Homeಮುಖಪುಟಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

- Advertisement -
- Advertisement -

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ ಕುಲ್ದೀಪ್ ಶರ್ಮಾ, ಪತ್ರಕರ್ತ ಅರ್ಫಾಝ್ ಅಹ್ಮದ್ ದೈಂಗ್ ಅವರಿಗೆ ಭೂ ದಾಖಲೆಗಳನ್ನು ಹಸ್ತಾಂತರಿಸುವಾಗ ಕಣ್ಣೀರು ಹಾಕುತ್ತಾ, ಬಿಜೆಪಿಯ ಭದ್ರಕೋಟೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯ ತಾಣವಾಗಿರುವ ಜಮ್ಮುವಿನಲ್ಲಿ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

"ಹಣ ಹೊಂದಿಸಲು ಭಿಕ್ಷೆ ಬೇಡಿದರೂ ಪರವಾಗಿಲ್ಲ, ನಾನು ನಿಮಗೆ ಮನೆ ನಿರ್ಮಿಸಿ ಕೊಡುತ್ತೇನೆ. ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಪಿತೂರಿ ಎಂದಿಗೂ ಯಶಸ್ವಿಯಾಗುವುದಿಲ್ಲ. ನಮ್ಮ ಸಹೋದರತ್ವ ಯಾವಾಗಲೂ ಹೀಗೆಯೇ ಇರುತ್ತದೆ. ನೀವು ಒಳ್ಳೆಯ ವ್ಯಕ್ತಿ, ನಿಮ್ಮ ಮಕ್ಕಳಿಗೆ ಒಳ್ಳೆಯದಾಗಲಿ" ಎಂದು ಕುಲ್ದೀಪ್ ಶರ್ಮಾ ಅರ್ಫಾಝ್‌ ಮುಂದೆ ಹೇಳಿರುವುದು ಭವ್ಯ ಭಾರತದ ಸಾಮರಸ್ಯದ ಅಸ್ಮಿತೆಯನ್ನು ಯಾವ ದ್ವೇಷದ ಶಕ್ತಿಯಿಂದಲೂ ಹದೆಗೆಡಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಸಾರಿದೆ.

ನವೆಂಬರ್ ತಿಂಗಳ ಆರಂಭದಲ್ಲಿ ಗಡಿಯಾಚೆಗಿನ ಪ್ರಮುಖ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಬಂಧಿಸಲ್ಪಟ್ಟ ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ಜಮ್ಮು (ಪೂರ್ವ) ಉಪ ವಿಭಾಗೀಯ ಪೊಲೀಸ್ ಅಧಿಕಾರಿಗೆ ಸಂಪರ್ಕ ಇದೆ ಎಂಬ ಬಗ್ಗೆ ಅರ್ಫಾಝ್ ಅಹ್ಮದ್ ದೈಂಗ್ ನವೆಂಬರ್ 14ರಂದು ವರದಿ ಮಾಡಿದ್ದರು. ನವೆಂಬರ್ 26ರಂದು ಆ ಪೊಲೀಸ್ ಅಧಿಕಾರಿಯ ವರ್ಗಾವಣೆ ಆಗಿತ್ತು. ಈ ಬೆನ್ನಲ್ಲೇ ನವೆಂಬರ್ 27ರಂದು ಆರ್ಫಾಝ್ ಅವರ ಮನೆ ಕೆಡವಲಾಗಿದೆ.

ಆದರೆ, ಪೊಲೀಸ್ ಅಧಿಕಾರಿಯ ವಿರುದ್ದ ವರದಿ ಮಾಡಿದ್ದಕ್ಕೆ ಗುರಿಯಾಗಿಸಿ ಅರ್ಫಾಝ್ ಅವರ ಮನೆ ಕೆಡವಲಾಗಿದೆ ಎಂಬ ಆರೋಪವನ್ನು ಜಮ್ಮು ಕಾಶ್ಮೀರ ಆಡಳಿತ ನಿರಾಕರಿಸಿದ್ದು, ಅರ್ಫಾಝ್ ಅವರ ಮನೆಯನ್ನು ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿತ್ತು ಎಂದಿದೆ. ಇನ್ನು ಅರ್ಫಾಝ್ ತನ್ನ ವಿರುದ್ದ ಮಾಡಿರುವ ಆರೋಪವೂ ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸರ್ಕಾರಕ್ಕೆ ನಾಚಿಕೆಯಾಗಬೇಕು- ಕುಲ್ದೀಪ್ ಶರ್ಮಾ

