Homeಮುಖಪುಟ2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

- Advertisement -
- Advertisement -

2017ರಲ್ಲಿ ಉತ್ತರಪ್ರದೇಶದಲ್ಲಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈವರೆಗೆ ಎನ್‌ಕೌಂಟರ್ ಎಂದು 190 ಜನರನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಮತ್ತು 2017ರಿಂದ 2023ರ ನಡುವೆ ಉತ್ತರಪ್ರದೇಶದ ಪೊಲೀಸರ ಗುಂಡೇಟಿನಿಂದ 5,591 ಜನರು ಗಾಯಗೊಂಡಿದ್ದಾರೆ.

ಲಕ್ನೋದಲ್ಲಿ ನಡೆದ ಪೊಲೀಸ್ ಸ್ಮೃತಿ ದಿವಸ್(ಪೊಲೀಸ್ ಸ್ಮರಣಾರ್ಥ ದಿನ) ಕಾರ್ಯಕ್ರಮದಲ್ಲಿ ಕೆಲ ಅಂಕಿ ಅಂಶಗಳನ್ನು ಸಿಎಂ ಯೋಗಿ ಆದಿತ್ಯನಾಥ್ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವುದು, ಸಾರ್ವಜನಿಕರಲ್ಲಿ ಭದ್ರತೆಯ ಭಾವವನ್ನು ಮೂಡಿಸುವುದು ಮತ್ತು ಅಪರಾಧಿಗಳಲ್ಲಿ ಕಾನೂನಿನ ಭಯ ಮೂಡಿಸುವುದು ಸರಕಾರದ ಗುರಿ ಎಂದು ಹೇಳಿ ಎನ್‌ಕೌಂಟರನ್ನು  ಸಮರ್ಥಿಸಿಕೊಂಡಿದ್ದಾರೆ.

ಎನ್‌ಕೌಂಟರ್‌ಗಳನ್ನು ಅಪರಾಧದ ವಿರುದ್ಧದ ಶೂನ್ಯ ಸಹಿಷ್ಣುತೆಯ ನೀತಿ ಎಂದು ಸರಕಾರ ಕರೆದರೆ, ಮಾನವ ಹಕ್ಕುಗಳ ಕಾರ್ಯಕರ್ತರು ಎನ್‌ಕೌಂಟರ್‌ಗಳ ಬಗ್ಗೆ ಪ್ರಶ್ನಿಸಿದ್ದಾರೆ ಮತ್ತು ಅವುಗಳನ್ನು ಹಂತಹಂತದ ಹತ್ಯೆಗಳು ಎಂದು ಕರೆದಿದ್ದಾರೆ.

ಎನ್‌ಕೌಂಟರನ್ನು ಪೊಲೀಸರು ಆತ್ಮರಕ್ಷಣೆಯ ಭಾಗ ಎಂದು ಹೇಳಿಕೊಂಡರೆ. ಆಪಾದಿತ ಎನ್‌ಕೌಂಟರ್‌ಗಳ ಬಗ್ಗೆ ಅನುಮಾನಾಸ್ಪದವಾದ ವಿವರಗಳನ್ನು ಕೂಡ ನೀಡಲಾಗಿದೆ ಎನ್ನುವುದು ಗಮನಾರ್ಹ.

ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರ, ದರೋಡೆ ಮತ್ತು ಸಾಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ 1986ರ ನಿಬಂಧನೆಗಳನ್ನು ಬಳಸಿದೆ. ಕೆಲವು ಪ್ರಕರಣಗಳಲ್ಲಿ ದರೋಡೆಕೋರರ ಆಸ್ತಿಗಳನ್ನು ವಶಪಡಿಸಿಕೊಂಡಿದೆ. ಇದನ್ನು ಕೆಲವು ಸಂದರ್ಭಗಳಲ್ಲಿ ಅಲಹಾಬಾದ್ ಉಚ್ಚ ನ್ಯಾಯಾಲಯವು ರಾಜ್ಯವು ಕಾಯಿದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಯೋಗಿ ಸರಕಾರವು ರಾಜಕೀಯ ಉದ್ದೇಶದಿಂದ ವಿರೋಧಿಗಳನ್ನು ಬೆದರಿಸಲು ಮತ್ತು ಸಾಮಾನ್ಯ ನಾಗರಿಕರಿಗೆ ಕಿರುಕುಳ ನೀಡಲು ಕಾನೂನನ್ನು ದುರ್ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ. ಬಿಜೆಪಿ ಸರ್ಕಾರವು ಮಾಫಿಯಾ ಗ್ಯಾಂಗ್‌ನ ಜನರ ವಿರುದ್ಧ ಮಾತ್ರವಲ್ಲದೆ ವಿರೋಧ ಪಕ್ಷದ ಶಾಸಕರು ಮತ್ತು ನಾಯಕರ ವಿರುದ್ಧವೂ 1986ರ ನಿಬಂಧನೆಗಳನ್ನು ನಿಯಮಿತವಾಗಿ ಬಳಸಿದೆ ಎಂದು ಆರೋಪಿಸಲಾಗಿದೆ.

ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದಾಗಿನಿಂದ 69,332 ಜನರ ವಿರುದ್ಧ ದರೋಡೆ ಕಾಯಿದೆಯಡಿ ಮತ್ತು 887 ಜನರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದಿತ್ಯನಾಥ್ ಅವರ ಸರ್ಕಾರವು ಮಾಫಿಯಾ ಗ್ಯಾಂಗ್‌ನ 68 ಸದಸ್ಯರ ಮೇಲೆ ಕಠಿಣ ಮೇಲೆ ಕ್ರಮಕೈಗೊಂಡಿದೆ. ಅವರಿಂದ 3,650 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಸಾಮಾಜಿಕ ಕಾರ್ಯಕರ್ತ ರಾಜೀವ್ ಯಾದವ್ ಅವರು ಎನ್‌ಕೌಂಟರ್‌ಗಳ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯನ್ನು ಪರಿಹರಿಸುವ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದಾರೆ. ಎನ್‌ಕೌಂಟರ್‌ಗಳ ಮೂಲಕ ಅಪರಾಧವನ್ನು ನಿಯಂತ್ರಿಸಲಾಗುತ್ತಿದೆ ಎಂದು ಅವರು ಹೇಳುತ್ತಾರೆ. ಮತ್ತೇಕೆ ಅವರು ದರೋಡೆ ಕಾಯಿದೆ ಮತ್ತು ಗೂಂಡಾ ಕಾಯ್ದೆಯ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಮತ್ತು ಆಸ್ತಿಯನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಯುಪಿಯಲ್ಲಿ ಸಣ್ಣ ಪ್ರಕರಣದ ಆರೋಪಿಗಳನ್ನು ಸುಲಭವಾಗಿ ಬಂಧಿಸಬಹುದಾದರೂ ಪೊಲೀಸರು ಫೈರಿಂಗ್ ಮಾಡಿರುವುದನ್ನು ಸಾಮಾಜಿಕ ಕಾರ್ಯಕರ್ತ ರಾಜೀವ್ ಯಾದವ್ ಗಮನಿಸಿದ್ದಾರೆ. ಸೆಪ್ಟೆಂಬರ್‌ನಲ್ಲಿ ಅಂಬೇಡ್ಕರ್ ನಗರದಲ್ಲಿ 16 ವರ್ಷದ ಬಾಲಕಿಯ ದುಪಟ್ಟಾವನ್ನು ಎಳೆದ ನಂತರ ಮೋಟಾರ್‌ಸೈಕಲ್‌ನಿಂದ ಬಿದ್ದು ಬಾಲಕಿ ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಯಾದವ್ ಉಲ್ಲೇಖಿಸಿದ್ದಾರೆ.

ಅ.20 ರಂದು ರಾಜ್ಯದಲ್ಲಿ ನಡೆದ 4 ಎನ್‌ಕೌಂಟಗಳು ಕ್ಷುಲ್ಲಕ ಕಾರಣಕ್ಕೆ ನಡೆದಿದೆ. ಅ.19ರ ರಾತ್ರಿ ಬುಲಂದ್‌ಶಹರ್‌ನಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಆತನಿಂದ ಕಳ್ಳತನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಅ.20 ರಂದು ಪೊಲೀಸರು ಮಹಾರಾಜಗಂಜ್‌ನಲ್ಲಿ ಇಬ್ಬರನ್ನು ಗುಂಡು ಹಾರಿಸಿ ಅವರಿಂದ 55 ಲಕ್ಷ ರೂಪಾಯಿ ಮತ್ತು 12 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಇಂತಹ ಸಣ್ಣ ಸಣ್ಣ ಪ್ರಕರಣಗಳಲ್ಲೂ ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ ಎಂದು ರಾಜೀವ್‌ ಯಾದವ್‌ ಹೇಳಿದ್ದಾರೆ.

ಇದನ್ನು ಓದಿ: ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದ ಮಿಜೋರಾಂ ಸಿಎಂ; ಬಿಜೆಪಿಗೆ ಶಾಕ್ ಕೊಟ್ಟ ಮೈತ್ರಿ ಪಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...