Homeಮುಖಪುಟವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ 'ಮಾಟಗಾತಿ' ಹಣೆಪಟ್ಟಿಯ ಹತ್ಯೆ

ವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ ‘ಮಾಟಗಾತಿ’ ಹಣೆಪಟ್ಟಿಯ ಹತ್ಯೆ

- Advertisement -
- Advertisement -

ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ವಾಮಾಚಾರ ಮಾಡುತ್ತಿದ್ದ ಆರೋಪದ ಮೇಲೆ ಆದಿವಾಸಿ ಮಹಿಳೆಯೊಬ್ಬಳ ಮೇಲೆ  ಹಲ್ಲೆ ನಡೆಸಿ ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ವಾಮಾಚಾರದ ಹೆಸರಿನಲ್ಲಿ ಹತ್ಯೆ, ಸಾಮಾಜಿಕ ಬಹಿಷ್ಕಾರ ಅಸ್ಸಾಂನ ಭಾಗಗಳಲ್ಲಿ ಸಾಮಾನ್ಯವಾಗಿದೆ. 2018ರಲ್ಲಿ ವಿಚ್-ಹಂಟಿಂಗ್ ಆಕ್ಟ್(ನಿಷೇಧ, ತಡೆಗಟ್ಟುವಿಕೆ ಮತ್ತು ರಕ್ಷಣೆ) ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆ ಪ್ರಕಾರ, ಮಾಟಗಾತಿ ಎಂದು ಆರೋಪದಲ್ಲಿ ವ್ಯಕ್ತಿಯ ಸಾವಿಗೆ ಕಾರಣವಾಗುವ ಆಕ್ರಮಣ ಅಥವಾ ಹಲ್ಲೆಗೆ ಸಂಬಂಧಿಸಿ IPC ಸೆಕ್ಷನ್ 302ರ ಪ್ರಕಾರ ಶಿಕ್ಷೆಗೆ ಒಳಗಾಗುತ್ತಾರೆ. ಇದಲ್ಲದೆ ರಾಜ್ಯ ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಜನ ಜಾಗೃತಿ ಅಭಿಯಾನ ನಡೆಸುತ್ತಿದೆ. ಆದರೂ ಈ ಹತ್ಯೆಗಳು ಮುಂದುವರಿದಿದೆ.

‘ಮಾಟಗಾತಿ ಬೇಟೆ’ಯು ಹಿಂದಿನ ಪರಿಕಲ್ಪನೆಯಲ್ಲ, ಇದು ಇಂದು ಭಾರತದ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಜೀವಂತವಾಗಿದೆ. ಮಾಟಗಾತಿ ಎಂಬ ಹಣೆಪಟ್ಟಿ ಹಚ್ಚಿ ಮಹಿಳೆಯರನ್ನು ಹಿಂಸಿಸಲಾಗುತ್ತಿದೆ. ದರೋಡೆ ಮಾಡಲಾಗುತ್ತದೆ ಮತ್ತು ಕೊಲ್ಲಲಾಗುತ್ತದೆ. ವಾಮಾಚಾರದ ಆರೋಪಗಳಲ್ಲಿ ವದಂತಿ ಮತ್ತು ಗಾಸಿಪ್‌ಗಳು ಈ ಹತ್ಯೆಗಳಿಗೆ ಕಾರಣವಾಗುತ್ತದೆ. ಈ ಅಪರಾಧವನ್ನು ತಡೆಯಲು ಹಲವಾರು ರಾಜ್ಯಗಳು ಪ್ರತ್ಯೇಕವಾಗಿ ಕಾಯ್ದೆಗಳನ್ನು ಜಾರಿಗೆ ತಂದಿವೆ. 1999ರಲ್ಲಿ ಬಿಹಾರವು ಮಾಟಗಾತಿ ಆಚರಣೆಗಳ ತಡೆ ಕಾಯಿದೆಯನ್ನು ಜಾರಿಗೊಳಿಸಿದೆ. ಜಾರ್ಖಂಡ್  2001ರಲ್ಲಿ ಈ ಕುರಿತು ಕಾಯ್ದೆ ಜಾರಿಗೊಳಿಸಿದೆ. ಛತ್ತೀಸ್‌ಗಢವು 2005ರಲ್ಲಿ ಈ ಬಗ್ಗೆ ಕಾಯಿದೆಯನ್ನು ಜಾರಿಗೆ ತಂದಿತು. ರಾಜಸ್ಥಾನ ಮತ್ತು ಅಸ್ಸಾಂ ಕೂಡ ಈ ಕುರಿತು 2015ರಲ್ಲಿ ಕಾಯ್ದೆಯನ್ನು ಜಾರಿಗೊಳಿಸಿದೆ.

