HomeUncategorizedಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು - ಬೃಹತ್‌ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು – ಬೃಹತ್‌ ಪ್ರತಿಭಟನೆ

ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ಜಾಗೃತ ಆದಿವಾಸಿ ದಲಿತ ಸಂಘಟನೆ'ಯ ಸಾವಿರಾರು ಆದಿವಾಸಿ ರೈತರು ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ...

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮತ್ತು ಪ್ರಸ್ತಾವಿತ ವಿದ್ಯುತ್ ಮಸೂದೆ 2020 ರ ವಿರುದ್ಧ ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮಧ್ಯಪ್ರದೇಶದ ಜಾಗೃತ ಆದಿವಾಸಿ ದಲಿತ ಸಂಘಟನೆಯ ಸಾವಿರಾರು ಆದಿವಾಸಿ ರೈತರು ಬಾರ್ವಾನಿ ಜಿಲ್ಲೆಯಲ್ಲಿ 2020 ರ ಡಿಸೆಂಬರ್ 9 ರಂದು ಬೃಹತ್ ಪ್ರತಿಭಟನೆ ನಡೆಸಿದರು.

ತಮ್ಮ ಪ್ರತಿಭಟನೆಯ ಭಾಗವಾಗಿ ವಿದ್ಯುತ್, ರಸಗೊಬ್ಬರಗಳು, ಪಡಿತರ, ಬೆಳೆ ವಿಮೆ, ಶಿಕ್ಷಣ ಮತ್ತು ರೈತರ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರಧಾನಿ, ಕೇಂದ್ರ ಕೃಷಿ ಸಚಿವರು, ಮುಖ್ಯಮಂತ್ರಿ ಮತ್ತು ಇತರೆ ಅಧಿಕಾರಿಗಳಿಗೆ ಜ್ಞಾಪನಾ ಪತ್ರವನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು – ಬಂಧನ

ಈ ಪತ್ರದಲ್ಲಿ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಸಬ್‌ರಂಗ್ ವರದಿ ಮಾಡಿದೆ.

“ರೈತರ ಬೆಳೆಗಳಿಗೆ ನಿಗದಿತ ಬೆಂಬಲ ಬೆಲೆ ನೀಡುವ ಬದಲು, ಸರ್ಕಾರಿ ಮಂಡಿಗಳನ್ನು ಬೈಪಾಸ್ ಮಾಡಿ ರೈತರನ್ನು ವ್ಯಾಪಾರಿಗಳಿಗೆ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಮಾರಲಾಗುತ್ತಿದೆ. ಈಗಿರುವ ಎಲ್ಲಾ ನಿರ್ಬಂಧಗಳನ್ನೂ ತೆಗೆದುಹಾಕಿದರೆ ರೈತರು ಮತ್ತು ಗ್ರಾಹಕರು ಇಬ್ಬರೂ ಶೋಷಣೆಗೆ ಒಳಗಾಗುತ್ತಾರೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

“ವಿದ್ಯುತ್ ಮಸೂದೆಗೆ ಸಂಬಂಧಿಸಿದಂತೆ, ಸರ್ಕಾರಿ ವಿದ್ಯುತ್ ವಿತರಣೆಯನ್ನು ಖಾಸಗೀಯವರಿಗೆ ಮಾರಲಾಗುತ್ತಿದೆ. ಇದರಿಂದ ವಿದ್ಯುತ್ ಶುಲ್ಕವನ್ನು ಖಾಸಗಿಯವರು ತಮಗಿಚ್ಚೆಬಂದಂತೆ ವಿಧಿಸುತ್ತಾರೆ. ಹಾಗಾಗಿ ಇಲ್ಲಿಯೂ ರೈತರ ಶೋಷಣೆಯಾಗುತ್ತದೆ. ಈ ಹೊಸ ನೀತಿಗಳು ಕಾರ್ಪೊರೇಟ್‌ಗಳಿಗೆ ಕೃಷಿ ಭೂಮಿಯನ್ನು ಕಡಿಮೆ ದರದಲ್ಲಿ ಖರೀದಿಸಲು ಮತ್ತು ಕಾರ್ಮಿಕರನ್ನು ಕಡಿಮೆ ದರದಲ್ಲಿ ನೇಮಿಸಿಕೊಳ್ಳಲು ದಾರಿ ಮಾಡಿಕೊಡುತ್ತದೆ” ಎಂದು ವಾದಿಸಿದ್ದಾರೆ.

