Homeಮುಖಪುಟಆದಿವಾಸಿಗಳು ಹಿಂದೂಗಳಾಗಲು ಎಂದಿಗೂ ಸಾಧ್ಯವಿಲ್ಲ - ಜಾರ್ಖಾಂಡ್ ಮುಖ್ಯಮಂತ್ರಿ

ಆದಿವಾಸಿಗಳು ಹಿಂದೂಗಳಾಗಲು ಎಂದಿಗೂ ಸಾಧ್ಯವಿಲ್ಲ – ಜಾರ್ಖಾಂಡ್ ಮುಖ್ಯಮಂತ್ರಿ

- Advertisement -
- Advertisement -

“ಆದಿವಾಸಿಗಳು ಹಿಂದೂಗಳಲ್ಲ, ಅವರು ಹಿಂದೂಗಳಾಗಲು ಎಂದಿಗೂ ಸಾಧ್ಯವಿಲ್ಲ, ಈ ಬಗ್ಗೆ ಯಾವದೇ ಗೊಂದಲಗಳು ಇರಬಾರದು” ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾನುವಾರ ಹೇಳಿದ್ದಾರೆ. ಈ ಸಮುದಾಯವು ಯಾವಾಗಲೂ ಪ್ರಕೃತಿ ಆರಾಧಕರಾಗಿದ್ದು, ಇದರಿಂದಲೆ ಅವರನ್ನು “ಸ್ಥಳೀಯ ಜನರು” ಎಂದು ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಶನಿವಾರ ರಾತ್ರಿ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ 18 ನೇ ವಾರ್ಷಿಕ ಭಾರತ ಸಮ್ಮೇಳನದಲ್ಲಿ ಬುಡಕಟ್ಟು ಜನಾಂಗದವರು ಹಿಂದೂಗಳೇ ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಅಧಿವೇಶನವನ್ನು ಹಾರ್ವರ್ಡ್ ಕೆನಡಿ ಶಾಲೆಯ ಹಿರಿಯ ಸಹವರ್ತಿ ಸೂರಜ್ ಯೆಂಗ್ಡೆ ನಿರ್ವಹಿಸಿದ್ದರು.

“ನಮ್ಮ ರಾಜ್ಯದಲ್ಲಿ 32 ಬುಡಕಟ್ಟು ಸಮುದಾಯಗಳಿವೆ, ಆದರೆ ಜಾರ್ಖಂಡ್ನಲ್ಲಿ ನಮ್ಮ ಭಾಷೆ, ಸಂಸ್ಕೃತಿಯನ್ನು ಉತ್ತೇಜಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಮುಂದಿನ ಜನಗಣತಿಯಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಕಾಲಂ ಒಂದನ್ನು ತಮ್ಮ ಸರ್ಕಾರ ಕೇಂದ್ರ ಸರ್ಕಾರದಿಂದ ಕೋರಿದೆ, ಇದರಿಂದ ಅವರು ತಮ್ಮ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಸಂಪೂರ್ಣ ಸುರಕ್ಷತೆಯೊಂದಿಗೆ ಮುಂದುವರಿಸಬಹುದು ಎಂದು ಹೇಳಿದ್ದಾರೆ.

“ಆದಿವಾಸಿಗಳು ಎಂದಿಗೂ ಹಿಂದೂಗಳಲ್ಲ ಮತ್ತು ಅವರು ಹಿಂದೂಗಳಾಗಳು ಎಂದಿಗೂ ಸಾಧ್ಯವಿಲ್ಲ. ಜನಗಣತಿಯ ಯಾವ ಕಾಲಂನಲ್ಲಿ ಅವರು ಬರೆಯುತ್ತಾರೆ. ಅವರು ಹಿಂದೂ, ಸಿಖ್, ಜೈನ್, ಮುಸ್ಲಿಂ, ಕ್ರಿಶ್ಚಿಯನ್‌‌ ಎಂದು ಬರೆಯಲಾಗುತ್ತದೆಯೆ? ಕೇಂದ್ರ ಸರ್ಕಾರ ‘ಇತರರು’ ಎಂಬ ಕಾಲಂ ಅನ್ನು ತೆಗೆದುಹಾಕಿದ್ದಾರೆ ಎಂದು ನನಗೆ ತಿಳಿದಿದೆ. ಇದು ಆದಿವಾಸಿಗಳು ಇದ್ದುದರಲ್ಲೇ ಹೊಂದಿಕೊಳ್ಳಬೇಕು ಎಂಬುದಕ್ಕಾಗಿದೆ ಎಂದು ತೋರುತ್ತಿದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ತನ್ನ ಮಾತುಗಳಲ್ಲಿ ಅವರು ಹಿಂದಿನ ಬಿಜೆಪಿ ಸರ್ಕಾರವನ್ನು ಕೂಡಾ ತರಾಟೆಗೆ ಪಡೆದಿದ್ದಾರೆ. ತನ್ನ ರಾಜಕೀಯ ಕಾರ್ಯಸೂಚಿಯನ್ನು ಸಾಧಿಸಲು ಕಾನೂನನ್ನು ಬಳಸಿ ಹೋರಾಟಗಾರ ಫಾದರ್‌ ಸ್ಟಾನ್‌ ಸ್ವಾಮಿಯನ್ನು ಸಂಚುಕೋರ ಎಂದು ಹಣೆಪಟ್ಟಿ ಕಟ್ಟಿ ಜೈಲಿಗೆ ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್‌ನ ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗಬಾರದು: ಹೇಮಂತ್‌ ಸೊರೆನ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...