Homeಮುಖಪುಟವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ 'ಮಾಟಗಾತಿ' ಹಣೆಪಟ್ಟಿಯ ಹತ್ಯೆ

ವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ ‘ಮಾಟಗಾತಿ’ ಹಣೆಪಟ್ಟಿಯ ಹತ್ಯೆ

- Advertisement -
- Advertisement -

ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ವಾಮಾಚಾರ ಮಾಡುತ್ತಿದ್ದ ಆರೋಪದ ಮೇಲೆ ಆದಿವಾಸಿ ಮಹಿಳೆಯೊಬ್ಬಳ ಮೇಲೆ  ಹಲ್ಲೆ ನಡೆಸಿ ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ವಾಮಾಚಾರದ ಹೆಸರಿನಲ್ಲಿ ಹತ್ಯೆ, ಸಾಮಾಜಿಕ ಬಹಿಷ್ಕಾರ ಅಸ್ಸಾಂನ ಭಾಗಗಳಲ್ಲಿ ಸಾಮಾನ್ಯವಾಗಿದೆ. 2018ರಲ್ಲಿ ವಿಚ್-ಹಂಟಿಂಗ್ ಆಕ್ಟ್(ನಿಷೇಧ, ತಡೆಗಟ್ಟುವಿಕೆ ಮತ್ತು ರಕ್ಷಣೆ) ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆ ಪ್ರಕಾರ, ಮಾಟಗಾತಿ ಎಂದು ಆರೋಪದಲ್ಲಿ ವ್ಯಕ್ತಿಯ ಸಾವಿಗೆ ಕಾರಣವಾಗುವ ಆಕ್ರಮಣ ಅಥವಾ ಹಲ್ಲೆಗೆ ಸಂಬಂಧಿಸಿ IPC ಸೆಕ್ಷನ್ 302ರ ಪ್ರಕಾರ ಶಿಕ್ಷೆಗೆ ಒಳಗಾಗುತ್ತಾರೆ. ಇದಲ್ಲದೆ ರಾಜ್ಯ ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಜನ ಜಾಗೃತಿ ಅಭಿಯಾನ ನಡೆಸುತ್ತಿದೆ. ಆದರೂ ಈ ಹತ್ಯೆಗಳು ಮುಂದುವರಿದಿದೆ.

‘ಮಾಟಗಾತಿ ಬೇಟೆ’ಯು ಹಿಂದಿನ ಪರಿಕಲ್ಪನೆಯಲ್ಲ, ಇದು ಇಂದು ಭಾರತದ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಜೀವಂತವಾಗಿದೆ. ಮಾಟಗಾತಿ ಎಂಬ ಹಣೆಪಟ್ಟಿ ಹಚ್ಚಿ ಮಹಿಳೆಯರನ್ನು ಹಿಂಸಿಸಲಾಗುತ್ತಿದೆ. ದರೋಡೆ ಮಾಡಲಾಗುತ್ತದೆ ಮತ್ತು ಕೊಲ್ಲಲಾಗುತ್ತದೆ. ವಾಮಾಚಾರದ ಆರೋಪಗಳಲ್ಲಿ ವದಂತಿ ಮತ್ತು ಗಾಸಿಪ್‌ಗಳು ಈ ಹತ್ಯೆಗಳಿಗೆ ಕಾರಣವಾಗುತ್ತದೆ. ಈ ಅಪರಾಧವನ್ನು ತಡೆಯಲು ಹಲವಾರು ರಾಜ್ಯಗಳು ಪ್ರತ್ಯೇಕವಾಗಿ ಕಾಯ್ದೆಗಳನ್ನು ಜಾರಿಗೆ ತಂದಿವೆ. 1999ರಲ್ಲಿ ಬಿಹಾರವು ಮಾಟಗಾತಿ ಆಚರಣೆಗಳ ತಡೆ ಕಾಯಿದೆಯನ್ನು ಜಾರಿಗೊಳಿಸಿದೆ. ಜಾರ್ಖಂಡ್  2001ರಲ್ಲಿ ಈ ಕುರಿತು ಕಾಯ್ದೆ ಜಾರಿಗೊಳಿಸಿದೆ. ಛತ್ತೀಸ್‌ಗಢವು 2005ರಲ್ಲಿ ಈ ಬಗ್ಗೆ ಕಾಯಿದೆಯನ್ನು ಜಾರಿಗೆ ತಂದಿತು. ರಾಜಸ್ಥಾನ ಮತ್ತು ಅಸ್ಸಾಂ ಕೂಡ ಈ ಕುರಿತು 2015ರಲ್ಲಿ ಕಾಯ್ದೆಯನ್ನು ಜಾರಿಗೊಳಿಸಿದೆ.

