Homeಮುಖಪುಟ2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

2017ರಲ್ಲಿ ಆದಿತ್ಯನಾಥ್‌ ಅಧಿಕಾರ ವಹಿಸಿಕೊಂಡ ಬಳಿಕ 190 ಜನರ ಎನ್‌ಕೌಂಟರ್‌: ವರದಿ

- Advertisement -
- Advertisement -

2017ರಲ್ಲಿ ಉತ್ತರಪ್ರದೇಶದಲ್ಲಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈವರೆಗೆ ಎನ್‌ಕೌಂಟರ್ ಎಂದು 190 ಜನರನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಮತ್ತು 2017ರಿಂದ 2023ರ ನಡುವೆ ಉತ್ತರಪ್ರದೇಶದ ಪೊಲೀಸರ ಗುಂಡೇಟಿನಿಂದ 5,591 ಜನರು ಗಾಯಗೊಂಡಿದ್ದಾರೆ.

ಲಕ್ನೋದಲ್ಲಿ ನಡೆದ ಪೊಲೀಸ್ ಸ್ಮೃತಿ ದಿವಸ್(ಪೊಲೀಸ್ ಸ್ಮರಣಾರ್ಥ ದಿನ) ಕಾರ್ಯಕ್ರಮದಲ್ಲಿ ಕೆಲ ಅಂಕಿ ಅಂಶಗಳನ್ನು ಸಿಎಂ ಯೋಗಿ ಆದಿತ್ಯನಾಥ್ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವುದು, ಸಾರ್ವಜನಿಕರಲ್ಲಿ ಭದ್ರತೆಯ ಭಾವವನ್ನು ಮೂಡಿಸುವುದು ಮತ್ತು ಅಪರಾಧಿಗಳಲ್ಲಿ ಕಾನೂನಿನ ಭಯ ಮೂಡಿಸುವುದು ಸರಕಾರದ ಗುರಿ ಎಂದು ಹೇಳಿ ಎನ್‌ಕೌಂಟರನ್ನು  ಸಮರ್ಥಿಸಿಕೊಂಡಿದ್ದಾರೆ.

ಎನ್‌ಕೌಂಟರ್‌ಗಳನ್ನು ಅಪರಾಧದ ವಿರುದ್ಧದ ಶೂನ್ಯ ಸಹಿಷ್ಣುತೆಯ ನೀತಿ ಎಂದು ಸರಕಾರ ಕರೆದರೆ, ಮಾನವ ಹಕ್ಕುಗಳ ಕಾರ್ಯಕರ್ತರು ಎನ್‌ಕೌಂಟರ್‌ಗಳ ಬಗ್ಗೆ ಪ್ರಶ್ನಿಸಿದ್ದಾರೆ ಮತ್ತು ಅವುಗಳನ್ನು ಹಂತಹಂತದ ಹತ್ಯೆಗಳು ಎಂದು ಕರೆದಿದ್ದಾರೆ.

ಎನ್‌ಕೌಂಟರನ್ನು ಪೊಲೀಸರು ಆತ್ಮರಕ್ಷಣೆಯ ಭಾಗ ಎಂದು ಹೇಳಿಕೊಂಡರೆ. ಆಪಾದಿತ ಎನ್‌ಕೌಂಟರ್‌ಗಳ ಬಗ್ಗೆ ಅನುಮಾನಾಸ್ಪದವಾದ ವಿವರಗಳನ್ನು ಕೂಡ ನೀಡಲಾಗಿದೆ ಎನ್ನುವುದು ಗಮನಾರ್ಹ.

ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರ, ದರೋಡೆ ಮತ್ತು ಸಾಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ 1986ರ ನಿಬಂಧನೆಗಳನ್ನು ಬಳಸಿದೆ. ಕೆಲವು ಪ್ರಕರಣಗಳಲ್ಲಿ ದರೋಡೆಕೋರರ ಆಸ್ತಿಗಳನ್ನು ವಶಪಡಿಸಿಕೊಂಡಿದೆ. ಇದನ್ನು ಕೆಲವು ಸಂದರ್ಭಗಳಲ್ಲಿ ಅಲಹಾಬಾದ್ ಉಚ್ಚ ನ್ಯಾಯಾಲಯವು ರಾಜ್ಯವು ಕಾಯಿದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಯೋಗಿ ಸರಕಾರವು ರಾಜಕೀಯ ಉದ್ದೇಶದಿಂದ ವಿರೋಧಿಗಳನ್ನು ಬೆದರಿಸಲು ಮತ್ತು ಸಾಮಾನ್ಯ ನಾಗರಿಕರಿಗೆ ಕಿರುಕುಳ ನೀಡಲು ಕಾನೂನನ್ನು ದುರ್ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ. ಬಿಜೆಪಿ ಸರ್ಕಾರವು ಮಾಫಿಯಾ ಗ್ಯಾಂಗ್‌ನ ಜನರ ವಿರುದ್ಧ ಮಾತ್ರವಲ್ಲದೆ ವಿರೋಧ ಪಕ್ಷದ ಶಾಸಕರು ಮತ್ತು ನಾಯಕರ ವಿರುದ್ಧವೂ 1986ರ ನಿಬಂಧನೆಗಳನ್ನು ನಿಯಮಿತವಾಗಿ ಬಳಸಿದೆ ಎಂದು ಆರೋಪಿಸಲಾಗಿದೆ.

ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದಾಗಿನಿಂದ 69,332 ಜನರ ವಿರುದ್ಧ ದರೋಡೆ ಕಾಯಿದೆಯಡಿ ಮತ್ತು 887 ಜನರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದಿತ್ಯನಾಥ್ ಅವರ ಸರ್ಕಾರವು ಮಾಫಿಯಾ ಗ್ಯಾಂಗ್‌ನ 68 ಸದಸ್ಯರ ಮೇಲೆ ಕಠಿಣ ಮೇಲೆ ಕ್ರಮಕೈಗೊಂಡಿದೆ. ಅವರಿಂದ 3,650 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಸಾಮಾಜಿಕ ಕಾರ್ಯಕರ್ತ ರಾಜೀವ್ ಯಾದವ್ ಅವರು ಎನ್‌ಕೌಂಟರ್‌ಗಳ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯನ್ನು ಪರಿಹರಿಸುವ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದಾರೆ. ಎನ್‌ಕೌಂಟರ್‌ಗಳ ಮೂಲಕ ಅಪರಾಧವನ್ನು ನಿಯಂತ್ರಿಸಲಾಗುತ್ತಿದೆ ಎಂದು ಅವರು ಹೇಳುತ್ತಾರೆ. ಮತ್ತೇಕೆ ಅವರು ದರೋಡೆ ಕಾಯಿದೆ ಮತ್ತು ಗೂಂಡಾ ಕಾಯ್ದೆಯ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಮತ್ತು ಆಸ್ತಿಯನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಯುಪಿಯಲ್ಲಿ ಸಣ್ಣ ಪ್ರಕರಣದ ಆರೋಪಿಗಳನ್ನು ಸುಲಭವಾಗಿ ಬಂಧಿಸಬಹುದಾದರೂ ಪೊಲೀಸರು ಫೈರಿಂಗ್ ಮಾಡಿರುವುದನ್ನು ಸಾಮಾಜಿಕ ಕಾರ್ಯಕರ್ತ ರಾಜೀವ್ ಯಾದವ್ ಗಮನಿಸಿದ್ದಾರೆ. ಸೆಪ್ಟೆಂಬರ್‌ನಲ್ಲಿ ಅಂಬೇಡ್ಕರ್ ನಗರದಲ್ಲಿ 16 ವರ್ಷದ ಬಾಲಕಿಯ ದುಪಟ್ಟಾವನ್ನು ಎಳೆದ ನಂತರ ಮೋಟಾರ್‌ಸೈಕಲ್‌ನಿಂದ ಬಿದ್ದು ಬಾಲಕಿ ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಯಾದವ್ ಉಲ್ಲೇಖಿಸಿದ್ದಾರೆ.

ಅ.20 ರಂದು ರಾಜ್ಯದಲ್ಲಿ ನಡೆದ 4 ಎನ್‌ಕೌಂಟಗಳು ಕ್ಷುಲ್ಲಕ ಕಾರಣಕ್ಕೆ ನಡೆದಿದೆ. ಅ.19ರ ರಾತ್ರಿ ಬುಲಂದ್‌ಶಹರ್‌ನಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಆತನಿಂದ ಕಳ್ಳತನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಅ.20 ರಂದು ಪೊಲೀಸರು ಮಹಾರಾಜಗಂಜ್‌ನಲ್ಲಿ ಇಬ್ಬರನ್ನು ಗುಂಡು ಹಾರಿಸಿ ಅವರಿಂದ 55 ಲಕ್ಷ ರೂಪಾಯಿ ಮತ್ತು 12 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. ಇಂತಹ ಸಣ್ಣ ಸಣ್ಣ ಪ್ರಕರಣಗಳಲ್ಲೂ ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ ಎಂದು ರಾಜೀವ್‌ ಯಾದವ್‌ ಹೇಳಿದ್ದಾರೆ.

ಇದನ್ನು ಓದಿ: ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದ ಮಿಜೋರಾಂ ಸಿಎಂ; ಬಿಜೆಪಿಗೆ ಶಾಕ್ ಕೊಟ್ಟ ಮೈತ್ರಿ ಪಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...