Homeಮುಖಪುಟವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ 'ಮಾಟಗಾತಿ' ಹಣೆಪಟ್ಟಿಯ ಹತ್ಯೆ

ವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ ‘ಮಾಟಗಾತಿ’ ಹಣೆಪಟ್ಟಿಯ ಹತ್ಯೆ

- Advertisement -
- Advertisement -

ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ವಾಮಾಚಾರ ಮಾಡುತ್ತಿದ್ದ ಆರೋಪದ ಮೇಲೆ ಆದಿವಾಸಿ ಮಹಿಳೆಯೊಬ್ಬಳ ಮೇಲೆ  ಹಲ್ಲೆ ನಡೆಸಿ ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ವಾಮಾಚಾರದ ಹೆಸರಿನಲ್ಲಿ ಹತ್ಯೆ, ಸಾಮಾಜಿಕ ಬಹಿಷ್ಕಾರ ಅಸ್ಸಾಂನ ಭಾಗಗಳಲ್ಲಿ ಸಾಮಾನ್ಯವಾಗಿದೆ. 2018ರಲ್ಲಿ ವಿಚ್-ಹಂಟಿಂಗ್ ಆಕ್ಟ್(ನಿಷೇಧ, ತಡೆಗಟ್ಟುವಿಕೆ ಮತ್ತು ರಕ್ಷಣೆ) ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆ ಪ್ರಕಾರ, ಮಾಟಗಾತಿ ಎಂದು ಆರೋಪದಲ್ಲಿ ವ್ಯಕ್ತಿಯ ಸಾವಿಗೆ ಕಾರಣವಾಗುವ ಆಕ್ರಮಣ ಅಥವಾ ಹಲ್ಲೆಗೆ ಸಂಬಂಧಿಸಿ IPC ಸೆಕ್ಷನ್ 302ರ ಪ್ರಕಾರ ಶಿಕ್ಷೆಗೆ ಒಳಗಾಗುತ್ತಾರೆ. ಇದಲ್ಲದೆ ರಾಜ್ಯ ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಜನ ಜಾಗೃತಿ ಅಭಿಯಾನ ನಡೆಸುತ್ತಿದೆ. ಆದರೂ ಈ ಹತ್ಯೆಗಳು ಮುಂದುವರಿದಿದೆ.

‘ಮಾಟಗಾತಿ ಬೇಟೆ’ಯು ಹಿಂದಿನ ಪರಿಕಲ್ಪನೆಯಲ್ಲ, ಇದು ಇಂದು ಭಾರತದ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಜೀವಂತವಾಗಿದೆ. ಮಾಟಗಾತಿ ಎಂಬ ಹಣೆಪಟ್ಟಿ ಹಚ್ಚಿ ಮಹಿಳೆಯರನ್ನು ಹಿಂಸಿಸಲಾಗುತ್ತಿದೆ. ದರೋಡೆ ಮಾಡಲಾಗುತ್ತದೆ ಮತ್ತು ಕೊಲ್ಲಲಾಗುತ್ತದೆ. ವಾಮಾಚಾರದ ಆರೋಪಗಳಲ್ಲಿ ವದಂತಿ ಮತ್ತು ಗಾಸಿಪ್‌ಗಳು ಈ ಹತ್ಯೆಗಳಿಗೆ ಕಾರಣವಾಗುತ್ತದೆ. ಈ ಅಪರಾಧವನ್ನು ತಡೆಯಲು ಹಲವಾರು ರಾಜ್ಯಗಳು ಪ್ರತ್ಯೇಕವಾಗಿ ಕಾಯ್ದೆಗಳನ್ನು ಜಾರಿಗೆ ತಂದಿವೆ. 1999ರಲ್ಲಿ ಬಿಹಾರವು ಮಾಟಗಾತಿ ಆಚರಣೆಗಳ ತಡೆ ಕಾಯಿದೆಯನ್ನು ಜಾರಿಗೊಳಿಸಿದೆ. ಜಾರ್ಖಂಡ್  2001ರಲ್ಲಿ ಈ ಕುರಿತು ಕಾಯ್ದೆ ಜಾರಿಗೊಳಿಸಿದೆ. ಛತ್ತೀಸ್‌ಗಢವು 2005ರಲ್ಲಿ ಈ ಬಗ್ಗೆ ಕಾಯಿದೆಯನ್ನು ಜಾರಿಗೆ ತಂದಿತು. ರಾಜಸ್ಥಾನ ಮತ್ತು ಅಸ್ಸಾಂ ಕೂಡ ಈ ಕುರಿತು 2015ರಲ್ಲಿ ಕಾಯ್ದೆಯನ್ನು ಜಾರಿಗೊಳಿಸಿದೆ.

