Homeಮುಖಪುಟಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

- Advertisement -
- Advertisement -

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ ಕುಲ್ದೀಪ್ ಶರ್ಮಾ, ಪತ್ರಕರ್ತ ಅರ್ಫಾಝ್ ಅಹ್ಮದ್ ದೈಂಗ್ ಅವರಿಗೆ ಭೂ ದಾಖಲೆಗಳನ್ನು ಹಸ್ತಾಂತರಿಸುವಾಗ ಕಣ್ಣೀರು ಹಾಕುತ್ತಾ, ಬಿಜೆಪಿಯ ಭದ್ರಕೋಟೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯ ತಾಣವಾಗಿರುವ ಜಮ್ಮುವಿನಲ್ಲಿ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

"ಹಣ ಹೊಂದಿಸಲು ಭಿಕ್ಷೆ ಬೇಡಿದರೂ ಪರವಾಗಿಲ್ಲ, ನಾನು ನಿಮಗೆ ಮನೆ ನಿರ್ಮಿಸಿ ಕೊಡುತ್ತೇನೆ. ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಪಿತೂರಿ ಎಂದಿಗೂ ಯಶಸ್ವಿಯಾಗುವುದಿಲ್ಲ. ನಮ್ಮ ಸಹೋದರತ್ವ ಯಾವಾಗಲೂ ಹೀಗೆಯೇ ಇರುತ್ತದೆ. ನೀವು ಒಳ್ಳೆಯ ವ್ಯಕ್ತಿ, ನಿಮ್ಮ ಮಕ್ಕಳಿಗೆ ಒಳ್ಳೆಯದಾಗಲಿ" ಎಂದು ಕುಲ್ದೀಪ್ ಶರ್ಮಾ ಅರ್ಫಾಝ್‌ ಮುಂದೆ ಹೇಳಿರುವುದು ಭವ್ಯ ಭಾರತದ ಸಾಮರಸ್ಯದ ಅಸ್ಮಿತೆಯನ್ನು ಯಾವ ದ್ವೇಷದ ಶಕ್ತಿಯಿಂದಲೂ ಹದೆಗೆಡಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಸಾರಿದೆ.

ನವೆಂಬರ್ ತಿಂಗಳ ಆರಂಭದಲ್ಲಿ ಗಡಿಯಾಚೆಗಿನ ಪ್ರಮುಖ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಬಂಧಿಸಲ್ಪಟ್ಟ ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ಜಮ್ಮು (ಪೂರ್ವ) ಉಪ ವಿಭಾಗೀಯ ಪೊಲೀಸ್ ಅಧಿಕಾರಿಗೆ ಸಂಪರ್ಕ ಇದೆ ಎಂಬ ಬಗ್ಗೆ ಅರ್ಫಾಝ್ ಅಹ್ಮದ್ ದೈಂಗ್ ನವೆಂಬರ್ 14ರಂದು ವರದಿ ಮಾಡಿದ್ದರು. ನವೆಂಬರ್ 26ರಂದು ಆ ಪೊಲೀಸ್ ಅಧಿಕಾರಿಯ ವರ್ಗಾವಣೆ ಆಗಿತ್ತು. ಈ ಬೆನ್ನಲ್ಲೇ ನವೆಂಬರ್ 27ರಂದು ಆರ್ಫಾಝ್ ಅವರ ಮನೆ ಕೆಡವಲಾಗಿದೆ.

ಆದರೆ, ಪೊಲೀಸ್ ಅಧಿಕಾರಿಯ ವಿರುದ್ದ ವರದಿ ಮಾಡಿದ್ದಕ್ಕೆ ಗುರಿಯಾಗಿಸಿ ಅರ್ಫಾಝ್ ಅವರ ಮನೆ ಕೆಡವಲಾಗಿದೆ ಎಂಬ ಆರೋಪವನ್ನು ಜಮ್ಮು ಕಾಶ್ಮೀರ ಆಡಳಿತ ನಿರಾಕರಿಸಿದ್ದು, ಅರ್ಫಾಝ್ ಅವರ ಮನೆಯನ್ನು ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿತ್ತು ಎಂದಿದೆ. ಇನ್ನು ಅರ್ಫಾಝ್ ತನ್ನ ವಿರುದ್ದ ಮಾಡಿರುವ ಆರೋಪವೂ ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸರ್ಕಾರಕ್ಕೆ ನಾಚಿಕೆಯಾಗಬೇಕು- ಕುಲ್ದೀಪ್ ಶರ್ಮಾ

