Homeಮುಖಪುಟಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

- Advertisement -
- Advertisement -

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ ಕುಲ್ದೀಪ್ ಶರ್ಮಾ, ಪತ್ರಕರ್ತ ಅರ್ಫಾಝ್ ಅಹ್ಮದ್ ದೈಂಗ್ ಅವರಿಗೆ ಭೂ ದಾಖಲೆಗಳನ್ನು ಹಸ್ತಾಂತರಿಸುವಾಗ ಕಣ್ಣೀರು ಹಾಕುತ್ತಾ, ಬಿಜೆಪಿಯ ಭದ್ರಕೋಟೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯ ತಾಣವಾಗಿರುವ ಜಮ್ಮುವಿನಲ್ಲಿ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

"ಹಣ ಹೊಂದಿಸಲು ಭಿಕ್ಷೆ ಬೇಡಿದರೂ ಪರವಾಗಿಲ್ಲ, ನಾನು ನಿಮಗೆ ಮನೆ ನಿರ್ಮಿಸಿ ಕೊಡುತ್ತೇನೆ. ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಪಿತೂರಿ ಎಂದಿಗೂ ಯಶಸ್ವಿಯಾಗುವುದಿಲ್ಲ. ನಮ್ಮ ಸಹೋದರತ್ವ ಯಾವಾಗಲೂ ಹೀಗೆಯೇ ಇರುತ್ತದೆ. ನೀವು ಒಳ್ಳೆಯ ವ್ಯಕ್ತಿ, ನಿಮ್ಮ ಮಕ್ಕಳಿಗೆ ಒಳ್ಳೆಯದಾಗಲಿ" ಎಂದು ಕುಲ್ದೀಪ್ ಶರ್ಮಾ ಅರ್ಫಾಝ್‌ ಮುಂದೆ ಹೇಳಿರುವುದು ಭವ್ಯ ಭಾರತದ ಸಾಮರಸ್ಯದ ಅಸ್ಮಿತೆಯನ್ನು ಯಾವ ದ್ವೇಷದ ಶಕ್ತಿಯಿಂದಲೂ ಹದೆಗೆಡಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಸಾರಿದೆ.

ನವೆಂಬರ್ ತಿಂಗಳ ಆರಂಭದಲ್ಲಿ ಗಡಿಯಾಚೆಗಿನ ಪ್ರಮುಖ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಬಂಧಿಸಲ್ಪಟ್ಟ ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ಜಮ್ಮು (ಪೂರ್ವ) ಉಪ ವಿಭಾಗೀಯ ಪೊಲೀಸ್ ಅಧಿಕಾರಿಗೆ ಸಂಪರ್ಕ ಇದೆ ಎಂಬ ಬಗ್ಗೆ ಅರ್ಫಾಝ್ ಅಹ್ಮದ್ ದೈಂಗ್ ನವೆಂಬರ್ 14ರಂದು ವರದಿ ಮಾಡಿದ್ದರು. ನವೆಂಬರ್ 26ರಂದು ಆ ಪೊಲೀಸ್ ಅಧಿಕಾರಿಯ ವರ್ಗಾವಣೆ ಆಗಿತ್ತು. ಈ ಬೆನ್ನಲ್ಲೇ ನವೆಂಬರ್ 27ರಂದು ಆರ್ಫಾಝ್ ಅವರ ಮನೆ ಕೆಡವಲಾಗಿದೆ.

ಆದರೆ, ಪೊಲೀಸ್ ಅಧಿಕಾರಿಯ ವಿರುದ್ದ ವರದಿ ಮಾಡಿದ್ದಕ್ಕೆ ಗುರಿಯಾಗಿಸಿ ಅರ್ಫಾಝ್ ಅವರ ಮನೆ ಕೆಡವಲಾಗಿದೆ ಎಂಬ ಆರೋಪವನ್ನು ಜಮ್ಮು ಕಾಶ್ಮೀರ ಆಡಳಿತ ನಿರಾಕರಿಸಿದ್ದು, ಅರ್ಫಾಝ್ ಅವರ ಮನೆಯನ್ನು ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿತ್ತು ಎಂದಿದೆ. ಇನ್ನು ಅರ್ಫಾಝ್ ತನ್ನ ವಿರುದ್ದ ಮಾಡಿರುವ ಆರೋಪವೂ ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸರ್ಕಾರಕ್ಕೆ ನಾಚಿಕೆಯಾಗಬೇಕು- ಕುಲ್ದೀಪ್ ಶರ್ಮಾ