ಇತ್ತೀಚಿನ ಪ್ರಕರಣದಲ್ಲಿ ಅಸ್ಸಾಂನಲ್ಲಿ ಸಂಗೀತಾ ಕತಿ ಅಮಾನವೀಯ ಕೃತ್ಯಕ್ಕೆ ಬಲಿಯಾದ ಸಂತ್ರಸ್ತೆ. ಈಕೆಗೆ ಮೂವರು ಮಕ್ಕಳಿದ್ದಾರೆ. ಸೂರಜ್ ಬಾಗ್ವಾರ್ ಎಂಬಾತ ನಿಜ್ ಬಹ್ಬರಿ ಗ್ರಾಮದ ಹೊರಗಿನಿಂದ ಕೆಲವು ಜನರನ್ನು ಕರೆತಂದು ಈ ಕೃತ್ಯವನ್ನು ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಅವರೆಲ್ಲರೂ ಒಂದೇ ಗ್ರಾಮ ನಿಜ್ ಬಹ್ಬರಿ ನಿವಾಸಿಗಳಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಮಧುರಿಮಾ ದಾಸ್, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ವಾಮಾಚಾರ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಮಹಿಳೆಯೊಬ್ಬರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಸುಟ್ಟು ಹಾಕಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಿಟಿಐ ವರದಿಯ ಪ್ರಕಾರ ನೆರೆಹೊರೆಯವರು ವಿವಿಧ ವಿಷಯಗಳ ಬಗ್ಗೆ ಆಕೆಯ ಜೊತೆ ಪದೇ ಪದೇ ಜಗಳವಾಡುತ್ತಿದ್ದರು ಮತ್ತು ಆಕೆ ವಾಮಾಚಾರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಪಾನಮತ್ತರಾಗಿದ್ದ ದುಷ್ಕರ್ಮಿಗಳ ಗುಂಪು ಆಕೆಯ ಪತಿಯನ್ನು ಕಟ್ಟಿ ಹಾಕಿ ನಂತರ ಹರಿತವಾದ ಆಯುಧಗಳಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದಾರೆ.

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಸಂಗೀತಾ ಪತಿ ರಾಮ್ ಕಪಿ, ರಾತ್ರಿ ಪತ್ನಿ ಅಡುಗೆ ಮಾಡುತ್ತಿದ್ದಾಗ ದುಷ್ಕರ್ಮಿಗಳು ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಅವರು ಅವಳನ್ನು ಮಾಟಗಾತಿ ಎಂದು ನಿಂದಿಸಿ ಹಲ್ಲೆ ನಡೆಸಿದರು. ಅವಳನ್ನು ಹೊಡೆಯಬೇಡಿ ಮತ್ತು ಬೆಳಿಗ್ಗೆ ಬನ್ನಿ ಎಂದು ನಾನು ಅವರನ್ನು ವಿನಂತಿಸಿದೆ ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನನಗೂ ಥಳಿಸಿದ್ದಾರೆ. ನಮ್ಮನ್ನು ಥಳಿಸುತ್ತಿರುವುದನ್ನು ನೋಡಿ ನನ್ನ ಮೂವರು ಮಕ್ಕಳು ಅಳುತ್ತಿದ್ದಾಗ ನಾನು ಅವರನ್ನು ಹತ್ತಿರದಲ್ಲಿ ವಾಸಿಸುವ ನನ್ನ ಸಹೋದರನ ಮನೆಗೆ ಬಿಡಲು ಅವರನ್ನು ಕರೆದುಕೊಂಡು ಹೋದೆ, ನಾನು ಮಕ್ಕಳನ್ನು ಬಿಟ್ಟು ಬರುವಾಗ ನನ್ನ ಮನೆಗೆ ಬೆಂಕಿ ಹಚ್ಚಲಾಗಿತ್ತು. ಪತ್ನಿ ಜೀವಂತವಾಗಿ ಸುಟ್ಟು ಕರಕಲಾಗಿದ್ದಳು ಎಂದು ಹೇಳಿದ್ದಾರೆ.

