Homeಮುಖಪುಟ'ಪ್ಯಾಲೆಸ್ತೀನ್ ಮಕ್ಕಳಿಗಾಗಿ': ಅಮೆರಿಕ ಬೆಂಬಲಿತ ಪ್ರಶಸ್ತಿ ತಿರಸ್ಕರಿಸಿದ ಆದಿವಾಸಿ ಕವಿ ಜೆಸಿಂತಾ ಕೆರ್ಕಟ್ಟಾ

‘ಪ್ಯಾಲೆಸ್ತೀನ್ ಮಕ್ಕಳಿಗಾಗಿ’: ಅಮೆರಿಕ ಬೆಂಬಲಿತ ಪ್ರಶಸ್ತಿ ತಿರಸ್ಕರಿಸಿದ ಆದಿವಾಸಿ ಕವಿ ಜೆಸಿಂತಾ ಕೆರ್ಕಟ್ಟಾ

- Advertisement -
- Advertisement -

ಆದಿವಾಸಿ ಕವಿ ಮತ್ತು ಪತ್ರಕರ್ತೆ ಜೆಸಿಂತಾ ಕೆರ್ಕಟ್ಟಾ ಅವರು ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ನ್ಯಾಷನ್ ಡೆವಲಪ್‌ಮೆಂಟ್ ಮತ್ತು ರೂಮ್ ಟು ರೀಡ್ ಇಂಡಿಯಾ ಟ್ರಸ್ಟ್ ಜಂಟಿಯಾಗಿ ನೀಡುವ 2024 ರ ‘ರೂಮ್ ಟು ರೀಡ್ ಯಂಗ್ ಆಥರ್ ಅವಾರ್ಡ್’ ಅನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಗಾಝಾದ ಮೇಲಿನ ಇಸ್ರೇಲ್ ಆಕ್ರಮಣವನ್ನು ಪ್ರತಿಭಟಿಸಿ, ಪ್ಯಾಲೆಸ್ತೀನ್‌ನೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ಕೆರ್ಕೆಟ್ಟಾ ಪ್ರಶಸ್ತಿ ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆರ್ಕೆಟ್ಟಾ ಅವರ ಮಕ್ಕಳ ಕವನ ಸಂಕಲನ ‘ಜಿರ್ಹುಲ್‌’ ಗೆ ಪ್ರಶಸ್ತಿ ಘೋಷಣೆಯಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅಕ್ಟೋಬರ್ 7ರಂದು ದೆಹಲಿಯಲ್ಲಿ ಆಯೋಜಿಸಲಾಗಿದೆ.

“ಮಕ್ಕಳ ಶಿಕ್ಷಣಕ್ಕಾಗಿ ವಾಯು ಯಾನ ಕಂಪೆನಿ ಬೋಯಿಂಗ್‌ನೊಂದಿಗೆ ಕೂಡ ರೂಮ್ ಟು ರೀಡ್ ಇಂಡಿಯಾ ಟ್ರಸ್ಟ್ ಸಂಬಂಧ ಹೊಂದಿದೆ. ಶಸ್ತ್ರಾಸ್ತ್ರ ವ್ಯಾಪಾರ ಹಾಗೂ ಮಕ್ಕಳ ಪಾಲನೆ ಏಕ ಕಾಲದಲ್ಲಿ ನಡೆಯಲು ಹೇಗೆ ಸಾಧ್ಯ? ಏಕೆಂದರೆ, ಅದೇ ಶಸ್ತ್ರಾಸ್ತ್ರಗಳಿಂದ ಮಕ್ಕಳ ಜಗತ್ತು ನಾಶವಾಗುತ್ತಿದೆ” ಎಂದು ಕೆರ್ಕಟ್ಟಾ ಹೇಳಿದ್ದಾರೆ.

“ಮಕ್ಕಳಿಗಾಗಿ ಉತ್ತಮ ಜಗತ್ತನ್ನು ನಿರ್ಮಿಸುವಲ್ಲಿ ಹಿರಿಯರು ಮಹತ್ವದ ಪಾತ್ರವನ್ನು ನಿರ್ವಹಿಸದೇ ಇರುವಾಗ, ಈ ಪ್ರಶಸ್ತಿ ನಿಜವಾಗಿಯೂ ಯಾವ ಮೌಲ್ಯವನ್ನು ಹೊಂದಿದೆ? ಎಂದು ಪ್ರಶ್ನಿಸಿದ್ದಾರೆ.

ವಾಯು ಯಾನ ಕಂಪೆನಿ ಬೋಯಿಂಗ್ ಕಳೆದ 75ಕ್ಕೂ ಅಧಿಕ ವರ್ಷಗಳಿಂದ ಇಸ್ರೇಲ್‌ನೊಂದಿಗೆ ಸಂಬಂಧ ಹೊಂದಿದೆ. ಅಮೆರಿಕ ಸರಕಾರ ಅನುಮೋದಿಸಿದ ವಾಣಿಜ್ಯ ಒಪ್ಪಂದದ ಭಾಗವಾಗಿ ಬೋಯಿಂಗ್ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ.

ಮೇ ನಲ್ಲಿ ಎನ್‌ಪಿಆರ್ ನೆಟ್‌ವರ್ಕ್ ಮಾಡಿದ ವರದಿ ಪ್ರಕಾರ, ಅಮೆರಿಕದ ಕಂಪೆನಿಗಳಲ್ಲಿ ಬೋಯಿಂಗ್ 2021 ಹಾಗೂ 2023ರ ನಡುವೆ ಇಸ್ರೇಲ್‌ಗೆ ಬಾಂಬ್ ಹಾಗೂ ಸ್ಫೋಟಕಗಳ ಪೂರೈಕೆದಾರರಲ್ಲಿ ಪ್ರಥಮ ಸ್ಥಾನದಲ್ಲಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ ಸ್ಮೃತಿ ಇರಾನಿ ಅವರು ರೂಮ್ ಟು ರೀಡ್ ಇಂಡಿಯಾ ಮತ್ತು ಬೋಯಿಂಗ್ ಪಾಲುದಾರಿಕೆಯೊಂದಿಗೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಸಾಕ್ಷರತಾ ಕಾರ್ಯಕ್ರಮ ಪ್ರಾರಂಭಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ : ಇಸ್ರೇಲ್‌ ಗುರಿಯಾಗಿಸಿಕೊಂಡು 200ಕ್ಕೂ ಹೆಚ್ಚು ಕ್ಷಿಪಣಿ ಹಾರಿಸಿದ ಇರಾನ್; ಸಾವುನೋವುಗಳ ವರದಿಗಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...