Homeಮುಖಪುಟಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

- Advertisement -
- Advertisement -

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ ಕುಲ್ದೀಪ್ ಶರ್ಮಾ, ಪತ್ರಕರ್ತ ಅರ್ಫಾಝ್ ಅಹ್ಮದ್ ದೈಂಗ್ ಅವರಿಗೆ ಭೂ ದಾಖಲೆಗಳನ್ನು ಹಸ್ತಾಂತರಿಸುವಾಗ ಕಣ್ಣೀರು ಹಾಕುತ್ತಾ, ಬಿಜೆಪಿಯ ಭದ್ರಕೋಟೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯ ತಾಣವಾಗಿರುವ ಜಮ್ಮುವಿನಲ್ಲಿ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

"ಹಣ ಹೊಂದಿಸಲು ಭಿಕ್ಷೆ ಬೇಡಿದರೂ ಪರವಾಗಿಲ್ಲ, ನಾನು ನಿಮಗೆ ಮನೆ ನಿರ್ಮಿಸಿ ಕೊಡುತ್ತೇನೆ. ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಪಿತೂರಿ ಎಂದಿಗೂ ಯಶಸ್ವಿಯಾಗುವುದಿಲ್ಲ. ನಮ್ಮ ಸಹೋದರತ್ವ ಯಾವಾಗಲೂ ಹೀಗೆಯೇ ಇರುತ್ತದೆ. ನೀವು ಒಳ್ಳೆಯ ವ್ಯಕ್ತಿ, ನಿಮ್ಮ ಮಕ್ಕಳಿಗೆ ಒಳ್ಳೆಯದಾಗಲಿ" ಎಂದು ಕುಲ್ದೀಪ್ ಶರ್ಮಾ ಅರ್ಫಾಝ್‌ ಮುಂದೆ ಹೇಳಿರುವುದು ಭವ್ಯ ಭಾರತದ ಸಾಮರಸ್ಯದ ಅಸ್ಮಿತೆಯನ್ನು ಯಾವ ದ್ವೇಷದ ಶಕ್ತಿಯಿಂದಲೂ ಹದೆಗೆಡಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಸಾರಿದೆ.

ನವೆಂಬರ್ ತಿಂಗಳ ಆರಂಭದಲ್ಲಿ ಗಡಿಯಾಚೆಗಿನ ಪ್ರಮುಖ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಬಂಧಿಸಲ್ಪಟ್ಟ ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ಜಮ್ಮು (ಪೂರ್ವ) ಉಪ ವಿಭಾಗೀಯ ಪೊಲೀಸ್ ಅಧಿಕಾರಿಗೆ ಸಂಪರ್ಕ ಇದೆ ಎಂಬ ಬಗ್ಗೆ ಅರ್ಫಾಝ್ ಅಹ್ಮದ್ ದೈಂಗ್ ನವೆಂಬರ್ 14ರಂದು ವರದಿ ಮಾಡಿದ್ದರು. ನವೆಂಬರ್ 26ರಂದು ಆ ಪೊಲೀಸ್ ಅಧಿಕಾರಿಯ ವರ್ಗಾವಣೆ ಆಗಿತ್ತು. ಈ ಬೆನ್ನಲ್ಲೇ ನವೆಂಬರ್ 27ರಂದು ಆರ್ಫಾಝ್ ಅವರ ಮನೆ ಕೆಡವಲಾಗಿದೆ.

ಆದರೆ, ಪೊಲೀಸ್ ಅಧಿಕಾರಿಯ ವಿರುದ್ದ ವರದಿ ಮಾಡಿದ್ದಕ್ಕೆ ಗುರಿಯಾಗಿಸಿ ಅರ್ಫಾಝ್ ಅವರ ಮನೆ ಕೆಡವಲಾಗಿದೆ ಎಂಬ ಆರೋಪವನ್ನು ಜಮ್ಮು ಕಾಶ್ಮೀರ ಆಡಳಿತ ನಿರಾಕರಿಸಿದ್ದು, ಅರ್ಫಾಝ್ ಅವರ ಮನೆಯನ್ನು ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿತ್ತು ಎಂದಿದೆ. ಇನ್ನು ಅರ್ಫಾಝ್ ತನ್ನ ವಿರುದ್ದ ಮಾಡಿರುವ ಆರೋಪವೂ ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸರ್ಕಾರಕ್ಕೆ ನಾಚಿಕೆಯಾಗಬೇಕು- ಕುಲ್ದೀಪ್ ಶರ್ಮಾ