ಮೋಹನ್‌ಪುರ ಗ್ರಾಮದಲ್ಲಿ ವಾಮಾಚಾರದ ಶಂಕೆಯಲ್ಲಿ ಬುಡಕಟ್ಟು ಮಹಿಳೆಯ ಹತ್ಯೆ

2022ರ ಮೇ.ತಿಂಗಳಲ್ಲಿ ಅಸ್ಸಾಂನಲ್ಲಿ 45 ವರ್ಷದ ಆದಿವಾಸಿ ಮಹಿಳೆಯನ್ನು ವಾಮಾಚಾರ ಮಾಡುತ್ತಿದ್ದಾಳೆ ಎಂದು ಶಂಕಿಸಿದ ಗುಂಪೊಂದು ಆಕೆಯನ್ನು ಕೊಂದು ಹಾಕಿದೆ. ಕೊಕ್ರಜಾರ್ ಜಿಲ್ಲೆಯ ಮೋಹನ್‌ಪುರ ಗ್ರಾಮದ ನಿವಾಸಿಯಾಗಿರುವ ಅಂಜಲಿ ಮುರ್ಮು ಎಂಬ ಮಹಿಳೆಯನ್ನು ಮೊದಲು ಕೊಂದು ನಂತರ ಆಕೆಯ ದೇಹವನ್ನು ಮರಕ್ಕೆ ನೇಣು ಹಾಕಲಾಗಿತ್ತು. ಮಹಿಳೆಯ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿತ್ತು.

ಗುಂಡಾಪುರಿ ಗ್ರಾಮದಲ್ಲಿ ವಾಮಾಚಾರದ ಶಂಕೆಯಲ್ಲಿ ಮೂವರ ಹತ್ಯೆ

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಇದೇ ಡಿ.6ರಂದು ನಾಗ್ಪುರದ ಗುಂಡಾಪುರಿ ಗ್ರಾಮದಲ್ಲಿ ವಾಮಾಚಾರದ ಶಂಕೆಯಲ್ಲಿ ವೃದ್ಧ ದಂಪತಿ ಮತ್ತು ಅವರ ಮೊಮ್ಮಗಳನ್ನು ಕೊಂದ ಬಳಿಕ 9 ಜನರನ್ನು ಬಂಧಿಸಲಾಯಿತು.

ದೇವು ಕುಮೋತಿ (60) ಮತ್ತು ಅವರ ಪತ್ನಿ ಬಿಚ್ಚೆ (55), ಮೊಮ್ಮಗಳು ಅರ್ಚನಾ ತಳಂಡಿ (10) ಅವರನ್ನು ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ದಂಪತಿಯ ಪುತ್ರ ರಮೇಶ್ ಮತ್ತು ಇತರ ಸಂಬಂಧಿಕರು ಈ ಘೋರ ಕೃತ್ಯವನ್ನು ನಡೆಸಿದ್ದರು.

