HomeUncategorizedಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು - ಬೃಹತ್‌ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು – ಬೃಹತ್‌ ಪ್ರತಿಭಟನೆ

ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ಜಾಗೃತ ಆದಿವಾಸಿ ದಲಿತ ಸಂಘಟನೆ'ಯ ಸಾವಿರಾರು ಆದಿವಾಸಿ ರೈತರು ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ...

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮತ್ತು ಪ್ರಸ್ತಾವಿತ ವಿದ್ಯುತ್ ಮಸೂದೆ 2020 ರ ವಿರುದ್ಧ ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮಧ್ಯಪ್ರದೇಶದ ಜಾಗೃತ ಆದಿವಾಸಿ ದಲಿತ ಸಂಘಟನೆಯ ಸಾವಿರಾರು ಆದಿವಾಸಿ ರೈತರು ಬಾರ್ವಾನಿ ಜಿಲ್ಲೆಯಲ್ಲಿ 2020 ರ ಡಿಸೆಂಬರ್ 9 ರಂದು ಬೃಹತ್ ಪ್ರತಿಭಟನೆ ನಡೆಸಿದರು.

ತಮ್ಮ ಪ್ರತಿಭಟನೆಯ ಭಾಗವಾಗಿ ವಿದ್ಯುತ್, ರಸಗೊಬ್ಬರಗಳು, ಪಡಿತರ, ಬೆಳೆ ವಿಮೆ, ಶಿಕ್ಷಣ ಮತ್ತು ರೈತರ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರಧಾನಿ, ಕೇಂದ್ರ ಕೃಷಿ ಸಚಿವರು, ಮುಖ್ಯಮಂತ್ರಿ ಮತ್ತು ಇತರೆ ಅಧಿಕಾರಿಗಳಿಗೆ ಜ್ಞಾಪನಾ ಪತ್ರವನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು – ಬಂಧನ

ಈ ಪತ್ರದಲ್ಲಿ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಸಬ್‌ರಂಗ್ ವರದಿ ಮಾಡಿದೆ.

“ರೈತರ ಬೆಳೆಗಳಿಗೆ ನಿಗದಿತ ಬೆಂಬಲ ಬೆಲೆ ನೀಡುವ ಬದಲು, ಸರ್ಕಾರಿ ಮಂಡಿಗಳನ್ನು ಬೈಪಾಸ್ ಮಾಡಿ ರೈತರನ್ನು ವ್ಯಾಪಾರಿಗಳಿಗೆ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಮಾರಲಾಗುತ್ತಿದೆ. ಈಗಿರುವ ಎಲ್ಲಾ ನಿರ್ಬಂಧಗಳನ್ನೂ ತೆಗೆದುಹಾಕಿದರೆ ರೈತರು ಮತ್ತು ಗ್ರಾಹಕರು ಇಬ್ಬರೂ ಶೋಷಣೆಗೆ ಒಳಗಾಗುತ್ತಾರೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

“ವಿದ್ಯುತ್ ಮಸೂದೆಗೆ ಸಂಬಂಧಿಸಿದಂತೆ, ಸರ್ಕಾರಿ ವಿದ್ಯುತ್ ವಿತರಣೆಯನ್ನು ಖಾಸಗೀಯವರಿಗೆ ಮಾರಲಾಗುತ್ತಿದೆ. ಇದರಿಂದ ವಿದ್ಯುತ್ ಶುಲ್ಕವನ್ನು ಖಾಸಗಿಯವರು ತಮಗಿಚ್ಚೆಬಂದಂತೆ ವಿಧಿಸುತ್ತಾರೆ. ಹಾಗಾಗಿ ಇಲ್ಲಿಯೂ ರೈತರ ಶೋಷಣೆಯಾಗುತ್ತದೆ. ಈ ಹೊಸ ನೀತಿಗಳು ಕಾರ್ಪೊರೇಟ್‌ಗಳಿಗೆ ಕೃಷಿ ಭೂಮಿಯನ್ನು ಕಡಿಮೆ ದರದಲ್ಲಿ ಖರೀದಿಸಲು ಮತ್ತು ಕಾರ್ಮಿಕರನ್ನು ಕಡಿಮೆ ದರದಲ್ಲಿ ನೇಮಿಸಿಕೊಳ್ಳಲು ದಾರಿ ಮಾಡಿಕೊಡುತ್ತದೆ” ಎಂದು ವಾದಿಸಿದ್ದಾರೆ.

