HomeUncategorizedಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು - ಬೃಹತ್‌ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು – ಬೃಹತ್‌ ಪ್ರತಿಭಟನೆ

ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ಜಾಗೃತ ಆದಿವಾಸಿ ದಲಿತ ಸಂಘಟನೆ'ಯ ಸಾವಿರಾರು ಆದಿವಾಸಿ ರೈತರು ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ...

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮತ್ತು ಪ್ರಸ್ತಾವಿತ ವಿದ್ಯುತ್ ಮಸೂದೆ 2020 ರ ವಿರುದ್ಧ ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮಧ್ಯಪ್ರದೇಶದ ಜಾಗೃತ ಆದಿವಾಸಿ ದಲಿತ ಸಂಘಟನೆಯ ಸಾವಿರಾರು ಆದಿವಾಸಿ ರೈತರು ಬಾರ್ವಾನಿ ಜಿಲ್ಲೆಯಲ್ಲಿ 2020 ರ ಡಿಸೆಂಬರ್ 9 ರಂದು ಬೃಹತ್ ಪ್ರತಿಭಟನೆ ನಡೆಸಿದರು.

ತಮ್ಮ ಪ್ರತಿಭಟನೆಯ ಭಾಗವಾಗಿ ವಿದ್ಯುತ್, ರಸಗೊಬ್ಬರಗಳು, ಪಡಿತರ, ಬೆಳೆ ವಿಮೆ, ಶಿಕ್ಷಣ ಮತ್ತು ರೈತರ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರಧಾನಿ, ಕೇಂದ್ರ ಕೃಷಿ ಸಚಿವರು, ಮುಖ್ಯಮಂತ್ರಿ ಮತ್ತು ಇತರೆ ಅಧಿಕಾರಿಗಳಿಗೆ ಜ್ಞಾಪನಾ ಪತ್ರವನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು – ಬಂಧನ

ಈ ಪತ್ರದಲ್ಲಿ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಸಬ್‌ರಂಗ್ ವರದಿ ಮಾಡಿದೆ.

“ರೈತರ ಬೆಳೆಗಳಿಗೆ ನಿಗದಿತ ಬೆಂಬಲ ಬೆಲೆ ನೀಡುವ ಬದಲು, ಸರ್ಕಾರಿ ಮಂಡಿಗಳನ್ನು ಬೈಪಾಸ್ ಮಾಡಿ ರೈತರನ್ನು ವ್ಯಾಪಾರಿಗಳಿಗೆ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಮಾರಲಾಗುತ್ತಿದೆ. ಈಗಿರುವ ಎಲ್ಲಾ ನಿರ್ಬಂಧಗಳನ್ನೂ ತೆಗೆದುಹಾಕಿದರೆ ರೈತರು ಮತ್ತು ಗ್ರಾಹಕರು ಇಬ್ಬರೂ ಶೋಷಣೆಗೆ ಒಳಗಾಗುತ್ತಾರೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

“ವಿದ್ಯುತ್ ಮಸೂದೆಗೆ ಸಂಬಂಧಿಸಿದಂತೆ, ಸರ್ಕಾರಿ ವಿದ್ಯುತ್ ವಿತರಣೆಯನ್ನು ಖಾಸಗೀಯವರಿಗೆ ಮಾರಲಾಗುತ್ತಿದೆ. ಇದರಿಂದ ವಿದ್ಯುತ್ ಶುಲ್ಕವನ್ನು ಖಾಸಗಿಯವರು ತಮಗಿಚ್ಚೆಬಂದಂತೆ ವಿಧಿಸುತ್ತಾರೆ. ಹಾಗಾಗಿ ಇಲ್ಲಿಯೂ ರೈತರ ಶೋಷಣೆಯಾಗುತ್ತದೆ. ಈ ಹೊಸ ನೀತಿಗಳು ಕಾರ್ಪೊರೇಟ್‌ಗಳಿಗೆ ಕೃಷಿ ಭೂಮಿಯನ್ನು ಕಡಿಮೆ ದರದಲ್ಲಿ ಖರೀದಿಸಲು ಮತ್ತು ಕಾರ್ಮಿಕರನ್ನು ಕಡಿಮೆ ದರದಲ್ಲಿ ನೇಮಿಸಿಕೊಳ್ಳಲು ದಾರಿ ಮಾಡಿಕೊಡುತ್ತದೆ” ಎಂದು ವಾದಿಸಿದ್ದಾರೆ.