ಟೈಮ್ಸ್‌ ಆಫ್‌ ಇಂಡಿಯಾ ವರದಿಯ ಪ್ರಕಾರ, ವಾಮಾಚಾರಕ್ಕೆ ಸಂಬಂಧಿಸಿ ಈ ಕೃತ್ಯ ನಡೆದಿದೆ. ಮಾಟಮಂತ್ರದ ವಿಚಾರದಲ್ಲಿ ಗ್ರಾಮಸ್ಥರಿಂದ ಬಹಿಷ್ಕಾರಕ್ಕೊಳಗಾದ ತಂದೆಯಿಂದ ರಮೇಶ್ ಮತ್ತು ವಿನು ಕೋಪಗೊಂಡು ಕೃತ್ಯ ನಡೆಸಿದ್ದರು.

ಜಾರ್ಖಂಡ್‌ನ ವಾಮಾಚಾರದ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ

ವಾಮಾಚಾರದಲ್ಲಿ ತೊಡಗಿದ್ದ ಸಂಶಯದಲ್ಲಿ ಒಂದೇ ಕುಟುಂಬದ ನಾಲ್ವರನ್ನು ನೆರೆಮನೆಯ ಇಬ್ಬರು ಹೊಡೆದು ಸಾಯಿಸಿದ ಘಟನೆ ಜಾರ್ಖಂಡ್‌ನ ಸೆರೈಕೆಲಾ–ಕಾರ್ಸಾವನ್‌ ಜಿಲ್ಲೆಯಲ್ಲಿ ನಡೆದಿದೆ. ಜಿಂಕಾರು ಮುಂಡೈನ್‌ (75), ಮಗಳು ಸೋರು ಮುಂಡೈನ್‌ (55), ಇಬ್ಬರು ಗಂಡು ಮಕ್ಕಳಾದ ಘಾಸಿಯಾ ಮುಂಡ (50), ಹಾಗಲ್‌ ಮುಂಡ (40) ಅವರನ್ನು ವಾಮಾಚಾರದ ಆರೋಪದಲ್ಲಿ ಶ್ಯಾಮ್‌ಲಾಲ್‌ ಮುಂಡ ಮತ್ತು ಸಹೋದರ ರಾಮ್‌ಸಿಂಗ್‌ ಮುಂಡ ನಾಲ್ವರನ್ನೂ ಹೊಡೆದು ಕೊಲೆ ಮಾಡಿದ್ದರು.

ಇನ್ನೊಂದು ಪ್ರಕರಣದಲ್ಲಿ ವಾಮಾಚಾರ ನಡೆಸುತ್ತಿದ್ದ ಶಂಕೆಯ ಮೇಲೆ ಮೂವರು ಮಹಿಳೆಯರನ್ನು ಹತ್ಯೆಗೈದಿರುವ ಘಟನೆ ಜಾರ್ಖಂಡ್‌ನ ಬುಂಡು ಉಪವಿಭಾಗದ ಸೋನಾಹಟು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿತ್ತು.

ರಾಯಲು ದೇವಿ (45) ಮತ್ತು ಧೋಲೋ ದೇವಿ (60) ಮತ್ತು ಅಲೂಮಣಿ ದೇವಿ (55) ಅವರನ್ನು ಹತ್ಯೆ ಮಾಡಿ  ಶವಗಳನ್ನು  ಅರಣ್ಯದಲ್ಲಿ ಎಸೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದರು.

 ವಾಮಾಚಾರದ ಶಂಕೆಯಲ್ಲಿ ಬುಡಕಟ್ಟು ಮಹಿಳೆ ಮತ್ತು ಆಕೆಯ 4 ಮಕ್ಕಳ ಹತ್ಯೆ
ಒಡಿಶಾದಲ್ಲಿ ವಾಮಾಚಾರದ ಶಂಕೆಯಲ್ಲಿ ಬುಡಕಟ್ಟು ಮಹಿಳೆ ಮತ್ತು ಆಕೆಯ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿ ಬಾವಿಯಲ್ಲಿ ಎಸೆಯಲಾಗಿತ್ತು. ದೇಬ್ರಾ ಮುಂಡಾ ಮತ್ತು ಇತರ ಆರೋಪಿಗಳು ಸುದಮ್ ಮುಂಡಾ ಅವರ ಮನೆಗೆ ಬಲವಂತವಾಗಿ ನುಗ್ಗಿದರು, ಅಲ್ಲಿ ಅವರು ಮಾಂಗ್ರಿ ಮತ್ತು ಅವರ ಮಕ್ಕಳನ್ನು ವಾಮಾಚಾರದ ಆರೋಪದಲ್ಲಿ ಹತ್ಯೆ ಮಾಡಿದ್ದರು.

