HomeUncategorizedಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು - ಬೃಹತ್‌ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು – ಬೃಹತ್‌ ಪ್ರತಿಭಟನೆ

ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ಜಾಗೃತ ಆದಿವಾಸಿ ದಲಿತ ಸಂಘಟನೆ'ಯ ಸಾವಿರಾರು ಆದಿವಾಸಿ ರೈತರು ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ...

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮತ್ತು ಪ್ರಸ್ತಾವಿತ ವಿದ್ಯುತ್ ಮಸೂದೆ 2020 ರ ವಿರುದ್ಧ ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮಧ್ಯಪ್ರದೇಶದ ಜಾಗೃತ ಆದಿವಾಸಿ ದಲಿತ ಸಂಘಟನೆಯ ಸಾವಿರಾರು ಆದಿವಾಸಿ ರೈತರು ಬಾರ್ವಾನಿ ಜಿಲ್ಲೆಯಲ್ಲಿ 2020 ರ ಡಿಸೆಂಬರ್ 9 ರಂದು ಬೃಹತ್ ಪ್ರತಿಭಟನೆ ನಡೆಸಿದರು.

ತಮ್ಮ ಪ್ರತಿಭಟನೆಯ ಭಾಗವಾಗಿ ವಿದ್ಯುತ್, ರಸಗೊಬ್ಬರಗಳು, ಪಡಿತರ, ಬೆಳೆ ವಿಮೆ, ಶಿಕ್ಷಣ ಮತ್ತು ರೈತರ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರಧಾನಿ, ಕೇಂದ್ರ ಕೃಷಿ ಸಚಿವರು, ಮುಖ್ಯಮಂತ್ರಿ ಮತ್ತು ಇತರೆ ಅಧಿಕಾರಿಗಳಿಗೆ ಜ್ಞಾಪನಾ ಪತ್ರವನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು – ಬಂಧನ

ಈ ಪತ್ರದಲ್ಲಿ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಸಬ್‌ರಂಗ್ ವರದಿ ಮಾಡಿದೆ.

“ರೈತರ ಬೆಳೆಗಳಿಗೆ ನಿಗದಿತ ಬೆಂಬಲ ಬೆಲೆ ನೀಡುವ ಬದಲು, ಸರ್ಕಾರಿ ಮಂಡಿಗಳನ್ನು ಬೈಪಾಸ್ ಮಾಡಿ ರೈತರನ್ನು ವ್ಯಾಪಾರಿಗಳಿಗೆ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಮಾರಲಾಗುತ್ತಿದೆ. ಈಗಿರುವ ಎಲ್ಲಾ ನಿರ್ಬಂಧಗಳನ್ನೂ ತೆಗೆದುಹಾಕಿದರೆ ರೈತರು ಮತ್ತು ಗ್ರಾಹಕರು ಇಬ್ಬರೂ ಶೋಷಣೆಗೆ ಒಳಗಾಗುತ್ತಾರೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

“ವಿದ್ಯುತ್ ಮಸೂದೆಗೆ ಸಂಬಂಧಿಸಿದಂತೆ, ಸರ್ಕಾರಿ ವಿದ್ಯುತ್ ವಿತರಣೆಯನ್ನು ಖಾಸಗೀಯವರಿಗೆ ಮಾರಲಾಗುತ್ತಿದೆ. ಇದರಿಂದ ವಿದ್ಯುತ್ ಶುಲ್ಕವನ್ನು ಖಾಸಗಿಯವರು ತಮಗಿಚ್ಚೆಬಂದಂತೆ ವಿಧಿಸುತ್ತಾರೆ. ಹಾಗಾಗಿ ಇಲ್ಲಿಯೂ ರೈತರ ಶೋಷಣೆಯಾಗುತ್ತದೆ. ಈ ಹೊಸ ನೀತಿಗಳು ಕಾರ್ಪೊರೇಟ್‌ಗಳಿಗೆ ಕೃಷಿ ಭೂಮಿಯನ್ನು ಕಡಿಮೆ ದರದಲ್ಲಿ ಖರೀದಿಸಲು ಮತ್ತು ಕಾರ್ಮಿಕರನ್ನು ಕಡಿಮೆ ದರದಲ್ಲಿ ನೇಮಿಸಿಕೊಳ್ಳಲು ದಾರಿ ಮಾಡಿಕೊಡುತ್ತದೆ” ಎಂದು ವಾದಿಸಿದ್ದಾರೆ.