ಇತ್ತೀಚಿನ ಪ್ರಕರಣದಲ್ಲಿ ಅಸ್ಸಾಂನಲ್ಲಿ ಸಂಗೀತಾ ಕತಿ ಅಮಾನವೀಯ ಕೃತ್ಯಕ್ಕೆ ಬಲಿಯಾದ ಸಂತ್ರಸ್ತೆ. ಈಕೆಗೆ ಮೂವರು ಮಕ್ಕಳಿದ್ದಾರೆ. ಸೂರಜ್ ಬಾಗ್ವಾರ್ ಎಂಬಾತ ನಿಜ್ ಬಹ್ಬರಿ ಗ್ರಾಮದ ಹೊರಗಿನಿಂದ ಕೆಲವು ಜನರನ್ನು ಕರೆತಂದು ಈ ಕೃತ್ಯವನ್ನು ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಅವರೆಲ್ಲರೂ ಒಂದೇ ಗ್ರಾಮ ನಿಜ್ ಬಹ್ಬರಿ ನಿವಾಸಿಗಳಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಮಧುರಿಮಾ ದಾಸ್, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ವಾಮಾಚಾರ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಮಹಿಳೆಯೊಬ್ಬರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಸುಟ್ಟು ಹಾಕಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಿಟಿಐ ವರದಿಯ ಪ್ರಕಾರ ನೆರೆಹೊರೆಯವರು ವಿವಿಧ ವಿಷಯಗಳ ಬಗ್ಗೆ ಆಕೆಯ ಜೊತೆ ಪದೇ ಪದೇ ಜಗಳವಾಡುತ್ತಿದ್ದರು ಮತ್ತು ಆಕೆ ವಾಮಾಚಾರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಪಾನಮತ್ತರಾಗಿದ್ದ ದುಷ್ಕರ್ಮಿಗಳ ಗುಂಪು ಆಕೆಯ ಪತಿಯನ್ನು ಕಟ್ಟಿ ಹಾಕಿ ನಂತರ ಹರಿತವಾದ ಆಯುಧಗಳಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದಾರೆ.

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಸಂಗೀತಾ ಪತಿ ರಾಮ್ ಕಪಿ, ರಾತ್ರಿ ಪತ್ನಿ ಅಡುಗೆ ಮಾಡುತ್ತಿದ್ದಾಗ ದುಷ್ಕರ್ಮಿಗಳು ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಅವರು ಅವಳನ್ನು ಮಾಟಗಾತಿ ಎಂದು ನಿಂದಿಸಿ ಹಲ್ಲೆ ನಡೆಸಿದರು. ಅವಳನ್ನು ಹೊಡೆಯಬೇಡಿ ಮತ್ತು ಬೆಳಿಗ್ಗೆ ಬನ್ನಿ ಎಂದು ನಾನು ಅವರನ್ನು ವಿನಂತಿಸಿದೆ ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನನಗೂ ಥಳಿಸಿದ್ದಾರೆ. ನಮ್ಮನ್ನು ಥಳಿಸುತ್ತಿರುವುದನ್ನು ನೋಡಿ ನನ್ನ ಮೂವರು ಮಕ್ಕಳು ಅಳುತ್ತಿದ್ದಾಗ ನಾನು ಅವರನ್ನು ಹತ್ತಿರದಲ್ಲಿ ವಾಸಿಸುವ ನನ್ನ ಸಹೋದರನ ಮನೆಗೆ ಬಿಡಲು ಅವರನ್ನು ಕರೆದುಕೊಂಡು ಹೋದೆ, ನಾನು ಮಕ್ಕಳನ್ನು ಬಿಟ್ಟು ಬರುವಾಗ ನನ್ನ ಮನೆಗೆ ಬೆಂಕಿ ಹಚ್ಚಲಾಗಿತ್ತು. ಪತ್ನಿ ಜೀವಂತವಾಗಿ ಸುಟ್ಟು ಕರಕಲಾಗಿದ್ದಳು ಎಂದು ಹೇಳಿದ್ದಾರೆ.

