Homeಮುಖಪುಟಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

ಗಂಗಾ ಸ್ವಚ್ಛವಾಗಿಲ್ಲವೆಂದು ತಿಳಿದಿದ್ದರಿಂದಲೇ ಆದಿತ್ಯನಾಥ್‌ ಮೋದಿಯಂತೆ ಸ್ನಾನ ಮಾಡಿಲ್ಲ: ಅಖಿಲೇಶ್ ಯಾದವ್

‘ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ’ ಎಂದು ಪ್ರಧಾನಿ ಮೋದಿಗೆ ಹೇಳಿದ್ದ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ಅಖಿಲೇಶ್‌ ನಿರಾಕರಿಸಿದ್ದಾರೆ

- Advertisement -
- Advertisement -

ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ನದಿಯ ನೀರು ಶುದ್ಧವಾಗಿಲ್ಲ ಎಂದು ತಿಳಿದಿರುವುದರಿಂದಲೇ ಆದಿತ್ಯನಾಥ್‌ ಅವರು ಪ್ರಧಾನಿ ನರೇಂದ್ರ ಮೋದಿಯಂತೆ ಗಂಗಾದಲ್ಲಿ ಸ್ನಾನ ಮಾಡುವುದನ್ನು ಜಾಣತನದಿಂದ ತಪ್ಪಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯಲು ಬಯಸುತ್ತಾರೆ” ಎಂಬ ತಮ್ಮ ವ್ಯಂಗ್ಯಕ್ಕೆ ಕ್ಷಮೆಯಾಚಿಸಲು ನಿರಾಕರಿಸಿದ ಅಖಿಲೇಶ್‌ ಯಾದವ್‌, ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಸಮಾಜವಾದಿ ಪಕ್ಷದ ಆಡಳಿತದಲ್ಲಿ ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ಮೊದಲು ದೇವಸ್ಥಾನದಲ್ಲಿ ನಿಂತು ಒಪ್ಪಿಕೊಳ್ಳಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

“ಮುಖ್ಯಮಂತ್ರಿ ಎಷ್ಟು ಬುದ್ಧಿವಂತರು (‘ಹೋಶಿಯಾರ್’) ನೋಡಿ, ಅವರು ಗಂಗಾದಲ್ಲಿ ಸ್ನಾನ ಮಾಡಲಿಲ್ಲ. ಅವರು ಯಾಕೆ ಸ್ನಾನ ಮಾಡಲಿಲ್ಲ? ನಾನು ಮೀರತ್‌ಗೆ ಹೋಗಿದ್ದೆ, ಹಿಂಡನ್ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿತ್ತು” ಎಂದು ಅಖಿಲೇಶ್‌ ಹೇಳಿದ್ದಾರೆ.

ಹಿಂಡನ್‌ ನದಿಯು ಯಮುನಾ ನದಿಯ ಉಪನದಿಯಾಗಿದ್ದು, ಯಮುನಾ ಗಂಗಾ ನದಿಯ ಉಪನದಿಯಾಗಿದೆ.

“ಕಾಳಿ ನದಿಯು ಈಗಾಗಲೇ ಕಪ್ಪಾಗಿದೆ, ಯಮುನಾ ನದಿಯ ದಡವು ಕಪ್ಪಾಗಿದೆ, ಚಂಬಲ್ ನದಿಯು ಯಮುನಾವನ್ನು ಸೇರದಿದ್ದರೆ, ಯಮುನೆಯು ಸತ್ತಂತೆ” ಎಂದು ಅಖಿಲೇಶ್‌ ಹೇಳಿದ್ದಾರೆ.

