Homeಮುಖಪುಟಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ ಬುಡಕಟ್ಟು ಬಾಲಕನಿಗೆ ಥಳಿಸಿ ಹತ್ಯೆ

ಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ ಬುಡಕಟ್ಟು ಬಾಲಕನಿಗೆ ಥಳಿಸಿ ಹತ್ಯೆ

- Advertisement -
- Advertisement -

ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಸಬಾಂಗ್ ಪ್ರದೇಶದಲ್ಲಿ ಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ 12 ವರ್ಷದ ಬುಡಕಟ್ಟು ಸಮುದಾಯದ ಬಾಲಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಸಬಾಂಗ್‌ನ ಬೋರೋಚರಾ ಗ್ರಾಮದ ನಿವಾಸಿ, ಲೋಧಾ ಶಬರ್ ಸಮುದಾಯದ ಬಾಲಕ ಸುಭಾ ನಾಯಕ್  ಆಹಾರವನ್ನು ಕಳ್ಳತನ ಮಾಡಿದ್ದಾನೆಂದು ಮರಕ್ಕೆ ಕಟ್ಟಿಹಾಕಿ ಹಾಕಿ ಚಿತ್ರಹಿಂಸೆ ನೀಡಲಾಗಿದೆ.

ಈ ಘಟನೆಯು ಸೆ.27ರಂದು ಬುಧವಾರ ನಡೆದಿದೆ. ಸ್ಥಳೀಯ ಆಹಾರ ಮಳಿಗೆಯ ಮಾಲೀಕನೋರ್ವ ಅಂಗಡಿಯಿಂದ ಹೊರಗೆ ಹೋಗಿದ್ದ. ಈ ವೇಳೆ ಅಂಗಡಿಯಿಂದ ಆಹಾರದ ಪೊಟ್ಟಣಗಳು ಕಾಣೆಯಾಗಿದ್ದವು. ಅಂಗಡಿ ಮಾಲಕ ಬಂದು ಇದನ್ನು ನೆರೆಹೊರೆಯವರಿಗೆ ತಿಳಿಸಿದ್ದಾರೆ. ಈ ವೇಳೆ ದನಕರುಗಳಿಗೆ ಆಹಾರಕ್ಕಾಗಿ ಬಳಸುತ್ತಿದ್ದ ಅಲ್ಯೂಮಿನಿಯಂ ಪಾತ್ರೆಯೂ ನಾಪತ್ತೆಯಾಗಿದೆ ಎಂದು ಕೆಲವರು ಹೇಳಿದ್ದಾರೆ.

ಈ ವೇಳೆ ಅಂಗಡಿಯ ಎದುರಿನ ಗುಡಿಸಲಿನ ಬಳಿ ಸುಭಾ ನಾಯಕ್ ಕುಳಿತಿದ್ದರು. ಜನರ ಗುಂಪು ಸುಭಾ ನಾಯಕ್ ಅವರ ಮನೆಗೆ ನುಗ್ಗಿ ಹುಡುಕಾಟ ನಡೆಸಿದ್ದಾರೆ. ಆದರೆ ಏನೂ ಸಿಕ್ಕಿರಲಿಲ್ಲ. ಆದರೆ ಆ ಬಳಿಕ ಆತನ ಮೇಲೆ ಶಂಕೆಯ ಆಧಾರದಲ್ಲಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ಪಂಚಾಯತ್ ಸದಸ್ಯ ಮೊನೊರಂಜನ್ ಮಾಲ್ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಆದರೆ ಪ್ರಾಥಮಿಕ ತನಿಖೆಯ ಪ್ರಕಾರ ನಾವು ಕೊಲೆ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಪಶ್ಚಿಮ ಮೇದಿನಿಪುರ ಎಸ್ಪಿ ಧೃತಿಮಾನ್ ಸರ್ಕಾರ್ ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ  ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು,  ಭಾರೀ ಪೊಲೀಸ್ ಭದ್ರತೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಸಂತ್ರಸ್ತನ ಸೋದರ ಸಂಬಂಧಿ,  ನನ್ನ ಮನೆಯಿಂದ ಘಟನೆ ನಡೆದ ಸ್ಥಳಕ್ಕೆ 10 ನಿಮಿಷಗಳ ಕಾಲ್ನಡಿಗೆಯ ದೂರ ಇರುವುದು. ಕೆಲವು ಸ್ಥಳೀಯರು ಆತನನ್ನು ಥಳಿಸುತ್ತಿರುವುದನ್ನು ನಾನು ನೋಡಿದೆ. ನಾನು ಇದಕ್ಕೆ ವಿರೋಧಿಸಿದೆ ಆದರೆ ಯಾರೂ ನನ್ನ ಮಾತನ್ನು ಕೇಳಲಿಲ್ಲ. ಅವರು ಅವನನ್ನು ಸ್ಥಳೀಯ ಕ್ಷೌರಿಕನ ಅಂಗಡಿಗೆ ಕರೆದೊಯ್ದು ತಲೆ ಬೋಳಿಸಿದರು. ನಂತರ ಬಸ್ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿ ಪಂಚಾಯಿತಿ ಸದಸ್ಯರ ಸೂಚನೆ ಮೇರೆಗೆ ಮತ್ತೆ ಹಲ್ಲೆ ಮಾಡಿದ್ದಾರೆ. ಪೊಲೀಸರಿಗೆ ಕರೆ ಮಾಡುವಂತೆ ನಾನು ಅವರಿಗೆ ಮನವಿ ಮಾಡುತ್ತಲೇ ಇದ್ದೆ ಆದರೆ ಅವರು ನನ್ನ ಮಾತನ್ನು ನಿರ್ಲಕ್ಷಿಸಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...