Homeಮುಖಪುಟಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

‘ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ’ ಎಂದು ಪ್ರಧಾನಿ ಮೋದಿಗೆ ಹೇಳಿದ್ದ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ಅಖಿಲೇಶ್‌ ನಿರಾಕರಿಸಿದ್ದಾರೆ

- Advertisement -
- Advertisement -

ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ನದಿಯ ನೀರು ಶುದ್ಧವಾಗಿಲ್ಲ ಎಂದು ತಿಳಿದಿರುವುದರಿಂದಲೇ ಆದಿತ್ಯನಾಥ್‌ ಅವರು ಪ್ರಧಾನಿ ನರೇಂದ್ರ ಮೋದಿಯಂತೆ ಗಂಗಾದಲ್ಲಿ ಸ್ನಾನ ಮಾಡುವುದನ್ನು ಜಾಣತನದಿಂದ ತಪ್ಪಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ” ಎಂಬ ತಮ್ಮ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ನಿರಾಕರಿಸಿದ ಅಖಿಲೇಶ್‌ ಯಾದವ್‌, ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಸಮಾಜವಾದಿ ಪಕ್ಷದ ಆಡಳಿತದಲ್ಲಿ ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ಮೊದಲು ದೇವಸ್ಥಾನದಲ್ಲಿ ನಿಂತು ಒಪ್ಪಿಕೊಳ್ಳಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

“ಮುಖ್ಯಮಂತ್ರಿ ಎಷ್ಟು ಬುದ್ಧಿವಂತರು (‘ಹೋಶಿಯಾರ್’) ನೋಡಿ, ಅವರು ಗಂಗಾದಲ್ಲಿ ಸ್ನಾನ ಮಾಡಲಿಲ್ಲ. ಅವರು ಯಾಕೆ ಸ್ನಾನ ಮಾಡಲಿಲ್ಲ? ನಾನು ಮೀರತ್‌ಗೆ ಹೋಗಿದ್ದೆ, ಹಿಂಡನ್ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿತ್ತು” ಎಂದು ಅಖಿಲೇಶ್‌ ಹೇಳಿದ್ದಾರೆ.

ಹಿಂಡನ್‌ ನದಿಯು ಯಮುನಾ ನದಿಯ ಉಪನದಿಯಾಗಿದ್ದು, ಯಮುನಾ ಗಂಗಾ ನದಿಯ ಉಪನದಿಯಾಗಿದೆ.

“ಕಾಳಿ ನದಿಯು ಈಗಾಗಲೇ ಕಪ್ಪಾಗಿದೆ, ಯಮುನಾ ನದಿಯ ದಡವು ಕಪ್ಪಾಗಿದೆ, ಚಂಬಲ್ ನದಿಯು ಯಮುನಾವನ್ನು ಸೇರದಿದ್ದರೆ, ಯಮುನೆಯು ಸತ್ತಂತೆ” ಎಂದು ಅಖಿಲೇಶ್‌ ಹೇಳಿದ್ದಾರೆ.

“ತಾಯಿ ಗಂಗೆ ಶುದ್ದೀಕರಣ ಮಾಡುವುದಾಗಿ ಹೇಳಿದ್ದು ಯಾರು? ಗೋಮತಿ ನದಿಯನ್ನು ಸ್ವಚ್ಛಗೊಳಿಸಲಾಗಿದೆಯೇ? ಬಜೆಟ್ ಹರಿದಿದೆ, ಆದರೆ ನದಿಗಳನ್ನು ಸ್ವಚ್ಛಗೊಳಿಸಿಲ್ಲ. ಯಾವುದೇ ನದಿಗಳು ಸ್ವಚ್ಛವಾಗಿಲ್ಲ ಎಂದು ನಮ್ಮ ಸಿಎಂಗೆ ತಿಳಿದಿದೆ, ಆದ್ದರಿಂದ ಅವರು ಗಂಗಾ ನದಿಯಲ್ಲಿ ಮುಳುಗಿಲ್ಲ” ಎಂದು ಯುಪಿಯ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್‌ ಯಾದವ್‌ ಜಾನ್‌ಪುರದಲ್ಲಿ ತಿಳಿಸಿದರು.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ಸೋಮವಾರ ಪ್ರಧಾನಿ ಮೋದಿ ವಾರಣಾಸಿಗೆ ಭೇಟಿ ನೀಡಿದ್ದರು. ಕಾಶಿಯ ಕಾಲ ಭೈರವ ದೇವಾಲಯ ಮತ್ತು ಕಾಶಿ ವಿಶ್ವನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ್ದ ಮೋದಿ, ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದರು.

ಈ ಬಗ್ಗೆ ವ್ಯಂಗ್ಯವಾಗಿ ಟೀಕಿಸಿದ್ದ ಅಖಿಲೇಶ್‌ ಯಾದವ್, “ಇದು ತುಂಬಾ ಒಳ್ಳೆಯ ವಿಷಯ. ಕೇವಲ ಒಂದು ತಿಂಗಳಲ್ಲ. ಎರಡು ತಿಂಗಳು, ಮೂರು ತಿಂಗಳು ಅಲ್ಲಿಯೇ ಇರಬೇಕು. ಅದು ಉಳಿಯಲು ಇರುವ ಸ್ಥಳವಾಗಿದೆ. ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯುತ್ತಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ವಿರೋಧಿಸಿರುವ ಬಿಜೆಪಿ ಕ್ಷಮೆಕೇಳಲು ಒತ್ತಾಯಿಸುತ್ತಿದೆ. ಆದರೆ ಇದಕ್ಕೆ ನಿರಾಕರಿಸಿರುವ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ.

“ಕ್ಷಮೆಯಾಚಿಸಲು ಯಾರು ಒತ್ತಾಯಿಸುತ್ತಿದ್ದಾರೆ? ಕಾಶಿ ವಿಶ್ವನಾಥ ಕಾರಿಡಾರ್‌ನ ಕಾಮಗಾರಿ ಯಾವಾಗ ಪ್ರಾರಂಭವಾಯಿತು? ಇದಕ್ಕೆ ಬಿಜೆಪಿ ಯಾವಾಗ ಉತ್ತರಿಸುತ್ತದೆ. ದೇವಾಲಯದಲ್ಲಿ ನಿಂತು ಅವರು ಸತ್ಯ ಹೇಳಿದರೆ ನಂತರ ನೀವು ನನ್ನಿಂದ ಉತ್ತರವನ್ನು ಪಡೆಯಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...