ಆಡಳಿತ ಮನೆ ಕೆಡವಿದ ಬಳಿಕ ಜಮ್ಮುವಿನ ಚನ್ನಿ ಪ್ರದೇಶದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಟಾರ್ಪಲ್ ಶೆಡ್‌ನಲ್ಲಿ ಅರ್ಫಾಝ್ ಅವರ ಕುಟುಂಬ ಉಳಿದುಕೊಂಡಿದೆ. ಇದನ್ನು ಮಾಧ್ಯಮಗಳ ಮುಂದೆ ತೋರಿಸಿದ ಕುಲ್ದೀಪ್ ಶರ್ಮಾ, “ನೋಡಿ ಅವರ ಮಕ್ಕಳು ಬಯಲಿನಲ್ಲಿ ಕುಳಿತಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ದೇಶದ ನಾಗರಿಕರಾದ ನಂತರವೂ ಜನರನ್ನು ನಿರಾಶ್ರಿತರನ್ನಾಗಿ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಲ್ದೀಪ್ ಅವರ ನಿರ್ಧಾರದ ಬಗ್ಗೆ ಅವರ ಮಗಳು ತಾನಿಯಾ ಶರ್ಮಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅರ್ಫಾಝ್ ಅವರ ಸ್ಥಿತಿ ನೋಡಿ ನನಗೆ ತುಂಬಾ ದುಖಃವಾಗಿದೆ. ರಾತ್ರೋ ರಾತ್ರಿ ಒಬ್ಬರು ನಿರಾಶ್ರಿತರಾಗುವುದು ಅಂದರೆ? ಅರ್ಫಾಝ್ ನನಗೆ ಸಹೋದರನಂತೆ. ನಾನು ಮಾತ್ರವಲ್ಲ ನನ್ನ ಕುಟುಂಬ ಮತ್ತು ಇಡೀ ಸಮುದಾಯ ಅವರ ಜೊತೆಗಿದೆ" ಎಂದು ತಾನಿಯಾ ಶರ್ಮಾ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ” ರಾಜಕೀಯದ ಹೊರತಾಗಿಯೂ, ಜಮ್ಮು ಮತ್ತು ಕಾಶ್ಮೀರದ ಜನರು ಒಗ್ಗಟ್ಟಿನಿಂದ ಇರಬೇಕು” ಎಂದು ಸುದ್ದಿ ಸಂಸ್ಥೆ ದಿ ವೈರ್‌ ತಾನಿಯಾ ತಿಳಿಸಿದ್ದಾರೆ.

“ನನ್ನ ತಂದೆಯ ಬಗ್ಗೆ ನನಗೆ ಹೆಮ್ಮೆ ಇದೆ. ಹಿಂದೂ-ಮುಸ್ಲಿಂ ಐಕ್ಯತೆಯನ್ನು ಬಲಪಡಿಸಬೇಕು ಎಂಬುದಕ್ಕೆ ಅವರು ಉತ್ತಮ ಉದಾಹರಣೆ ನೀಡಿದ್ದಾರೆ” ಎಂದು ತಾನಿಯಾ ಹೇಳಿದ್ದಾರೆ.

ಕುಲ್ದೀಪ್ ಜಾಗದ ದಾಖಲೆಗಳನ್ನು ಹಸ್ತಾಂತರಿಸುವಾಗ ಅವರನ್ನು ತಬ್ಬಿಕೊಂಡ ಅರ್ಫಾಝ್ ಅವರ ತಂದೆ ಗುಲಾಮ್ ಖಾದಿರ್, ನವೆಂಬರ್ 27ರಂದು ನಮ್ಮ ಮನೆ ನೆಲಸಮವಾದ ನಂತರ ಸಾವಿರಾರು ಜನರು ನಮಗೆ ಬೆಂಬಲ, ಸಹಕಾರ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ನಮಗೆ ಯಾವುದೇ ಚಿಂತೆಯಿಲ್ಲ. ಸಾರ್ವಜನಿಕರು ನಮ್ಮ ಬೆನ್ನಿಗೆ ನಿಂತಿದ್ದಾರೆ. ಅವರು ನನ್ನ ಮಗನನ್ನು ಬೆಂಬಲಿಸಿದ್ದಾರೆ. ಇದು ನನಗೆ ಅಮೂಲ್ಯವಾದುದು. ನನಗೆ ಇನ್ನೇನು ಬೇಕು? ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೋಮು ಸಾಮರಸ್ಯ ಇನ್ನೂ ಅಸ್ತಿತ್ವದಲ್ಲಿದೆ ಎಂದು ತೋರಿಸುತ್ತವೆ. ನಾನು ನಿಜವಾಗಿಯೂ ಸಂತೋಷವಾಗಿದ್ದೇನೆ” ಎಂದು ಗುಲಾಮ್ ಖಾದಿರ್ ಹೇಳಿದ್ದಾರೆ.