ಮೋಹನ್‌ಪುರ ಗ್ರಾಮದಲ್ಲಿ ವಾಮಾಚಾರದ ಶಂಕೆಯಲ್ಲಿ ಬುಡಕಟ್ಟು ಮಹಿಳೆಯ ಹತ್ಯೆ

2022ರ ಮೇ.ತಿಂಗಳಲ್ಲಿ ಅಸ್ಸಾಂನಲ್ಲಿ 45 ವರ್ಷದ ಆದಿವಾಸಿ ಮಹಿಳೆಯನ್ನು ವಾಮಾಚಾರ ಮಾಡುತ್ತಿದ್ದಾಳೆ ಎಂದು ಶಂಕಿಸಿದ ಗುಂಪೊಂದು ಆಕೆಯನ್ನು ಕೊಂದು ಹಾಕಿದೆ. ಕೊಕ್ರಜಾರ್ ಜಿಲ್ಲೆಯ ಮೋಹನ್‌ಪುರ ಗ್ರಾಮದ ನಿವಾಸಿಯಾಗಿರುವ ಅಂಜಲಿ ಮುರ್ಮು ಎಂಬ ಮಹಿಳೆಯನ್ನು ಮೊದಲು ಕೊಂದು ನಂತರ ಆಕೆಯ ದೇಹವನ್ನು ಮರಕ್ಕೆ ನೇಣು ಹಾಕಲಾಗಿತ್ತು. ಮಹಿಳೆಯ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿತ್ತು.

ಗುಂಡಾಪುರಿ ಗ್ರಾಮದಲ್ಲಿ ವಾಮಾಚಾರದ ಶಂಕೆಯಲ್ಲಿ ಮೂವರ ಹತ್ಯೆ

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಇದೇ ಡಿ.6ರಂದು ನಾಗ್ಪುರದ ಗುಂಡಾಪುರಿ ಗ್ರಾಮದಲ್ಲಿ ವಾಮಾಚಾರದ ಶಂಕೆಯಲ್ಲಿ ವೃದ್ಧ ದಂಪತಿ ಮತ್ತು ಅವರ ಮೊಮ್ಮಗಳನ್ನು ಕೊಂದ ಬಳಿಕ 9 ಜನರನ್ನು ಬಂಧಿಸಲಾಯಿತು.

ದೇವು ಕುಮೋತಿ (60) ಮತ್ತು ಅವರ ಪತ್ನಿ ಬಿಚ್ಚೆ (55), ಮೊಮ್ಮಗಳು ಅರ್ಚನಾ ತಳಂಡಿ (10) ಅವರನ್ನು ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ದಂಪತಿಯ ಪುತ್ರ ರಮೇಶ್ ಮತ್ತು ಇತರ ಸಂಬಂಧಿಕರು ಈ ಘೋರ ಕೃತ್ಯವನ್ನು ನಡೆಸಿದ್ದರು.