ಒಡಿಶಾ ಪ್ರಿವೆನ್ಶನ್ ಆಫ್ ವಿಚ್-ಹಂಟಿಂಗ್ ಆಕ್ಟ್, 2013 ರ ಹೊರತಾಗಿಯೂ ರಾಜ್ಯದಲ್ಲಿ ವಾಮಾಚಾರದ ಅನುಮಾನಕ್ಕೆ ಸಂಬಂಧಿಸಿದ ಹತ್ಯೆಗಳು ಹೆಚ್ಚುತ್ತಿವೆ.

ವಾಮಾಚಾರದ ಶಂಕೆಯಲ್ಲಿ 107 ಜನರನ್ನು ಹತ್ಯೆ 

ಅಸ್ಸಾಂನಲ್ಲಿ ವಾಮಾಚಾರ ನಡೆಸಿದ್ದಾರೆ ಎಂಬ ಶಂಕೆಯಲ್ಲಿ 2011ರ ಬಳಿಕ ಒಟ್ಟು 107 ಜನರನ್ನು ಹತ್ಯೆ ಮಾಡಲಾಗಿದೆ ಎಂದು ರಾಜ್ಯದ ಸಂಸದೀಯ ವ್ಯವಹಾರಗಳ ಸಚಿವ ಚಂದ್ರಮೋಹನ್ ಪಟೋವರಿ ವಿಧಾನಸಭೆಗೆ 2019ರಲ್ಲಿ ಮಾಹಿತಿ ನೀಡಿದ್ದರು.

ವಾಮಾಚಾರ ನಡೆಸಿರುವ ಆರೋಪದಲ್ಲಿ ದ್ವೇಷ ಸಾಧನೆಗೆ ಸಂಬಂಧಿಸಿದ ಘಟನೆಯಲ್ಲಿ 2011ರಿಂದ 2016ರ ಮೇ ತಿಂಗಳಿನವರೆಗೆ 84 ಜನ ಮೃತಪಟ್ಟಿದ್ದರೆ, 2016ರಿಂದ 2019ರ ಅಕ್ಟೋಬರ್‌ವರೆಗಿನ ಅವಧಿಯಲ್ಲಿ ಮತ್ತೆ 23 ಮಂದಿಯನ್ನು ಹತ್ಯೆ ಮಾಡಲಾಗಿದೆ ಅವರು ಹೇಳಿದ್ದರು.

ಅಸ್ಸಾಂ ದ್ವೇಷ ಸಾಧನೆ(ನಿಷೇಧ, ತಡೆ ಮತ್ತು ರಕ್ಷಣೆ) ಕಾಯ್ದೆ 2015ನ್ನು ಪ್ರಕಟಿಸಿದ್ದು, ಮೂಢನಂಬಿಕೆಯ ವಿರುದ್ಧ ಜನಜಾಗೃತಿ ಅಭಿಯಾನವನ್ನು ರಾಜ್ಯದ್ಯಂತ ಆಯೋಜಿಸಿದೆ ಎಂದು ಸಚಿವರು ತಿಳಿಸಿದ್ದರು.

ಇದನ್ನು ಓದಿ: ಬ್ರಿಟನ್‌ನಲ್ಲಿ ರಾಜಕೀಯದ ಚಿತ್ರಣ ಬದಲಿಸಿದ ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...