ಇತ್ತೀಚಿನ ಪ್ರಕರಣದಲ್ಲಿ ಅಸ್ಸಾಂನಲ್ಲಿ ಸಂಗೀತಾ ಕತಿ ಅಮಾನವೀಯ ಕೃತ್ಯಕ್ಕೆ ಬಲಿಯಾದ ಸಂತ್ರಸ್ತೆ. ಈಕೆಗೆ ಮೂವರು ಮಕ್ಕಳಿದ್ದಾರೆ. ಸೂರಜ್ ಬಾಗ್ವಾರ್ ಎಂಬಾತ ನಿಜ್ ಬಹ್ಬರಿ ಗ್ರಾಮದ ಹೊರಗಿನಿಂದ ಕೆಲವು ಜನರನ್ನು ಕರೆತಂದು ಈ ಕೃತ್ಯವನ್ನು ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಅವರೆಲ್ಲರೂ ಒಂದೇ ಗ್ರಾಮ ನಿಜ್ ಬಹ್ಬರಿ ನಿವಾಸಿಗಳಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಮಧುರಿಮಾ ದಾಸ್, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ವಾಮಾಚಾರ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಮಹಿಳೆಯೊಬ್ಬರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಸುಟ್ಟು ಹಾಕಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಿಟಿಐ ವರದಿಯ ಪ್ರಕಾರ ನೆರೆಹೊರೆಯವರು ವಿವಿಧ ವಿಷಯಗಳ ಬಗ್ಗೆ ಆಕೆಯ ಜೊತೆ ಪದೇ ಪದೇ ಜಗಳವಾಡುತ್ತಿದ್ದರು ಮತ್ತು ಆಕೆ ವಾಮಾಚಾರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಪಾನಮತ್ತರಾಗಿದ್ದ ದುಷ್ಕರ್ಮಿಗಳ ಗುಂಪು ಆಕೆಯ ಪತಿಯನ್ನು ಕಟ್ಟಿ ಹಾಕಿ ನಂತರ ಹರಿತವಾದ ಆಯುಧಗಳಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದಾರೆ.

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಸಂಗೀತಾ ಪತಿ ರಾಮ್ ಕಪಿ, ರಾತ್ರಿ ಪತ್ನಿ ಅಡುಗೆ ಮಾಡುತ್ತಿದ್ದಾಗ ದುಷ್ಕರ್ಮಿಗಳು ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಅವರು ಅವಳನ್ನು ಮಾಟಗಾತಿ ಎಂದು ನಿಂದಿಸಿ ಹಲ್ಲೆ ನಡೆಸಿದರು. ಅವಳನ್ನು ಹೊಡೆಯಬೇಡಿ ಮತ್ತು ಬೆಳಿಗ್ಗೆ ಬನ್ನಿ ಎಂದು ನಾನು ಅವರನ್ನು ವಿನಂತಿಸಿದೆ ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನನಗೂ ಥಳಿಸಿದ್ದಾರೆ. ನಮ್ಮನ್ನು ಥಳಿಸುತ್ತಿರುವುದನ್ನು ನೋಡಿ ನನ್ನ ಮೂವರು ಮಕ್ಕಳು ಅಳುತ್ತಿದ್ದಾಗ ನಾನು ಅವರನ್ನು ಹತ್ತಿರದಲ್ಲಿ ವಾಸಿಸುವ ನನ್ನ ಸಹೋದರನ ಮನೆಗೆ ಬಿಡಲು ಅವರನ್ನು ಕರೆದುಕೊಂಡು ಹೋದೆ, ನಾನು ಮಕ್ಕಳನ್ನು ಬಿಟ್ಟು ಬರುವಾಗ ನನ್ನ ಮನೆಗೆ ಬೆಂಕಿ ಹಚ್ಚಲಾಗಿತ್ತು. ಪತ್ನಿ ಜೀವಂತವಾಗಿ ಸುಟ್ಟು ಕರಕಲಾಗಿದ್ದಳು ಎಂದು ಹೇಳಿದ್ದಾರೆ.