ಮುಂದುವರಿದು, “ಇದು ಸತ್ಯ ಮಾತನಾಡುವ ಯುಗವಲ್ಲ. ಕೆಲವೇ ಜನರು ಸತ್ಯವನ್ನು ಬೆಂಬಲಿಸುತ್ತಾರೆ. ಅಪ್ರಾಮಾಣಿಕರು ಮತ್ತು ಭ್ರಷ್ಟರು, ಅಕ್ರಮ ವ್ಯಾಪಾರ ಮಾಡುವವರು, ಸಾವಿರಾರು ಎಕರೆ ಭೂಮಿಯನ್ನು ಅತಿಕ್ರಮಿಸಿಕೊಂಡವರು, ಯಾರೂ ಅವರನ್ನು ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದಿದ್ದಾರೆ.

ಜಮ್ಮು ಅಭಿವೃದ್ಧಿ ಪ್ರಾಧಿಕಾರ (ಜೆಡಿಎ) ನಮ್ಮ ಒಂದು ಅಂತಸ್ತಿನ ಮನೆಯನ್ನು ಮಾತ್ರ ಗುರಿಯಾಗಿಸಿ ಕೆಡವಿದೆ. ಇದನ್ನು ಸುಮಾರು 40 ವರ್ಷಗಳ ಹಿಂದೆ ಕೆಲವು ಮಾರ್ಲಾ ಭೂಮಿಯಲ್ಲಿ ನಿರ್ಮಿಸಲಾಗಿತ್ತು. ನಮಗೆ ಬೇರೆ ಯಾವುದೇ ಆಸ್ತಿ ಇರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಜೆಡಿಎ ಆಯ್ದ ಆಸ್ತಿಯನ್ನು ಗುರಿಯಾಗಿಸಿಕೊಂಡಿದೆ ಎಂಬ ಆರೋಪಗಳನ್ನು ನಿರಾಕರಿಸಿದೆ.

“ನನ್ನ ಮಗ ಭ್ರಷ್ಟನಾಗಿದ್ದರೆ, (ದುಡ್ಡು ಮಾಡುವವನು ಆಗಿದ್ದರೆ) ನಮಗೆ ಒಂದಷ್ಟು ಜಾಗವನ್ನಾದರೂ ಮಾಡುತ್ತಿದ್ದ. ಸಾರ್ವಜನಿಕ ಹಿತಕ್ಕಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಬೇಕಾಗಿದ್ದರೂ ಸಹ ಹಿಂಜರಿಯಬಾರದು ಎಂದು ನಾನು ಯಾವಾಗಲು ಅವನಿಗೆ ಸಲಹೆ ನೀಡುತ್ತಿರುತ್ತೇನೆ. ನನ್ನ ಮಗ ದೇಶದ ಸಂವಿಧಾನವನ್ನು ಎತ್ತಿ ಹಿಡಿಯಲು ತನ್ನ ಪ್ರಾಣವನ್ನು ಒತ್ತೆ ಇಟ್ಟಿದ್ದಾನೆ” ಗುಲಾಮ್ ಖಾದಿರ್ ಭಾವುಕರಾಗಿ ನುಡಿದಿದ್ದಾರೆ ಎಂದು ದಿ ವೈರ್ ವಿವರಿಸಿದೆ.

ಕುಲ್ದೀಪ್ ಶರ್ಮಾ ಅರ್ಫಾಝ್‌ಗೆ ಜಮೀನು ಕೊಟ್ಟ ವಿಷಯವನ್ನು ಮೊದಲು ವರದಿ ಮಾಡಿದ್ದು ಜಮ್ಮು ಮೂಲದ ಪತ್ರಕರ್ತೆ ರಶ್ಮಿ ಶರ್ಮಾ. ಇವರು ಅರ್ಫಾಝ್ ನಡೆಸುತ್ತಿರುವ ಹೊಸ ಡಿಜಿಟಲ್ ಮಾಧ್ಯಮ ‘ನ್ಯೂಸ್ ಸೆಹರ್ ಇಂಡಿಯಾ’ದ ವೀಕ್ಷಕಿ ಮತ್ತು ಫಾಲೋವರ್ ಕೂಡ ಹೌದು. ನ್ಯೂಸ್ ಸೆಹರ್ ಇಂಡಿಯಾ ಸಾಮಾಜಿಕ ಮಾಧ್ಯಮದಲ್ಲಿ ಸುಮಾರು ಅರ್ಧ ಮಿಲಿಯನ್ ಅನುಯಾಯಿಗಳು ಮತ್ತು ಚಂದಾದಾರರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...