HomeUncategorizedಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು - ಬೃಹತ್‌ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ತಿರಸ್ಕರಿಸಿದ ಮಧ್ಯಪ್ರದೇಶದ ಆದಿವಾಸಿಗಳು – ಬೃಹತ್‌ ಪ್ರತಿಭಟನೆ

ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ಜಾಗೃತ ಆದಿವಾಸಿ ದಲಿತ ಸಂಘಟನೆ'ಯ ಸಾವಿರಾರು ಆದಿವಾಸಿ ರೈತರು ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ...

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಮತ್ತು ಪ್ರಸ್ತಾವಿತ ವಿದ್ಯುತ್ ಮಸೂದೆ 2020 ರ ವಿರುದ್ಧ ರೈತರು ದೇಶಾದ್ಯಂತದ ನಡೆಸುತ್ತಿರುವ ಆಂದೋಲನವನ್ನು ಬೆಂಬಲಿಸಿ ಮಧ್ಯಪ್ರದೇಶದ ಜಾಗೃತ ಆದಿವಾಸಿ ದಲಿತ ಸಂಘಟನೆಯ ಸಾವಿರಾರು ಆದಿವಾಸಿ ರೈತರು ಬಾರ್ವಾನಿ ಜಿಲ್ಲೆಯಲ್ಲಿ 2020 ರ ಡಿಸೆಂಬರ್ 9 ರಂದು ಬೃಹತ್ ಪ್ರತಿಭಟನೆ ನಡೆಸಿದರು.

ತಮ್ಮ ಪ್ರತಿಭಟನೆಯ ಭಾಗವಾಗಿ ವಿದ್ಯುತ್, ರಸಗೊಬ್ಬರಗಳು, ಪಡಿತರ, ಬೆಳೆ ವಿಮೆ, ಶಿಕ್ಷಣ ಮತ್ತು ರೈತರ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರಧಾನಿ, ಕೇಂದ್ರ ಕೃಷಿ ಸಚಿವರು, ಮುಖ್ಯಮಂತ್ರಿ ಮತ್ತು ಇತರೆ ಅಧಿಕಾರಿಗಳಿಗೆ ಜ್ಞಾಪನಾ ಪತ್ರವನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು – ಬಂಧನ

ಈ ಪತ್ರದಲ್ಲಿ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಸಬ್‌ರಂಗ್ ವರದಿ ಮಾಡಿದೆ.

“ರೈತರ ಬೆಳೆಗಳಿಗೆ ನಿಗದಿತ ಬೆಂಬಲ ಬೆಲೆ ನೀಡುವ ಬದಲು, ಸರ್ಕಾರಿ ಮಂಡಿಗಳನ್ನು ಬೈಪಾಸ್ ಮಾಡಿ ರೈತರನ್ನು ವ್ಯಾಪಾರಿಗಳಿಗೆ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಮಾರಲಾಗುತ್ತಿದೆ. ಈಗಿರುವ ಎಲ್ಲಾ ನಿರ್ಬಂಧಗಳನ್ನೂ ತೆಗೆದುಹಾಕಿದರೆ ರೈತರು ಮತ್ತು ಗ್ರಾಹಕರು ಇಬ್ಬರೂ ಶೋಷಣೆಗೆ ಒಳಗಾಗುತ್ತಾರೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

“ವಿದ್ಯುತ್ ಮಸೂದೆಗೆ ಸಂಬಂಧಿಸಿದಂತೆ, ಸರ್ಕಾರಿ ವಿದ್ಯುತ್ ವಿತರಣೆಯನ್ನು ಖಾಸಗೀಯವರಿಗೆ ಮಾರಲಾಗುತ್ತಿದೆ. ಇದರಿಂದ ವಿದ್ಯುತ್ ಶುಲ್ಕವನ್ನು ಖಾಸಗಿಯವರು ತಮಗಿಚ್ಚೆಬಂದಂತೆ ವಿಧಿಸುತ್ತಾರೆ. ಹಾಗಾಗಿ ಇಲ್ಲಿಯೂ ರೈತರ ಶೋಷಣೆಯಾಗುತ್ತದೆ. ಈ ಹೊಸ ನೀತಿಗಳು ಕಾರ್ಪೊರೇಟ್‌ಗಳಿಗೆ ಕೃಷಿ ಭೂಮಿಯನ್ನು ಕಡಿಮೆ ದರದಲ್ಲಿ ಖರೀದಿಸಲು ಮತ್ತು ಕಾರ್ಮಿಕರನ್ನು ಕಡಿಮೆ ದರದಲ್ಲಿ ನೇಮಿಸಿಕೊಳ್ಳಲು ದಾರಿ ಮಾಡಿಕೊಡುತ್ತದೆ” ಎಂದು ವಾದಿಸಿದ್ದಾರೆ.