“ತಾಯಿ ಗಂಗೆ ಶುದ್ದೀಕರಣ ಮಾಡುವುದಾಗಿ ಹೇಳಿದ್ದು ಯಾರು? ಗೋಮತಿ ನದಿಯನ್ನು ಸ್ವಚ್ಛಗೊಳಿಸಲಾಗಿದೆಯೇ? ಬಜೆಟ್ ಹರಿದಿದೆ, ಆದರೆ ನದಿಗಳನ್ನು ಸ್ವಚ್ಛಗೊಳಿಸಿಲ್ಲ. ಯಾವುದೇ ನದಿಗಳು ಸ್ವಚ್ಛವಾಗಿಲ್ಲ ಎಂದು ನಮ್ಮ ಸಿಎಂಗೆ ತಿಳಿದಿದೆ, ಆದ್ದರಿಂದ ಅವರು ಗಂಗಾ ನದಿಯಲ್ಲಿ ಮುಳುಗಿಲ್ಲ” ಎಂದು ಯುಪಿಯ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್‌ ಯಾದವ್‌ ಜಾನ್‌ಪುರದಲ್ಲಿ ತಿಳಿಸಿದರು.

ಇದನ್ನೂ ಓದಿ:ನರೇಂದ್ರ ಮೋದಿ ಟ್ವಿಟರ್‌‌ ಖಾತೆ ಹ್ಯಾಕ್‌: ಬಿಟ್‌ ಕಾಯಿನ್‌ ಕುರಿತು ನಕಲಿ ಪೋಸ್ಟ್‌

ಸೋಮವಾರ ಪ್ರಧಾನಿ ಮೋದಿ ವಾರಣಾಸಿಗೆ ಭೇಟಿ ನೀಡಿದ್ದರು. ಕಾಶಿಯ ಕಾಲ ಭೈರವ ದೇವಾಲಯ ಮತ್ತು ಕಾಶಿ ವಿಶ್ವನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ್ದ ಮೋದಿ, ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದರು.

ಈ ಬಗ್ಗೆ ವ್ಯಂಗ್ಯವಾಗಿ ಟೀಕಿಸಿದ್ದ ಅಖಿಲೇಶ್‌ ಯಾದವ್, “ಇದು ತುಂಬಾ ಒಳ್ಳೆಯ ವಿಷಯ. ಕೇವಲ ಒಂದು ತಿಂಗಳಲ್ಲ. ಎರಡು ತಿಂಗಳು, ಮೂರು ತಿಂಗಳು ಅಲ್ಲಿಯೇ ಇರಬೇಕು. ಅದು ಉಳಿಯಲು ಇರುವ ಸ್ಥಳವಾಗಿದೆ. ಅಂತ್ಯ ಸಮೀಪಿಸುವಾಗ ಬನಾರಸ್‌ನಲ್ಲಿ ಉಳಿಯುತ್ತಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ವಿರೋಧಿಸಿರುವ ಬಿಜೆಪಿ ಕ್ಷಮೆಕೇಳಲು ಒತ್ತಾಯಿಸುತ್ತಿದೆ. ಆದರೆ ಇದಕ್ಕೆ ನಿರಾಕರಿಸಿರುವ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ.

“ಕ್ಷಮೆಯಾಚಿಸಲು ಯಾರು ಒತ್ತಾಯಿಸುತ್ತಿದ್ದಾರೆ? ಕಾಶಿ ವಿಶ್ವನಾಥ ಕಾರಿಡಾರ್‌ನ ಕಾಮಗಾರಿ ಯಾವಾಗ ಪ್ರಾರಂಭವಾಯಿತು? ಇದಕ್ಕೆ ಬಿಜೆಪಿ ಯಾವಾಗ ಉತ್ತರಿಸುತ್ತದೆ. ದೇವಾಲಯದಲ್ಲಿ ನಿಂತು ಅವರು ಸತ್ಯ ಹೇಳಿದರೆ ನಂತರ ನೀವು ನನ್ನಿಂದ ಉತ್ತರವನ್ನು ಪಡೆಯಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ರೈತರ ಎಲ್ಲಾ ಬೇಡಿಕೆಗಳ ಮುಂದೆ ಮಂಡಿಯೂರಿದ ಮೋದಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...