2007 ರಲ್ಲಿ ರಾಷ್ಟ್ರೀಯ ರೈತ ಆಯೋಗವನ್ನು ಉಲ್ಲೇಖಿಸಿ, ಆಯೋಗದ ಶಿಫಾರಸಿನ ಪ್ರಕಾರ, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಾರುಕಟ್ಟೆಗಳನ್ನು ತೆರೆಯುವಂತೆ ಕರೆ ನೀಡಿದರು.

ಇದನ್ನೂ ಓದಿ: ರೈತರು ಮಾತುಕತೆಯಿಂದ ಹೊರನಡೆದರು ಎಂಬ ಸಚಿವರ ಮಾತು ದೊಡ್ಡ ಸುಳ್ಳು: ರೈತ ಸಂಘಟನೆಗಳ ಹೇಳಿಕೆ

ಇದಲ್ಲದೆ, ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದಂತೆ, ರೈತರಿಗೆ 24 ಖರೀದಿ ಬೆಳೆಗಳ ಸಂಪೂರ್ಣ ವೆಚ್ಚವನ್ನು ಒಂದೂವರೆ ಪಟ್ಟು ಖಾತ್ರಿಪಡಿಸಿಕೊಡಬೇಕು ಎಂದೂ ಒತ್ತಾಯಿಸಿದರು.

ಸರ್ಕಾರದ ಜವಾಬ್ದಾರಿಯ ಕುರಿತು ಮಾತನಾಡಿದ ಹೋರಾಟಗಾರರು, “ಬೆಳೆ ನಷ್ಟದ ಸಂದರ್ಭದಲ್ಲಿ ಸರ್ಕಾರವು ರೈತರಿಗೆ ಪರಿಹಾರ ನೀಡಬೇಕು ಮತ್ತು ಸಾಂಕ್ರಾಮಿಕ ರೋಗದ ಕೊನೆಯವರೆಗೂ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಪ್ರಕಾರ ಮಾಸಿಕ ಉಚಿತ ಪಡಿತರವನ್ನು ನೀಡಬೇಕು. ರಸಗೊಬ್ಬರ ಖರೀದಿಯ ಸಮಸ್ಯೆಯನ್ನೂ ಗಮನಾರ್ಹವಾಗಿ ತೆಗೆದುಕೊಳ್ಳುವಂತೆ” ಮನವಿ ಮಾಡಿದರು.

ಇದನ್ನೂ ಓದಿ: ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ…

ಮುಂದುವರೆದು, ಅರಣ್ಯ ಹಕ್ಕು ಕಾಯ್ದೆಯ ಪ್ರಕಾರ ಬುಡಕಟ್ಟು ಜನಾಂಗದವರ ಆಸ್ತಿಯಾಗಿರುವ ಅರಣ್ಯ ಪ್ರದೇಶವನ್ನು ಖಾಸಗೀ ಕಂಪನಿಗಳಿಗೆ 40 ಪ್ರತಿಶತದಷ್ಟು ಗುತ್ತಿಗೆಗೆ ನೀಡಿದ್ದಕ್ಕಾಗಿ ಅವರು ರಾಜ್ಯ ಸರ್ಕಾರವನ್ನು ಖಂಡಿಸಿದ್ದು, ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದರು.

ಆನ್‌ಲೈನ್ ಶಿಕ್ಷಣವನ್ನು ಮುಂದುವರೆಸುವ ಬದಲು ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳನ್ನು ತೆರೆಯುವಂತೆ ಸರ್ಕಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಎಲ್ಲಾ ಸೌಲಭ್ಯಗಳೂ ಇರುವ ಗುಣಮಟ್ಟದ ಶಿಕ್ಷಣಕ್ಕಾಗಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...