ಆಡಳಿತ ಮನೆ ಕೆಡವಿದ ಬಳಿಕ ಜಮ್ಮುವಿನ ಚನ್ನಿ ಪ್ರದೇಶದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಟಾರ್ಪಲ್ ಶೆಡ್‌ನಲ್ಲಿ ಅರ್ಫಾಝ್ ಅವರ ಕುಟುಂಬ ಉಳಿದುಕೊಂಡಿದೆ. ಇದನ್ನು ಮಾಧ್ಯಮಗಳ ಮುಂದೆ ತೋರಿಸಿದ ಕುಲ್ದೀಪ್ ಶರ್ಮಾ, “ನೋಡಿ ಅವರ ಮಕ್ಕಳು ಬಯಲಿನಲ್ಲಿ ಕುಳಿತಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ದೇಶದ ನಾಗರಿಕರಾದ ನಂತರವೂ ಜನರನ್ನು ನಿರಾಶ್ರಿತರನ್ನಾಗಿ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಲ್ದೀಪ್ ಅವರ ನಿರ್ಧಾರದ ಬಗ್ಗೆ ಅವರ ಮಗಳು ತಾನಿಯಾ ಶರ್ಮಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅರ್ಫಾಝ್ ಅವರ ಸ್ಥಿತಿ ನೋಡಿ ನನಗೆ ತುಂಬಾ ದುಖಃವಾಗಿದೆ. ರಾತ್ರೋ ರಾತ್ರಿ ಒಬ್ಬರು ನಿರಾಶ್ರಿತರಾಗುವುದು ಅಂದರೆ? ಅರ್ಫಾಝ್ ನನಗೆ ಸಹೋದರನಂತೆ. ನಾನು ಮಾತ್ರವಲ್ಲ ನನ್ನ ಕುಟುಂಬ ಮತ್ತು ಇಡೀ ಸಮುದಾಯ ಅವರ ಜೊತೆಗಿದೆ" ಎಂದು ತಾನಿಯಾ ಶರ್ಮಾ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ” ರಾಜಕೀಯದ ಹೊರತಾಗಿಯೂ, ಜಮ್ಮು ಮತ್ತು ಕಾಶ್ಮೀರದ ಜನರು ಒಗ್ಗಟ್ಟಿನಿಂದ ಇರಬೇಕು” ಎಂದು ಸುದ್ದಿ ಸಂಸ್ಥೆ ದಿ ವೈರ್‌ ತಾನಿಯಾ ತಿಳಿಸಿದ್ದಾರೆ.

“ನನ್ನ ತಂದೆಯ ಬಗ್ಗೆ ನನಗೆ ಹೆಮ್ಮೆ ಇದೆ. ಹಿಂದೂ-ಮುಸ್ಲಿಂ ಐಕ್ಯತೆಯನ್ನು ಬಲಪಡಿಸಬೇಕು ಎಂಬುದಕ್ಕೆ ಅವರು ಉತ್ತಮ ಉದಾಹರಣೆ ನೀಡಿದ್ದಾರೆ” ಎಂದು ತಾನಿಯಾ ಹೇಳಿದ್ದಾರೆ.

ಕುಲ್ದೀಪ್ ಜಾಗದ ದಾಖಲೆಗಳನ್ನು ಹಸ್ತಾಂತರಿಸುವಾಗ ಅವರನ್ನು ತಬ್ಬಿಕೊಂಡ ಅರ್ಫಾಝ್ ಅವರ ತಂದೆ ಗುಲಾಮ್ ಖಾದಿರ್, ನವೆಂಬರ್ 27ರಂದು ನಮ್ಮ ಮನೆ ನೆಲಸಮವಾದ ನಂತರ ಸಾವಿರಾರು ಜನರು ನಮಗೆ ಬೆಂಬಲ, ಸಹಕಾರ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ನಮಗೆ ಯಾವುದೇ ಚಿಂತೆಯಿಲ್ಲ. ಸಾರ್ವಜನಿಕರು ನಮ್ಮ ಬೆನ್ನಿಗೆ ನಿಂತಿದ್ದಾರೆ. ಅವರು ನನ್ನ ಮಗನನ್ನು ಬೆಂಬಲಿಸಿದ್ದಾರೆ. ಇದು ನನಗೆ ಅಮೂಲ್ಯವಾದುದು. ನನಗೆ ಇನ್ನೇನು ಬೇಕು? ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೋಮು ಸಾಮರಸ್ಯ ಇನ್ನೂ ಅಸ್ತಿತ್ವದಲ್ಲಿದೆ ಎಂದು ತೋರಿಸುತ್ತವೆ. ನಾನು ನಿಜವಾಗಿಯೂ ಸಂತೋಷವಾಗಿದ್ದೇನೆ” ಎಂದು ಗುಲಾಮ್ ಖಾದಿರ್ ಹೇಳಿದ್ದಾರೆ.