ಮೋಹನ್‌ಪುರ ಗ್ರಾಮದಲ್ಲಿ ವಾಮಾಚಾರದ ಶಂಕೆಯಲ್ಲಿ ಬುಡಕಟ್ಟು ಮಹಿಳೆಯ ಹತ್ಯೆ

2022ರ ಮೇ.ತಿಂಗಳಲ್ಲಿ ಅಸ್ಸಾಂನಲ್ಲಿ 45 ವರ್ಷದ ಆದಿವಾಸಿ ಮಹಿಳೆಯನ್ನು ವಾಮಾಚಾರ ಮಾಡುತ್ತಿದ್ದಾಳೆ ಎಂದು ಶಂಕಿಸಿದ ಗುಂಪೊಂದು ಆಕೆಯನ್ನು ಕೊಂದು ಹಾಕಿದೆ. ಕೊಕ್ರಜಾರ್ ಜಿಲ್ಲೆಯ ಮೋಹನ್‌ಪುರ ಗ್ರಾಮದ ನಿವಾಸಿಯಾಗಿರುವ ಅಂಜಲಿ ಮುರ್ಮು ಎಂಬ ಮಹಿಳೆಯನ್ನು ಮೊದಲು ಕೊಂದು ನಂತರ ಆಕೆಯ ದೇಹವನ್ನು ಮರಕ್ಕೆ ನೇಣು ಹಾಕಲಾಗಿತ್ತು. ಮಹಿಳೆಯ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿತ್ತು.

ಗುಂಡಾಪುರಿ ಗ್ರಾಮದಲ್ಲಿ ವಾಮಾಚಾರದ ಶಂಕೆಯಲ್ಲಿ ಮೂವರ ಹತ್ಯೆ

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಇದೇ ಡಿ.6ರಂದು ನಾಗ್ಪುರದ ಗುಂಡಾಪುರಿ ಗ್ರಾಮದಲ್ಲಿ ವಾಮಾಚಾರದ ಶಂಕೆಯಲ್ಲಿ ವೃದ್ಧ ದಂಪತಿ ಮತ್ತು ಅವರ ಮೊಮ್ಮಗಳನ್ನು ಕೊಂದ ಬಳಿಕ 9 ಜನರನ್ನು ಬಂಧಿಸಲಾಯಿತು.

ದೇವು ಕುಮೋತಿ (60) ಮತ್ತು ಅವರ ಪತ್ನಿ ಬಿಚ್ಚೆ (55), ಮೊಮ್ಮಗಳು ಅರ್ಚನಾ ತಳಂಡಿ (10) ಅವರನ್ನು ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ದಂಪತಿಯ ಪುತ್ರ ರಮೇಶ್ ಮತ್ತು ಇತರ ಸಂಬಂಧಿಕರು ಈ ಘೋರ ಕೃತ್ಯವನ್ನು ನಡೆಸಿದ್ದರು.

