HomeUncategorizedಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು - ಬೃಹತ್‌ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು – ಬೃಹತ್‌ ಪ್ರತಿಭಟನೆ

ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ಜಾಗೃತ ಆದಿವಾಸಿ ದಲಿತ ಸಂಘಟನೆ'ಯ ಸಾವಿರಾರು ಆದಿವಾಸಿ ರೈತರು ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ...

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮತ್ತು ಪ್ರಸ್ತಾವಿತ ವಿದ್ಯುತ್ ಮಸೂದೆ 2020 ರ ವಿರುದ್ಧ ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮಧ್ಯಪ್ರದೇಶದ ಜಾಗೃತ ಆದಿವಾಸಿ ದಲಿತ ಸಂಘಟನೆಯ ಸಾವಿರಾರು ಆದಿವಾಸಿ ರೈತರು ಬಾರ್ವಾನಿ ಜಿಲ್ಲೆಯಲ್ಲಿ 2020 ರ ಡಿಸೆಂಬರ್ 9 ರಂದು ಬೃಹತ್ ಪ್ರತಿಭಟನೆ ನಡೆಸಿದರು.

ತಮ್ಮ ಪ್ರತಿಭಟನೆಯ ಭಾಗವಾಗಿ ವಿದ್ಯುತ್, ರಸಗೊಬ್ಬರಗಳು, ಪಡಿತರ, ಬೆಳೆ ವಿಮೆ, ಶಿಕ್ಷಣ ಮತ್ತು ರೈತರ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರಧಾನಿ, ಕೇಂದ್ರ ಕೃಷಿ ಸಚಿವರು, ಮುಖ್ಯಮಂತ್ರಿ ಮತ್ತು ಇತರೆ ಅಧಿಕಾರಿಗಳಿಗೆ ಜ್ಞಾಪನಾ ಪತ್ರವನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು – ಬಂಧನ

ಈ ಪತ್ರದಲ್ಲಿ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಸಬ್‌ರಂಗ್ ವರದಿ ಮಾಡಿದೆ.

“ರೈತರ ಬೆಳೆಗಳಿಗೆ ನಿಗದಿತ ಬೆಂಬಲ ಬೆಲೆ ನೀಡುವ ಬದಲು, ಸರ್ಕಾರಿ ಮಂಡಿಗಳನ್ನು ಬೈಪಾಸ್ ಮಾಡಿ ರೈತರನ್ನು ವ್ಯಾಪಾರಿಗಳಿಗೆ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಮಾರಲಾಗುತ್ತಿದೆ. ಈಗಿರುವ ಎಲ್ಲಾ ನಿರ್ಬಂಧಗಳನ್ನೂ ತೆಗೆದುಹಾಕಿದರೆ ರೈತರು ಮತ್ತು ಗ್ರಾಹಕರು ಇಬ್ಬರೂ ಶೋಷಣೆಗೆ ಒಳಗಾಗುತ್ತಾರೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

“ವಿದ್ಯುತ್ ಮಸೂದೆಗೆ ಸಂಬಂಧಿಸಿದಂತೆ, ಸರ್ಕಾರಿ ವಿದ್ಯುತ್ ವಿತರಣೆಯನ್ನು ಖಾಸಗೀಯವರಿಗೆ ಮಾರಲಾಗುತ್ತಿದೆ. ಇದರಿಂದ ವಿದ್ಯುತ್ ಶುಲ್ಕವನ್ನು ಖಾಸಗಿಯವರು ತಮಗಿಚ್ಚೆಬಂದಂತೆ ವಿಧಿಸುತ್ತಾರೆ. ಹಾಗಾಗಿ ಇಲ್ಲಿಯೂ ರೈತರ ಶೋಷಣೆಯಾಗುತ್ತದೆ. ಈ ಹೊಸ ನೀತಿಗಳು ಕಾರ್ಪೊರೇಟ್‌ಗಳಿಗೆ ಕೃಷಿ ಭೂಮಿಯನ್ನು ಕಡಿಮೆ ದರದಲ್ಲಿ ಖರೀದಿಸಲು ಮತ್ತು ಕಾರ್ಮಿಕರನ್ನು ಕಡಿಮೆ ದರದಲ್ಲಿ ನೇಮಿಸಿಕೊಳ್ಳಲು ದಾರಿ ಮಾಡಿಕೊಡುತ್ತದೆ” ಎಂದು ವಾದಿಸಿದ್ದಾರೆ.