ಮುಂದುವರಿದು, “ಇದು ಸತ್ಯ ಮಾತನಾಡುವ ಯುಗವಲ್ಲ. ಕೆಲವೇ ಜನರು ಸತ್ಯವನ್ನು ಬೆಂಬಲಿಸುತ್ತಾರೆ. ಅಪ್ರಾಮಾಣಿಕರು ಮತ್ತು ಭ್ರಷ್ಟರು, ಅಕ್ರಮ ವ್ಯಾಪಾರ ಮಾಡುವವರು, ಸಾವಿರಾರು ಎಕರೆ ಭೂಮಿಯನ್ನು ಅತಿಕ್ರಮಿಸಿಕೊಂಡವರು, ಯಾರೂ ಅವರನ್ನು ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದಿದ್ದಾರೆ.

ಜಮ್ಮು ಅಭಿವೃದ್ಧಿ ಪ್ರಾಧಿಕಾರ (ಜೆಡಿಎ) ನಮ್ಮ ಒಂದು ಅಂತಸ್ತಿನ ಮನೆಯನ್ನು ಮಾತ್ರ ಗುರಿಯಾಗಿಸಿ ಕೆಡವಿದೆ. ಇದನ್ನು ಸುಮಾರು 40 ವರ್ಷಗಳ ಹಿಂದೆ ಕೆಲವು ಮಾರ್ಲಾ ಭೂಮಿಯಲ್ಲಿ ನಿರ್ಮಿಸಲಾಗಿತ್ತು. ನಮಗೆ ಬೇರೆ ಯಾವುದೇ ಆಸ್ತಿ ಇರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಜೆಡಿಎ ಆಯ್ದ ಆಸ್ತಿಯನ್ನು ಗುರಿಯಾಗಿಸಿಕೊಂಡಿದೆ ಎಂಬ ಆರೋಪಗಳನ್ನು ನಿರಾಕರಿಸಿದೆ.

“ನನ್ನ ಮಗ ಭ್ರಷ್ಟನಾಗಿದ್ದರೆ, (ದುಡ್ಡು ಮಾಡುವವನು ಆಗಿದ್ದರೆ) ನಮಗೆ ಒಂದಷ್ಟು ಜಾಗವನ್ನಾದರೂ ಮಾಡುತ್ತಿದ್ದ. ಸಾರ್ವಜನಿಕ ಹಿತಕ್ಕಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಬೇಕಾಗಿದ್ದರೂ ಸಹ ಹಿಂಜರಿಯಬಾರದು ಎಂದು ನಾನು ಯಾವಾಗಲು ಅವನಿಗೆ ಸಲಹೆ ನೀಡುತ್ತಿರುತ್ತೇನೆ. ನನ್ನ ಮಗ ದೇಶದ ಸಂವಿಧಾನವನ್ನು ಎತ್ತಿ ಹಿಡಿಯಲು ತನ್ನ ಪ್ರಾಣವನ್ನು ಒತ್ತೆ ಇಟ್ಟಿದ್ದಾನೆ” ಗುಲಾಮ್ ಖಾದಿರ್ ಭಾವುಕರಾಗಿ ನುಡಿದಿದ್ದಾರೆ ಎಂದು ದಿ ವೈರ್ ವಿವರಿಸಿದೆ.

ಕುಲ್ದೀಪ್ ಶರ್ಮಾ ಅರ್ಫಾಝ್‌ಗೆ ಜಮೀನು ಕೊಟ್ಟ ವಿಷಯವನ್ನು ಮೊದಲು ವರದಿ ಮಾಡಿದ್ದು ಜಮ್ಮು ಮೂಲದ ಪತ್ರಕರ್ತೆ ರಶ್ಮಿ ಶರ್ಮಾ. ಇವರು ಅರ್ಫಾಝ್ ನಡೆಸುತ್ತಿರುವ ಹೊಸ ಡಿಜಿಟಲ್ ಮಾಧ್ಯಮ ‘ನ್ಯೂಸ್ ಸೆಹರ್ ಇಂಡಿಯಾ’ದ ವೀಕ್ಷಕಿ ಮತ್ತು ಫಾಲೋವರ್ ಕೂಡ ಹೌದು. ನ್ಯೂಸ್ ಸೆಹರ್ ಇಂಡಿಯಾ ಸಾಮಾಜಿಕ ಮಾಧ್ಯಮದಲ್ಲಿ ಸುಮಾರು ಅರ್ಧ ಮಿಲಿಯನ್ ಅನುಯಾಯಿಗಳು ಮತ್ತು ಚಂದಾದಾರರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...