ಟೈಮ್ಸ್‌ ಆಫ್‌ ಇಂಡಿಯಾ ವರದಿಯ ಪ್ರಕಾರ, ವಾಮಾಚಾರಕ್ಕೆ ಸಂಬಂಧಿಸಿ ಈ ಕೃತ್ಯ ನಡೆದಿದೆ. ಮಾಟಮಂತ್ರದ ವಿಚಾರದಲ್ಲಿ ಗ್ರಾಮಸ್ಥರಿಂದ ಬಹಿಷ್ಕಾರಕ್ಕೊಳಗಾದ ತಂದೆಯಿಂದ ರಮೇಶ್ ಮತ್ತು ವಿನು ಕೋಪಗೊಂಡು ಕೃತ್ಯ ನಡೆಸಿದ್ದರು.

ಜಾರ್ಖಂಡ್‌ನ ವಾಮಾಚಾರದ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ

ವಾಮಾಚಾರದಲ್ಲಿ ತೊಡಗಿದ್ದ ಸಂಶಯದಲ್ಲಿ ಒಂದೇ ಕುಟುಂಬದ ನಾಲ್ವರನ್ನು ನೆರೆಮನೆಯ ಇಬ್ಬರು ಹೊಡೆದು ಸಾಯಿಸಿದ ಘಟನೆ ಜಾರ್ಖಂಡ್‌ನ ಸೆರೈಕೆಲಾ–ಕಾರ್ಸಾವನ್‌ ಜಿಲ್ಲೆಯಲ್ಲಿ ನಡೆದಿದೆ. ಜಿಂಕಾರು ಮುಂಡೈನ್‌ (75), ಮಗಳು ಸೋರು ಮುಂಡೈನ್‌ (55), ಇಬ್ಬರು ಗಂಡು ಮಕ್ಕಳಾದ ಘಾಸಿಯಾ ಮುಂಡ (50), ಹಾಗಲ್‌ ಮುಂಡ (40) ಅವರನ್ನು ವಾಮಾಚಾರದ ಆರೋಪದಲ್ಲಿ ಶ್ಯಾಮ್‌ಲಾಲ್‌ ಮುಂಡ ಮತ್ತು ಸಹೋದರ ರಾಮ್‌ಸಿಂಗ್‌ ಮುಂಡ ನಾಲ್ವರನ್ನೂ ಹೊಡೆದು ಕೊಲೆ ಮಾಡಿದ್ದರು.

ಇನ್ನೊಂದು ಪ್ರಕರಣದಲ್ಲಿ ವಾಮಾಚಾರ ನಡೆಸುತ್ತಿದ್ದ ಶಂಕೆಯ ಮೇಲೆ ಮೂವರು ಮಹಿಳೆಯರನ್ನು ಹತ್ಯೆಗೈದಿರುವ ಘಟನೆ ಜಾರ್ಖಂಡ್‌ನ ಬುಂಡು ಉಪವಿಭಾಗದ ಸೋನಾಹಟು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿತ್ತು.

ರಾಯಲು ದೇವಿ (45) ಮತ್ತು ಧೋಲೋ ದೇವಿ (60) ಮತ್ತು ಅಲೂಮಣಿ ದೇವಿ (55) ಅವರನ್ನು ಹತ್ಯೆ ಮಾಡಿ  ಶವಗಳನ್ನು  ಅರಣ್ಯದಲ್ಲಿ ಎಸೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದರು.

 ವಾಮಾಚಾರದ ಶಂಕೆಯಲ್ಲಿ ಬುಡಕಟ್ಟು ಮಹಿಳೆ ಮತ್ತು ಆಕೆಯ 4 ಮಕ್ಕಳ ಹತ್ಯೆ
ಒಡಿಶಾದಲ್ಲಿ ವಾಮಾಚಾರದ ಶಂಕೆಯಲ್ಲಿ ಬುಡಕಟ್ಟು ಮಹಿಳೆ ಮತ್ತು ಆಕೆಯ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿ ಬಾವಿಯಲ್ಲಿ ಎಸೆಯಲಾಗಿತ್ತು. ದೇಬ್ರಾ ಮುಂಡಾ ಮತ್ತು ಇತರ ಆರೋಪಿಗಳು ಸುದಮ್ ಮುಂಡಾ ಅವರ ಮನೆಗೆ ಬಲವಂತವಾಗಿ ನುಗ್ಗಿದರು, ಅಲ್ಲಿ ಅವರು ಮಾಂಗ್ರಿ ಮತ್ತು ಅವರ ಮಕ್ಕಳನ್ನು ವಾಮಾಚಾರದ ಆರೋಪದಲ್ಲಿ ಹತ್ಯೆ ಮಾಡಿದ್ದರು.