2007 ರಲ್ಲಿ ರಾಷ್ಟ್ರೀಯ ರೈತ ಆಯೋಗವನ್ನು ಉಲ್ಲೇಖಿಸಿ, ಆಯೋಗದ ಶಿಫಾರಸಿನ ಪ್ರಕಾರ, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಾರುಕಟ್ಟೆಗಳನ್ನು ತೆರೆಯುವಂತೆ ಕರೆ ನೀಡಿದರು.

ಇದನ್ನೂ ಓದಿ: ರೈತರು ಮಾತುಕತೆಯಿಂದ ಹೊರನಡೆದರು ಎಂಬ ಸಚಿವರ ಮಾತು ದೊಡ್ಡ ಸುಳ್ಳು: ರೈತ ಸಂಘಟನೆಗಳ ಹೇಳಿಕೆ

ಇದಲ್ಲದೆ, ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದಂತೆ, ರೈತರಿಗೆ 24 ಖರೀದಿ ಬೆಳೆಗಳ ಸಂಪೂರ್ಣ ವೆಚ್ಚವನ್ನು ಒಂದೂವರೆ ಪಟ್ಟು ಖಾತ್ರಿಪಡಿಸಿಕೊಡಬೇಕು ಎಂದೂ ಒತ್ತಾಯಿಸಿದರು.

ಸರ್ಕಾರದ ಜವಾಬ್ದಾರಿಯ ಕುರಿತು ಮಾತನಾಡಿದ ಹೋರಾಟಗಾರರು, “ಬೆಳೆ ನಷ್ಟದ ಸಂದರ್ಭದಲ್ಲಿ ಸರ್ಕಾರವು ರೈತರಿಗೆ ಪರಿಹಾರ ನೀಡಬೇಕು ಮತ್ತು ಸಾಂಕ್ರಾಮಿಕ ರೋಗದ ಕೊನೆಯವರೆಗೂ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಪ್ರಕಾರ ಮಾಸಿಕ ಉಚಿತ ಪಡಿತರವನ್ನು ನೀಡಬೇಕು. ರಸಗೊಬ್ಬರ ಖರೀದಿಯ ಸಮಸ್ಯೆಯನ್ನೂ ಗಮನಾರ್ಹವಾಗಿ ತೆಗೆದುಕೊಳ್ಳುವಂತೆ” ಮನವಿ ಮಾಡಿದರು.

ಇದನ್ನೂ ಓದಿ: ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ…

ಮುಂದುವರೆದು, ಅರಣ್ಯ ಹಕ್ಕು ಕಾಯ್ದೆಯ ಪ್ರಕಾರ ಬುಡಕಟ್ಟು ಜನಾಂಗದವರ ಆಸ್ತಿಯಾಗಿರುವ ಅರಣ್ಯ ಪ್ರದೇಶವನ್ನು ಖಾಸಗೀ ಕಂಪನಿಗಳಿಗೆ 40 ಪ್ರತಿಶತದಷ್ಟು ಗುತ್ತಿಗೆಗೆ ನೀಡಿದ್ದಕ್ಕಾಗಿ ಅವರು ರಾಜ್ಯ ಸರ್ಕಾರವನ್ನು ಖಂಡಿಸಿದ್ದು, ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದರು.

ಆನ್‌ಲೈನ್ ಶಿಕ್ಷಣವನ್ನು ಮುಂದುವರೆಸುವ ಬದಲು ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳನ್ನು ತೆರೆಯುವಂತೆ ಸರ್ಕಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಎಲ್ಲಾ ಸೌಲಭ್ಯಗಳೂ ಇರುವ ಗುಣಮಟ್ಟದ ಶಿಕ್ಷಣಕ್ಕಾಗಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...