ಟೈಮ್ಸ್‌ ಆಫ್‌ ಇಂಡಿಯಾ ವರದಿಯ ಪ್ರಕಾರ, ವಾಮಾಚಾರಕ್ಕೆ ಸಂಬಂಧಿಸಿ ಈ ಕೃತ್ಯ ನಡೆದಿದೆ. ಮಾಟಮಂತ್ರದ ವಿಚಾರದಲ್ಲಿ ಗ್ರಾಮಸ್ಥರಿಂದ ಬಹಿಷ್ಕಾರಕ್ಕೊಳಗಾದ ತಂದೆಯಿಂದ ರಮೇಶ್ ಮತ್ತು ವಿನು ಕೋಪಗೊಂಡು ಕೃತ್ಯ ನಡೆಸಿದ್ದರು.

ಜಾರ್ಖಂಡ್‌ನ ವಾಮಾಚಾರದ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ

ವಾಮಾಚಾರದಲ್ಲಿ ತೊಡಗಿದ್ದ ಸಂಶಯದಲ್ಲಿ ಒಂದೇ ಕುಟುಂಬದ ನಾಲ್ವರನ್ನು ನೆರೆಮನೆಯ ಇಬ್ಬರು ಹೊಡೆದು ಸಾಯಿಸಿದ ಘಟನೆ ಜಾರ್ಖಂಡ್‌ನ ಸೆರೈಕೆಲಾ–ಕಾರ್ಸಾವನ್‌ ಜಿಲ್ಲೆಯಲ್ಲಿ ನಡೆದಿದೆ. ಜಿಂಕಾರು ಮುಂಡೈನ್‌ (75), ಮಗಳು ಸೋರು ಮುಂಡೈನ್‌ (55), ಇಬ್ಬರು ಗಂಡು ಮಕ್ಕಳಾದ ಘಾಸಿಯಾ ಮುಂಡ (50), ಹಾಗಲ್‌ ಮುಂಡ (40) ಅವರನ್ನು ವಾಮಾಚಾರದ ಆರೋಪದಲ್ಲಿ ಶ್ಯಾಮ್‌ಲಾಲ್‌ ಮುಂಡ ಮತ್ತು ಸಹೋದರ ರಾಮ್‌ಸಿಂಗ್‌ ಮುಂಡ ನಾಲ್ವರನ್ನೂ ಹೊಡೆದು ಕೊಲೆ ಮಾಡಿದ್ದರು.

ಇನ್ನೊಂದು ಪ್ರಕರಣದಲ್ಲಿ ವಾಮಾಚಾರ ನಡೆಸುತ್ತಿದ್ದ ಶಂಕೆಯ ಮೇಲೆ ಮೂವರು ಮಹಿಳೆಯರನ್ನು ಹತ್ಯೆಗೈದಿರುವ ಘಟನೆ ಜಾರ್ಖಂಡ್‌ನ ಬುಂಡು ಉಪವಿಭಾಗದ ಸೋನಾಹಟು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿತ್ತು.

ರಾಯಲು ದೇವಿ (45) ಮತ್ತು ಧೋಲೋ ದೇವಿ (60) ಮತ್ತು ಅಲೂಮಣಿ ದೇವಿ (55) ಅವರನ್ನು ಹತ್ಯೆ ಮಾಡಿ  ಶವಗಳನ್ನು  ಅರಣ್ಯದಲ್ಲಿ ಎಸೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದರು.

 ವಾಮಾಚಾರದ ಶಂಕೆಯಲ್ಲಿ ಬುಡಕಟ್ಟು ಮಹಿಳೆ ಮತ್ತು ಆಕೆಯ 4 ಮಕ್ಕಳ ಹತ್ಯೆ
ಒಡಿಶಾದಲ್ಲಿ ವಾಮಾಚಾರದ ಶಂಕೆಯಲ್ಲಿ ಬುಡಕಟ್ಟು ಮಹಿಳೆ ಮತ್ತು ಆಕೆಯ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿ ಬಾವಿಯಲ್ಲಿ ಎಸೆಯಲಾಗಿತ್ತು. ದೇಬ್ರಾ ಮುಂಡಾ ಮತ್ತು ಇತರ ಆರೋಪಿಗಳು ಸುದಮ್ ಮುಂಡಾ ಅವರ ಮನೆಗೆ ಬಲವಂತವಾಗಿ ನುಗ್ಗಿದರು, ಅಲ್ಲಿ ಅವರು ಮಾಂಗ್ರಿ ಮತ್ತು ಅವರ ಮಕ್ಕಳನ್ನು ವಾಮಾಚಾರದ ಆರೋಪದಲ್ಲಿ ಹತ್ಯೆ ಮಾಡಿದ್ದರು.