ಒಡಿಶಾ ಪ್ರಿವೆನ್ಶನ್ ಆಫ್ ವಿಚ್-ಹಂಟಿಂಗ್ ಆಕ್ಟ್, 2013 ರ ಹೊರತಾಗಿಯೂ ರಾಜ್ಯದಲ್ಲಿ ವಾಮಾಚಾರದ ಅನುಮಾನಕ್ಕೆ ಸಂಬಂಧಿಸಿದ ಹತ್ಯೆಗಳು ಹೆಚ್ಚುತ್ತಿವೆ.

ವಾಮಾಚಾರದ ಶಂಕೆಯಲ್ಲಿ 107 ಜನರನ್ನು ಹತ್ಯೆ 

ಅಸ್ಸಾಂನಲ್ಲಿ ವಾಮಾಚಾರ ನಡೆಸಿದ್ದಾರೆ ಎಂಬ ಶಂಕೆಯಲ್ಲಿ 2011ರ ಬಳಿಕ ಒಟ್ಟು 107 ಜನರನ್ನು ಹತ್ಯೆ ಮಾಡಲಾಗಿದೆ ಎಂದು ರಾಜ್ಯದ ಸಂಸದೀಯ ವ್ಯವಹಾರಗಳ ಸಚಿವ ಚಂದ್ರಮೋಹನ್ ಪಟೋವರಿ ವಿಧಾನಸಭೆಗೆ 2019ರಲ್ಲಿ ಮಾಹಿತಿ ನೀಡಿದ್ದರು.

ವಾಮಾಚಾರ ನಡೆಸಿರುವ ಆರೋಪದಲ್ಲಿ ದ್ವೇಷ ಸಾಧನೆಗೆ ಸಂಬಂಧಿಸಿದ ಘಟನೆಯಲ್ಲಿ 2011ರಿಂದ 2016ರ ಮೇ ತಿಂಗಳಿನವರೆಗೆ 84 ಜನ ಮೃತಪಟ್ಟಿದ್ದರೆ, 2016ರಿಂದ 2019ರ ಅಕ್ಟೋಬರ್‌ವರೆಗಿನ ಅವಧಿಯಲ್ಲಿ ಮತ್ತೆ 23 ಮಂದಿಯನ್ನು ಹತ್ಯೆ ಮಾಡಲಾಗಿದೆ ಅವರು ಹೇಳಿದ್ದರು.

ಅಸ್ಸಾಂ ದ್ವೇಷ ಸಾಧನೆ(ನಿಷೇಧ, ತಡೆ ಮತ್ತು ರಕ್ಷಣೆ) ಕಾಯ್ದೆ 2015ನ್ನು ಪ್ರಕಟಿಸಿದ್ದು, ಮೂಢನಂಬಿಕೆಯ ವಿರುದ್ಧ ಜನಜಾಗೃತಿ ಅಭಿಯಾನವನ್ನು ರಾಜ್ಯದ್ಯಂತ ಆಯೋಜಿಸಿದೆ ಎಂದು ಸಚಿವರು ತಿಳಿಸಿದ್ದರು.

ಇದನ್ನು ಓದಿ: ಬ್ರಿಟನ್‌ನಲ್ಲಿ ರಾಜಕೀಯದ ಚಿತ್ರಣ ಬದಲಿಸಿದ ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...