2007 ರಲ್ಲಿ ರಾಷ್ಟ್ರೀಯ ರೈತ ಆಯೋಗವನ್ನು ಉಲ್ಲೇಖಿಸಿ, ಆಯೋಗದ ಶಿಫಾರಸಿನ ಪ್ರಕಾರ, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಾರುಕಟ್ಟೆಗಳನ್ನು ತೆರೆಯುವಂತೆ ಕರೆ ನೀಡಿದರು.

ಇದನ್ನೂ ಓದಿ: ರೈತರು ಮಾತುಕತೆಯಿಂದ ಹೊರನಡೆದರು ಎಂಬ ಸಚಿವರ ಮಾತು ದೊಡ್ಡ ಸುಳ್ಳು: ರೈತ ಸಂಘಟನೆಗಳ ಹೇಳಿಕೆ

ಇದಲ್ಲದೆ, ಸ್ವಾಮಿನಾಥನ್ ಆಯೋಗವು ಶಿಫಾರಸು ಮಾಡಿದಂತೆ, ರೈತರಿಗೆ 24 ಖರೀದಿ ಬೆಳೆಗಳ ಸಂಪೂರ್ಣ ವೆಚ್ಚವನ್ನು ಒಂದೂವರೆ ಪಟ್ಟು ಖಾತ್ರಿಪಡಿಸಿಕೊಡಬೇಕು ಎಂದೂ ಒತ್ತಾಯಿಸಿದರು.

ಸರ್ಕಾರದ ಜವಾಬ್ದಾರಿಯ ಕುರಿತು ಮಾತನಾಡಿದ ಹೋರಾಟಗಾರರು, “ಬೆಳೆ ನಷ್ಟದ ಸಂದರ್ಭದಲ್ಲಿ ಸರ್ಕಾರವು ರೈತರಿಗೆ ಪರಿಹಾರ ನೀಡಬೇಕು ಮತ್ತು ಸಾಂಕ್ರಾಮಿಕ ರೋಗದ ಕೊನೆಯವರೆಗೂ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಪ್ರಕಾರ ಮಾಸಿಕ ಉಚಿತ ಪಡಿತರವನ್ನು ನೀಡಬೇಕು. ರಸಗೊಬ್ಬರ ಖರೀದಿಯ ಸಮಸ್ಯೆಯನ್ನೂ ಗಮನಾರ್ಹವಾಗಿ ತೆಗೆದುಕೊಳ್ಳುವಂತೆ” ಮನವಿ ಮಾಡಿದರು.

ಇದನ್ನೂ ಓದಿ: ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ…

ಮುಂದುವರೆದು, ಅರಣ್ಯ ಹಕ್ಕು ಕಾಯ್ದೆಯ ಪ್ರಕಾರ ಬುಡಕಟ್ಟು ಜನಾಂಗದವರ ಆಸ್ತಿಯಾಗಿರುವ ಅರಣ್ಯ ಪ್ರದೇಶವನ್ನು ಖಾಸಗೀ ಕಂಪನಿಗಳಿಗೆ 40 ಪ್ರತಿಶತದಷ್ಟು ಗುತ್ತಿಗೆಗೆ ನೀಡಿದ್ದಕ್ಕಾಗಿ ಅವರು ರಾಜ್ಯ ಸರ್ಕಾರವನ್ನು ಖಂಡಿಸಿದ್ದು, ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದರು.

ಆನ್‌ಲೈನ್ ಶಿಕ್ಷಣವನ್ನು ಮುಂದುವರೆಸುವ ಬದಲು ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳನ್ನು ತೆರೆಯುವಂತೆ ಸರ್ಕಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಎಲ್ಲಾ ಸೌಲಭ್ಯಗಳೂ ಇರುವ ಗುಣಮಟ್ಟದ ಶಿಕ್ಷಣಕ್ಕಾಗಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...