ಆಡಳಿತ ಮನೆ ಕೆಡವಿದ ಬಳಿಕ ಜಮ್ಮುವಿನ ಚನ್ನಿ ಪ್ರದೇಶದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಟಾರ್ಪಲ್ ಶೆಡ್‌ನಲ್ಲಿ ಅರ್ಫಾಝ್ ಅವರ ಕುಟುಂಬ ಉಳಿದುಕೊಂಡಿದೆ. ಇದನ್ನು ಮಾಧ್ಯಮಗಳ ಮುಂದೆ ತೋರಿಸಿದ ಕುಲ್ದೀಪ್ ಶರ್ಮಾ, “ನೋಡಿ ಅವರ ಮಕ್ಕಳು ಬಯಲಿನಲ್ಲಿ ಕುಳಿತಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ದೇಶದ ನಾಗರಿಕರಾದ ನಂತರವೂ ಜನರನ್ನು ನಿರಾಶ್ರಿತರನ್ನಾಗಿ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಲ್ದೀಪ್ ಅವರ ನಿರ್ಧಾರದ ಬಗ್ಗೆ ಅವರ ಮಗಳು ತಾನಿಯಾ ಶರ್ಮಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅರ್ಫಾಝ್ ಅವರ ಸ್ಥಿತಿ ನೋಡಿ ನನಗೆ ತುಂಬಾ ದುಖಃವಾಗಿದೆ. ರಾತ್ರೋ ರಾತ್ರಿ ಒಬ್ಬರು ನಿರಾಶ್ರಿತರಾಗುವುದು ಅಂದರೆ? ಅರ್ಫಾಝ್ ನನಗೆ ಸಹೋದರನಂತೆ. ನಾನು ಮಾತ್ರವಲ್ಲ ನನ್ನ ಕುಟುಂಬ ಮತ್ತು ಇಡೀ ಸಮುದಾಯ ಅವರ ಜೊತೆಗಿದೆ" ಎಂದು ತಾನಿಯಾ ಶರ್ಮಾ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ” ರಾಜಕೀಯದ ಹೊರತಾಗಿಯೂ, ಜಮ್ಮು ಮತ್ತು ಕಾಶ್ಮೀರದ ಜನರು ಒಗ್ಗಟ್ಟಿನಿಂದ ಇರಬೇಕು” ಎಂದು ಸುದ್ದಿ ಸಂಸ್ಥೆ ದಿ ವೈರ್‌ ತಾನಿಯಾ ತಿಳಿಸಿದ್ದಾರೆ.

“ನನ್ನ ತಂದೆಯ ಬಗ್ಗೆ ನನಗೆ ಹೆಮ್ಮೆ ಇದೆ. ಹಿಂದೂ-ಮುಸ್ಲಿಂ ಐಕ್ಯತೆಯನ್ನು ಬಲಪಡಿಸಬೇಕು ಎಂಬುದಕ್ಕೆ ಅವರು ಉತ್ತಮ ಉದಾಹರಣೆ ನೀಡಿದ್ದಾರೆ” ಎಂದು ತಾನಿಯಾ ಹೇಳಿದ್ದಾರೆ.

ಕುಲ್ದೀಪ್ ಜಾಗದ ದಾಖಲೆಗಳನ್ನು ಹಸ್ತಾಂತರಿಸುವಾಗ ಅವರನ್ನು ತಬ್ಬಿಕೊಂಡ ಅರ್ಫಾಝ್ ಅವರ ತಂದೆ ಗುಲಾಮ್ ಖಾದಿರ್, ನವೆಂಬರ್ 27ರಂದು ನಮ್ಮ ಮನೆ ನೆಲಸಮವಾದ ನಂತರ ಸಾವಿರಾರು ಜನರು ನಮಗೆ ಬೆಂಬಲ, ಸಹಕಾರ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ನಮಗೆ ಯಾವುದೇ ಚಿಂತೆಯಿಲ್ಲ. ಸಾರ್ವಜನಿಕರು ನಮ್ಮ ಬೆನ್ನಿಗೆ ನಿಂತಿದ್ದಾರೆ. ಅವರು ನನ್ನ ಮಗನನ್ನು ಬೆಂಬಲಿಸಿದ್ದಾರೆ. ಇದು ನನಗೆ ಅಮೂಲ್ಯವಾದುದು. ನನಗೆ ಇನ್ನೇನು ಬೇಕು? ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೋಮು ಸಾಮರಸ್ಯ ಇನ್ನೂ ಅಸ್ತಿತ್ವದಲ್ಲಿದೆ ಎಂದು ತೋರಿಸುತ್ತವೆ. ನಾನು ನಿಜವಾಗಿಯೂ ಸಂತೋಷವಾಗಿದ್ದೇನೆ” ಎಂದು ಗುಲಾಮ್ ಖಾದಿರ್ ಹೇಳಿದ್ದಾರೆ.