ಒಡಿಶಾ ಪ್ರಿವೆನ್ಶನ್ ಆಫ್ ವಿಚ್-ಹಂಟಿಂಗ್ ಆಕ್ಟ್, 2013 ರ ಹೊರತಾಗಿಯೂ ರಾಜ್ಯದಲ್ಲಿ ವಾಮಾಚಾರದ ಅನುಮಾನಕ್ಕೆ ಸಂಬಂಧಿಸಿದ ಹತ್ಯೆಗಳು ಹೆಚ್ಚುತ್ತಿವೆ.

ವಾಮಾಚಾರದ ಶಂಕೆಯಲ್ಲಿ 107 ಜನರನ್ನು ಹತ್ಯೆ 

ಅಸ್ಸಾಂನಲ್ಲಿ ವಾಮಾಚಾರ ನಡೆಸಿದ್ದಾರೆ ಎಂಬ ಶಂಕೆಯಲ್ಲಿ 2011ರ ಬಳಿಕ ಒಟ್ಟು 107 ಜನರನ್ನು ಹತ್ಯೆ ಮಾಡಲಾಗಿದೆ ಎಂದು ರಾಜ್ಯದ ಸಂಸದೀಯ ವ್ಯವಹಾರಗಳ ಸಚಿವ ಚಂದ್ರಮೋಹನ್ ಪಟೋವರಿ ವಿಧಾನಸಭೆಗೆ 2019ರಲ್ಲಿ ಮಾಹಿತಿ ನೀಡಿದ್ದರು.

ವಾಮಾಚಾರ ನಡೆಸಿರುವ ಆರೋಪದಲ್ಲಿ ದ್ವೇಷ ಸಾಧನೆಗೆ ಸಂಬಂಧಿಸಿದ ಘಟನೆಯಲ್ಲಿ 2011ರಿಂದ 2016ರ ಮೇ ತಿಂಗಳಿನವರೆಗೆ 84 ಜನ ಮೃತಪಟ್ಟಿದ್ದರೆ, 2016ರಿಂದ 2019ರ ಅಕ್ಟೋಬರ್‌ವರೆಗಿನ ಅವಧಿಯಲ್ಲಿ ಮತ್ತೆ 23 ಮಂದಿಯನ್ನು ಹತ್ಯೆ ಮಾಡಲಾಗಿದೆ ಅವರು ಹೇಳಿದ್ದರು.

ಅಸ್ಸಾಂ ದ್ವೇಷ ಸಾಧನೆ(ನಿಷೇಧ, ತಡೆ ಮತ್ತು ರಕ್ಷಣೆ) ಕಾಯ್ದೆ 2015ನ್ನು ಪ್ರಕಟಿಸಿದ್ದು, ಮೂಢನಂಬಿಕೆಯ ವಿರುದ್ಧ ಜನಜಾಗೃತಿ ಅಭಿಯಾನವನ್ನು ರಾಜ್ಯದ್ಯಂತ ಆಯೋಜಿಸಿದೆ ಎಂದು ಸಚಿವರು ತಿಳಿಸಿದ್ದರು.

ಇದನ್ನು ಓದಿ: ಬ್ರಿಟನ್‌ನಲ್ಲಿ ರಾಜಕೀಯದ ಚಿತ್ರಣ ಬದಲಿಸಿದ ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...