Homeಮುಖಪುಟಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ ಬುಡಕಟ್ಟು ಬಾಲಕನಿಗೆ ಥಳಿಸಿ ಹತ್ಯೆ

ಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ ಬುಡಕಟ್ಟು ಬಾಲಕನಿಗೆ ಥಳಿಸಿ ಹತ್ಯೆ

- Advertisement -
- Advertisement -

ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಸಬಾಂಗ್ ಪ್ರದೇಶದಲ್ಲಿ ಆಹಾರದ ಪೊಟ್ಟಣ ಕಳ್ಳತನದ ಶಂಕೆಯಲ್ಲಿ 12 ವರ್ಷದ ಬುಡಕಟ್ಟು ಸಮುದಾಯದ ಬಾಲಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಸಬಾಂಗ್‌ನ ಬೋರೋಚರಾ ಗ್ರಾಮದ ನಿವಾಸಿ, ಲೋಧಾ ಶಬರ್ ಸಮುದಾಯದ ಬಾಲಕ ಸುಭಾ ನಾಯಕ್  ಆಹಾರವನ್ನು ಕಳ್ಳತನ ಮಾಡಿದ್ದಾನೆಂದು ಮರಕ್ಕೆ ಕಟ್ಟಿಹಾಕಿ ಹಾಕಿ ಚಿತ್ರಹಿಂಸೆ ನೀಡಲಾಗಿದೆ.

ಈ ಘಟನೆಯು ಸೆ.27ರಂದು ಬುಧವಾರ ನಡೆದಿದೆ. ಸ್ಥಳೀಯ ಆಹಾರ ಮಳಿಗೆಯ ಮಾಲೀಕನೋರ್ವ ಅಂಗಡಿಯಿಂದ ಹೊರಗೆ ಹೋಗಿದ್ದ. ಈ ವೇಳೆ ಅಂಗಡಿಯಿಂದ ಆಹಾರದ ಪೊಟ್ಟಣಗಳು ಕಾಣೆಯಾಗಿದ್ದವು. ಅಂಗಡಿ ಮಾಲಕ ಬಂದು ಇದನ್ನು ನೆರೆಹೊರೆಯವರಿಗೆ ತಿಳಿಸಿದ್ದಾರೆ. ಈ ವೇಳೆ ದನಕರುಗಳಿಗೆ ಆಹಾರಕ್ಕಾಗಿ ಬಳಸುತ್ತಿದ್ದ ಅಲ್ಯೂಮಿನಿಯಂ ಪಾತ್ರೆಯೂ ನಾಪತ್ತೆಯಾಗಿದೆ ಎಂದು ಕೆಲವರು ಹೇಳಿದ್ದಾರೆ.

ಈ ವೇಳೆ ಅಂಗಡಿಯ ಎದುರಿನ ಗುಡಿಸಲಿನ ಬಳಿ ಸುಭಾ ನಾಯಕ್ ಕುಳಿತಿದ್ದರು. ಜನರ ಗುಂಪು ಸುಭಾ ನಾಯಕ್ ಅವರ ಮನೆಗೆ ನುಗ್ಗಿ ಹುಡುಕಾಟ ನಡೆಸಿದ್ದಾರೆ. ಆದರೆ ಏನೂ ಸಿಕ್ಕಿರಲಿಲ್ಲ. ಆದರೆ ಆ ಬಳಿಕ ಆತನ ಮೇಲೆ ಶಂಕೆಯ ಆಧಾರದಲ್ಲಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ಪಂಚಾಯತ್ ಸದಸ್ಯ ಮೊನೊರಂಜನ್ ಮಾಲ್ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಆದರೆ ಪ್ರಾಥಮಿಕ ತನಿಖೆಯ ಪ್ರಕಾರ ನಾವು ಕೊಲೆ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಪಶ್ಚಿಮ ಮೇದಿನಿಪುರ ಎಸ್ಪಿ ಧೃತಿಮಾನ್ ಸರ್ಕಾರ್ ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ  ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು,  ಭಾರೀ ಪೊಲೀಸ್ ಭದ್ರತೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಸಂತ್ರಸ್ತನ ಸೋದರ ಸಂಬಂಧಿ,  ನನ್ನ ಮನೆಯಿಂದ ಘಟನೆ ನಡೆದ ಸ್ಥಳಕ್ಕೆ 10 ನಿಮಿಷಗಳ ಕಾಲ್ನಡಿಗೆಯ ದೂರ ಇರುವುದು. ಕೆಲವು ಸ್ಥಳೀಯರು ಆತನನ್ನು ಥಳಿಸುತ್ತಿರುವುದನ್ನು ನಾನು ನೋಡಿದೆ. ನಾನು ಇದಕ್ಕೆ ವಿರೋಧಿಸಿದೆ ಆದರೆ ಯಾರೂ ನನ್ನ ಮಾತನ್ನು ಕೇಳಲಿಲ್ಲ. ಅವರು ಅವನನ್ನು ಸ್ಥಳೀಯ ಕ್ಷೌರಿಕನ ಅಂಗಡಿಗೆ ಕರೆದೊಯ್ದು ತಲೆ ಬೋಳಿಸಿದರು. ನಂತರ ಬಸ್ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿ ಪಂಚಾಯಿತಿ ಸದಸ್ಯರ ಸೂಚನೆ ಮೇರೆಗೆ ಮತ್ತೆ ಹಲ್ಲೆ ಮಾಡಿದ್ದಾರೆ. ಪೊಲೀಸರಿಗೆ ಕರೆ ಮಾಡುವಂತೆ ನಾನು ಅವರಿಗೆ ಮನವಿ ಮಾಡುತ್ತಲೇ ಇದ್ದೆ ಆದರೆ ಅವರು ನನ್ನ ಮಾತನ್ನು ನಿರ್ಲಕ್ಷಿಸಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಣಪತಿ ಮೂರ್ತಿ ಬಳಿ ಇಟ್ಟಿದ್ದ ಬಾಳೆಹಣ್ಣು ಕೊಂಡೊಯ್ದ ಶಂಕೆ: ಮುಸ್ಲಿಂ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...