ಮುಂದುವರಿದು, “ಇದು ಸತ್ಯ ಮಾತನಾಡುವ ಯುಗವಲ್ಲ. ಕೆಲವೇ ಜನರು ಸತ್ಯವನ್ನು ಬೆಂಬಲಿಸುತ್ತಾರೆ. ಅಪ್ರಾಮಾಣಿಕರು ಮತ್ತು ಭ್ರಷ್ಟರು, ಅಕ್ರಮ ವ್ಯಾಪಾರ ಮಾಡುವವರು, ಸಾವಿರಾರು ಎಕರೆ ಭೂಮಿಯನ್ನು ಅತಿಕ್ರಮಿಸಿಕೊಂಡವರು, ಯಾರೂ ಅವರನ್ನು ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದಿದ್ದಾರೆ.

ಜಮ್ಮು ಅಭಿವೃದ್ಧಿ ಪ್ರಾಧಿಕಾರ (ಜೆಡಿಎ) ನಮ್ಮ ಒಂದು ಅಂತಸ್ತಿನ ಮನೆಯನ್ನು ಮಾತ್ರ ಗುರಿಯಾಗಿಸಿ ಕೆಡವಿದೆ. ಇದನ್ನು ಸುಮಾರು 40 ವರ್ಷಗಳ ಹಿಂದೆ ಕೆಲವು ಮಾರ್ಲಾ ಭೂಮಿಯಲ್ಲಿ ನಿರ್ಮಿಸಲಾಗಿತ್ತು. ನಮಗೆ ಬೇರೆ ಯಾವುದೇ ಆಸ್ತಿ ಇರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಜೆಡಿಎ ಆಯ್ದ ಆಸ್ತಿಯನ್ನು ಗುರಿಯಾಗಿಸಿಕೊಂಡಿದೆ ಎಂಬ ಆರೋಪಗಳನ್ನು ನಿರಾಕರಿಸಿದೆ.

“ನನ್ನ ಮಗ ಭ್ರಷ್ಟನಾಗಿದ್ದರೆ, (ದುಡ್ಡು ಮಾಡುವವನು ಆಗಿದ್ದರೆ) ನಮಗೆ ಒಂದಷ್ಟು ಜಾಗವನ್ನಾದರೂ ಮಾಡುತ್ತಿದ್ದ. ಸಾರ್ವಜನಿಕ ಹಿತಕ್ಕಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಬೇಕಾಗಿದ್ದರೂ ಸಹ ಹಿಂಜರಿಯಬಾರದು ಎಂದು ನಾನು ಯಾವಾಗಲು ಅವನಿಗೆ ಸಲಹೆ ನೀಡುತ್ತಿರುತ್ತೇನೆ. ನನ್ನ ಮಗ ದೇಶದ ಸಂವಿಧಾನವನ್ನು ಎತ್ತಿ ಹಿಡಿಯಲು ತನ್ನ ಪ್ರಾಣವನ್ನು ಒತ್ತೆ ಇಟ್ಟಿದ್ದಾನೆ” ಗುಲಾಮ್ ಖಾದಿರ್ ಭಾವುಕರಾಗಿ ನುಡಿದಿದ್ದಾರೆ ಎಂದು ದಿ ವೈರ್ ವಿವರಿಸಿದೆ.

ಕುಲ್ದೀಪ್ ಶರ್ಮಾ ಅರ್ಫಾಝ್‌ಗೆ ಜಮೀನು ಕೊಟ್ಟ ವಿಷಯವನ್ನು ಮೊದಲು ವರದಿ ಮಾಡಿದ್ದು ಜಮ್ಮು ಮೂಲದ ಪತ್ರಕರ್ತೆ ರಶ್ಮಿ ಶರ್ಮಾ. ಇವರು ಅರ್ಫಾಝ್ ನಡೆಸುತ್ತಿರುವ ಹೊಸ ಡಿಜಿಟಲ್ ಮಾಧ್ಯಮ ‘ನ್ಯೂಸ್ ಸೆಹರ್ ಇಂಡಿಯಾ’ದ ವೀಕ್ಷಕಿ ಮತ್ತು ಫಾಲೋವರ್ ಕೂಡ ಹೌದು. ನ್ಯೂಸ್ ಸೆಹರ್ ಇಂಡಿಯಾ ಸಾಮಾಜಿಕ ಮಾಧ್ಯಮದಲ್ಲಿ ಸುಮಾರು ಅರ್ಧ ಮಿಲಿಯನ್ ಅನುಯಾಯಿಗಳು ಮತ್ತು ಚಂದಾದಾರರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...