶುದ್ದೀಕರಣ ಮಾಡುವುದಾಗಿ ಹೇಳಿದ್ದು ಯಾರು? ಗೋಮತಿ ನದಿಯನ್ನು ಸ್ವಚ್ಛಗೊಳಿಸಲಾಗಿದೆಯೇ? ಬಜೆಟ್ ಹರಿದಿದೆ, ಆದರೆ ನದಿಗಳನ್ನು ಸ್ವಚ್ಛಗೊಳಿಸಿಲ್ಲ. ಯಾವುದೇ ನದಿಗಳು ಸ್ವಚ್ಛವಾಗಿಲ್ಲ ಎಂದು ನಮ್ಮ ಸಿಎಂಗೆ ತಿಳಿದಿದೆ, ಆದ್ದರಿಂದ ಅವರು ಗಂಗಾ ನದಿಯಲ್ಲಿ ಮುಳುಗಿಲ್ಲ” ಎಂದು ಯುಪಿಯ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್‌ ಯಾದವ್‌ ಜಾನ್‌ಪುರದಲ್ಲಿ ತಿಳಿಸಿದರು.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ಸೋಮವಾರ ಪ್ರಧಾನಿ ಮೋದಿ ವಾರಣಾಸಿಗೆ ಭೇಟಿ ನೀಡಿದ್ದರು. ಕಾಶಿಯ ಕಾಲ ಭೈರವ ದೇವಾಲಯ ಮತ್ತು ಕಾಶಿ ವಿಶ್ವನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ್ದ ಮೋದಿ, ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದರು.

ಈ ಬಗ್ಗೆ ವ್ಯಂಗ್ಯವಾಗಿ ಟೀಕಿಸಿದ್ದ ಅಖಿಲೇಶ್‌ ಯಾದವ್, “ಇದು ತುಂಬಾ ಒಳ್ಳೆಯ ವಿಷಯ. ಕೇವಲ ಒಂದು ತಿಂಗಳಲ್ಲ. ಎರಡು ತಿಂಗಳು, ಮೂರು ತಿಂಗಳು ಅಲ್ಲಿಯೇ ಇರಬೇಕು. ಅದು ಉಳಿಯಲು ಇರುವ ಸ್ಥಳವಾಗಿದೆ. ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯುತ್ತಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ವಿರೋಧಿಸಿರುವ ಬಿಜೆಪಿ ಕ್ಷಮೆಕೇಳಲು ಒತ್ತಾಯಿಸುತ್ತಿದೆ. ಆದರೆ ಇದಕ್ಕೆ ನಿರಾಕರಿಸಿರುವ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ.

“ಕ್ಷಮೆಯಾಚಿಸಲು ಯಾರು ಒತ್ತಾಯಿಸುತ್ತಿದ್ದಾರೆ? ಕಾಶಿ ವಿಶ್ವನಾಥ ಕಾರಿಡಾರ್‌ನ ಕಾಮಗಾರಿ ಯಾವಾಗ ಪ್ರಾರಂಭವಾಯಿತು? ಇದಕ್ಕೆ ಬಿಜೆಪಿ ಯಾವಾಗ ಉತ್ತರಿಸುತ್ತದೆ. ದೇವಾಲಯದಲ್ಲಿ ನಿಂತು ಅವರು ಸತ್ಯ ಹೇಳಿದರೆ ನಂತರ ನೀವು ನನ್ನಿಂದ ಉತ್ತರವನ್ನು ಪಡೆಯಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...