2007 ರಲ್ಲಿ ರಾಷ್ಟ್ರೀಯ ರೈತ ಆಯೋಗವನ್ನು ಉಲ್ಲೇಖಿಸಿ, ಆಯೋಗದ ಶಿಫಾರಸಿನ ಪ್ರಕಾರ, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಾರುಕಟ್ಟೆಗಳನ್ನು ತೆರೆಯುವಂತೆ ಕರೆ ನೀಡಿದರು.

ಇದನ್ನೂ ಓದಿ: ರೈತರು ಮಾತುಕತೆಯಿಂದ ಹೊರನಡೆದರು ಎಂಬ ಸಚಿವರ ಮಾತು ದೊಡ್ಡ ಸುಳ್ಳು: ರೈತ ಸಂಘಟನೆಗಳ ಹೇಳಿಕೆ

ಇದಲ್ಲದೆ, ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದಂತೆ, ರೈತರಿಗೆ 24 ಖರೀದಿ ಬೆಳೆಗಳ ಸಂಪೂರ್ಣ ವೆಚ್ಚವನ್ನು ಒಂದೂವರೆ ಪಟ್ಟು ಖಾತ್ರಿಪಡಿಸಿಕೊಡಬೇಕು ಎಂದೂ ಒತ್ತಾಯಿಸಿದರು.

ಸರ್ಕಾರದ ಜವಾಬ್ದಾರಿಯ ಕುರಿತು ಮಾತನಾಡಿದ ಹೋರಾಟಗಾರರು, “ಬೆಳೆ ನಷ್ಟದ ಸಂದರ್ಭದಲ್ಲಿ ಸರ್ಕಾರವು ರೈತರಿಗೆ ಪರಿಹಾರ ನೀಡಬೇಕು ಮತ್ತು ಸಾಂಕ್ರಾಮಿಕ ರೋಗದ ಕೊನೆಯವರೆಗೂ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಪ್ರಕಾರ ಮಾಸಿಕ ಉಚಿತ ಪಡಿತರವನ್ನು ನೀಡಬೇಕು. ರಸಗೊಬ್ಬರ ಖರೀದಿಯ ಸಮಸ್ಯೆಯನ್ನೂ ಗಮನಾರ್ಹವಾಗಿ ತೆಗೆದುಕೊಳ್ಳುವಂತೆ” ಮನವಿ ಮಾಡಿದರು.

ಇದನ್ನೂ ಓದಿ: ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ…

ಮುಂದುವರೆದು, ಅರಣ್ಯ ಹಕ್ಕು ಕಾಯ್ದೆಯ ಪ್ರಕಾರ ಬುಡಕಟ್ಟು ಜನಾಂಗದವರ ಆಸ್ತಿಯಾಗಿರುವ ಅರಣ್ಯ ಪ್ರದೇಶವನ್ನು ಖಾಸಗೀ ಕಂಪನಿಗಳಿಗೆ 40 ಪ್ರತಿಶತದಷ್ಟು ಗುತ್ತಿಗೆಗೆ ನೀಡಿದ್ದಕ್ಕಾಗಿ ಅವರು ರಾಜ್ಯ ಸರ್ಕಾರವನ್ನು ಖಂಡಿಸಿದ್ದು, ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದರು.

ಆನ್‌ಲೈನ್ ಶಿಕ್ಷಣವನ್ನು ಮುಂದುವರೆಸುವ ಬದಲು ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳನ್ನು ತೆರೆಯುವಂತೆ ಸರ್ಕಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಎಲ್ಲಾ ಸೌಲಭ್ಯಗಳೂ ಇರುವ ಗುಣಮಟ್ಟದ ಶಿಕ್ಷಣಕ್ಕಾಗಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....