2007 ರಲ್ಲಿ ರಾಷ್ಟ್ರೀಯ ರೈತ ಆಯೋಗವನ್ನು ಉಲ್ಲೇಖಿಸಿ, ಆಯೋಗದ ಶಿಫಾರಸಿನ ಪ್ರಕಾರ, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಾರುಕಟ್ಟೆಗಳನ್ನು ತೆರೆಯುವಂತೆ ಕರೆ ನೀಡಿದರು.

ಇದನ್ನೂ ಓದಿ: ರೈತರು ಮಾತುಕತೆಯಿಂದ ಹೊರನಡೆದರು ಎಂಬ ಸಚಿವರ ಮಾತು ದೊಡ್ಡ ಸುಳ್ಳು: ರೈತ ಸಂಘಟನೆಗಳ ಹೇಳಿಕೆ

ಇದಲ್ಲದೆ, ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದಂತೆ, ರೈತರಿಗೆ 24 ಖರೀದಿ ಬೆಳೆಗಳ ಸಂಪೂರ್ಣ ವೆಚ್ಚವನ್ನು ಒಂದೂವರೆ ಪಟ್ಟು ಖಾತ್ರಿಪಡಿಸಿಕೊಡಬೇಕು ಎಂದೂ ಒತ್ತಾಯಿಸಿದರು.

ಸರ್ಕಾರದ ಜವಾಬ್ದಾರಿಯ ಕುರಿತು ಮಾತನಾಡಿದ ಹೋರಾಟಗಾರರು, “ಬೆಳೆ ನಷ್ಟದ ಸಂದರ್ಭದಲ್ಲಿ ಸರ್ಕಾರವು ರೈತರಿಗೆ ಪರಿಹಾರ ನೀಡಬೇಕು ಮತ್ತು ಸಾಂಕ್ರಾಮಿಕ ರೋಗದ ಕೊನೆಯವರೆಗೂ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಪ್ರಕಾರ ಮಾಸಿಕ ಉಚಿತ ಪಡಿತರವನ್ನು ನೀಡಬೇಕು. ರಸಗೊಬ್ಬರ ಖರೀದಿಯ ಸಮಸ್ಯೆಯನ್ನೂ ಗಮನಾರ್ಹವಾಗಿ ತೆಗೆದುಕೊಳ್ಳುವಂತೆ” ಮನವಿ ಮಾಡಿದರು.

ಇದನ್ನೂ ಓದಿ: ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ…

ಮುಂದುವರೆದು, ಅರಣ್ಯ ಹಕ್ಕು ಕಾಯ್ದೆಯ ಪ್ರಕಾರ ಬುಡಕಟ್ಟು ಜನಾಂಗದವರ ಆಸ್ತಿಯಾಗಿರುವ ಅರಣ್ಯ ಪ್ರದೇಶವನ್ನು ಖಾಸಗೀ ಕಂಪನಿಗಳಿಗೆ 40 ಪ್ರತಿಶತದಷ್ಟು ಗುತ್ತಿಗೆಗೆ ನೀಡಿದ್ದಕ್ಕಾಗಿ ಅವರು ರಾಜ್ಯ ಸರ್ಕಾರವನ್ನು ಖಂಡಿಸಿದ್ದು, ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದರು.

ಆನ್‌ಲೈನ್ ಶಿಕ್ಷಣವನ್ನು ಮುಂದುವರೆಸುವ ಬದಲು ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳನ್ನು ತೆರೆಯುವಂತೆ ಸರ್ಕಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಎಲ್ಲಾ ಸೌಲಭ್ಯಗಳೂ ಇರುವ ಗುಣಮಟ್ಟದ ಶಿಕ್ಷಣಕ್ಕಾಗಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....