2007 ರಲ್ಲಿ ರಾಷ್ಟ್ರೀಯ ರೈತ ಆಯೋಗವನ್ನು ಉಲ್ಲೇಖಿಸಿ, ಆಯೋಗದ ಶಿಫಾರಸಿನ ಪ್ರಕಾರ, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಾರುಕಟ್ಟೆಗಳನ್ನು ತೆರೆಯುವಂತೆ ಕರೆ ನೀಡಿದರು.

ಇದನ್ನೂ ಓದಿ: ರೈತರು ಮಾತುಕತೆಯಿಂದ ಹೊರನಡೆದರು ಎಂಬ ಸಚಿವರ ಮಾತು ದೊಡ್ಡ ಸುಳ್ಳು: ರೈತ ಸಂಘಟನೆಗಳ ಹೇಳಿಕೆ

ಇದಲ್ಲದೆ, ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದಂತೆ, ರೈತರಿಗೆ 24 ಖರೀದಿ ಬೆಳೆಗಳ ಸಂಪೂರ್ಣ ವೆಚ್ಚವನ್ನು ಒಂದೂವರೆ ಪಟ್ಟು ಖಾತ್ರಿಪಡಿಸಿಕೊಡಬೇಕು ಎಂದೂ ಒತ್ತಾಯಿಸಿದರು.

ಸರ್ಕಾರದ ಜವಾಬ್ದಾರಿಯ ಕುರಿತು ಮಾತನಾಡಿದ ಹೋರಾಟಗಾರರು, “ಬೆಳೆ ನಷ್ಟದ ಸಂದರ್ಭದಲ್ಲಿ ಸರ್ಕಾರವು ರೈತರಿಗೆ ಪರಿಹಾರ ನೀಡಬೇಕು ಮತ್ತು ಸಾಂಕ್ರಾಮಿಕ ರೋಗದ ಕೊನೆಯವರೆಗೂ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಪ್ರಕಾರ ಮಾಸಿಕ ಉಚಿತ ಪಡಿತರವನ್ನು ನೀಡಬೇಕು. ರಸಗೊಬ್ಬರ ಖರೀದಿಯ ಸಮಸ್ಯೆಯನ್ನೂ ಗಮನಾರ್ಹವಾಗಿ ತೆಗೆದುಕೊಳ್ಳುವಂತೆ” ಮನವಿ ಮಾಡಿದರು.

ಇದನ್ನೂ ಓದಿ: ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ…

ಮುಂದುವರೆದು, ಅರಣ್ಯ ಹಕ್ಕು ಕಾಯ್ದೆಯ ಪ್ರಕಾರ ಬುಡಕಟ್ಟು ಜನಾಂಗದವರ ಆಸ್ತಿಯಾಗಿರುವ ಅರಣ್ಯ ಪ್ರದೇಶವನ್ನು ಖಾಸಗೀ ಕಂಪನಿಗಳಿಗೆ 40 ಪ್ರತಿಶತದಷ್ಟು ಗುತ್ತಿಗೆಗೆ ನೀಡಿದ್ದಕ್ಕಾಗಿ ಅವರು ರಾಜ್ಯ ಸರ್ಕಾರವನ್ನು ಖಂಡಿಸಿದ್ದು, ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದರು.

ಆನ್‌ಲೈನ್ ಶಿಕ್ಷಣವನ್ನು ಮುಂದುವರೆಸುವ ಬದಲು ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳನ್ನು ತೆರೆಯುವಂತೆ ಸರ್ಕಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಎಲ್ಲಾ ಸೌಲಭ್ಯಗಳೂ ಇರುವ ಗುಣಮಟ್ಟದ ಶಿಕ್ಷಣಕ್ಕಾಗಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...