ಆಡಳಿತ ಮನೆ ಕೆಡವಿದ ಬಳಿಕ ಜಮ್ಮುವಿನ ಚನ್ನಿ ಪ್ರದೇಶದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಟಾರ್ಪಲ್ ಶೆಡ್‌ನಲ್ಲಿ ಅರ್ಫಾಝ್ ಅವರ ಕುಟುಂಬ ಉಳಿದುಕೊಂಡಿದೆ. ಇದನ್ನು ಮಾಧ್ಯಮಗಳ ಮುಂದೆ ತೋರಿಸಿದ ಕುಲ್ದೀಪ್ ಶರ್ಮಾ, “ನೋಡಿ ಅವರ ಮಕ್ಕಳು ಬಯಲಿನಲ್ಲಿ ಕುಳಿತಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ದೇಶದ ನಾಗರಿಕರಾದ ನಂತರವೂ ಜನರನ್ನು ನಿರಾಶ್ರಿತರನ್ನಾಗಿ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಲ್ದೀಪ್ ಅವರ ನಿರ್ಧಾರದ ಬಗ್ಗೆ ಅವರ ಮಗಳು ತಾನಿಯಾ ಶರ್ಮಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅರ್ಫಾಝ್ ಅವರ ಸ್ಥಿತಿ ನೋಡಿ ನನಗೆ ತುಂಬಾ ದುಖಃವಾಗಿದೆ. ರಾತ್ರೋ ರಾತ್ರಿ ಒಬ್ಬರು ನಿರಾಶ್ರಿತರಾಗುವುದು ಅಂದರೆ? ಅರ್ಫಾಝ್ ನನಗೆ ಸಹೋದರನಂತೆ. ನಾನು ಮಾತ್ರವಲ್ಲ ನನ್ನ ಕುಟುಂಬ ಮತ್ತು ಇಡೀ ಸಮುದಾಯ ಅವರ ಜೊತೆಗಿದೆ" ಎಂದು ತಾನಿಯಾ ಶರ್ಮಾ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ” ರಾಜಕೀಯದ ಹೊರತಾಗಿಯೂ, ಜಮ್ಮು ಮತ್ತು ಕಾಶ್ಮೀರದ ಜನರು ಒಗ್ಗಟ್ಟಿನಿಂದ ಇರಬೇಕು” ಎಂದು ಸುದ್ದಿ ಸಂಸ್ಥೆ ದಿ ವೈರ್‌ ತಾನಿಯಾ ತಿಳಿಸಿದ್ದಾರೆ.

“ನನ್ನ ತಂದೆಯ ಬಗ್ಗೆ ನನಗೆ ಹೆಮ್ಮೆ ಇದೆ. ಹಿಂದೂ-ಮುಸ್ಲಿಂ ಐಕ್ಯತೆಯನ್ನು ಬಲಪಡಿಸಬೇಕು ಎಂಬುದಕ್ಕೆ ಅವರು ಉತ್ತಮ ಉದಾಹರಣೆ ನೀಡಿದ್ದಾರೆ” ಎಂದು ತಾನಿಯಾ ಹೇಳಿದ್ದಾರೆ.

ಕುಲ್ದೀಪ್ ಜಾಗದ ದಾಖಲೆಗಳನ್ನು ಹಸ್ತಾಂತರಿಸುವಾಗ ಅವರನ್ನು ತಬ್ಬಿಕೊಂಡ ಅರ್ಫಾಝ್ ಅವರ ತಂದೆ ಗುಲಾಮ್ ಖಾದಿರ್, ನವೆಂಬರ್ 27ರಂದು ನಮ್ಮ ಮನೆ ನೆಲಸಮವಾದ ನಂತರ ಸಾವಿರಾರು ಜನರು ನಮಗೆ ಬೆಂಬಲ, ಸಹಕಾರ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ನಮಗೆ ಯಾವುದೇ ಚಿಂತೆಯಿಲ್ಲ. ಸಾರ್ವಜನಿಕರು ನಮ್ಮ ಬೆನ್ನಿಗೆ ನಿಂತಿದ್ದಾರೆ. ಅವರು ನನ್ನ ಮಗನನ್ನು ಬೆಂಬಲಿಸಿದ್ದಾರೆ. ಇದು ನನಗೆ ಅಮೂಲ್ಯವಾದುದು. ನನಗೆ ಇನ್ನೇನು ಬೇಕು? ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೋಮು ಸಾಮರಸ್ಯ ಇನ್ನೂ ಅಸ್ತಿತ್ವದಲ್ಲಿದೆ ಎಂದು ತೋರಿಸುತ್ತವೆ. ನಾನು ನಿಜವಾಗಿಯೂ ಸಂತೋಷವಾಗಿದ್ದೇನೆ” ಎಂದು ಗುಲಾಮ್ ಖಾದಿರ್ ಹೇಳಿದ್ದಾರೆ.

ಮುಂದುವರಿದು, “ಇದು ಸತ್ಯ ಮಾತನಾಡುವ ಯುಗವಲ್ಲ. ಕೆಲವೇ ಜನರು ಸತ್ಯವನ್ನು ಬೆಂಬಲಿಸುತ್ತಾರೆ. ಅಪ್ರಾಮಾಣಿಕರು ಮತ್ತು ಭ್ರಷ್ಟರು, ಅಕ್ರಮ ವ್ಯಾಪಾರ ಮಾಡುವವರು, ಸಾವಿರಾರು ಎಕರೆ ಭೂಮಿಯನ್ನು ಅತಿಕ್ರಮಿಸಿಕೊಂಡವರು, ಯಾರೂ ಅವರನ್ನು ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದಿದ್ದಾರೆ.

ಜಮ್ಮು ಅಭಿವೃದ್ಧಿ ಪ್ರಾಧಿಕಾರ (ಜೆಡಿಎ) ನಮ್ಮ ಒಂದು ಅಂತಸ್ತಿನ ಮನೆಯನ್ನು ಮಾತ್ರ ಗುರಿಯಾಗಿಸಿ ಕೆಡವಿದೆ. ಇದನ್ನು ಸುಮಾರು 40 ವರ್ಷಗಳ ಹಿಂದೆ ಕೆಲವು ಮಾರ್ಲಾ ಭೂಮಿಯಲ್ಲಿ ನಿರ್ಮಿಸಲಾಗಿತ್ತು. ನಮಗೆ ಬೇರೆ ಯಾವುದೇ ಆಸ್ತಿ ಇರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಜೆಡಿಎ ಆಯ್ದ ಆಸ್ತಿಯನ್ನು ಗುರಿಯಾಗಿಸಿಕೊಂಡಿದೆ ಎಂಬ ಆರೋಪಗಳನ್ನು ನಿರಾಕರಿಸಿದೆ.

“ನನ್ನ ಮಗ ಭ್ರಷ್ಟನಾಗಿದ್ದರೆ, (ದುಡ್ಡು ಮಾಡುವವನು ಆಗಿದ್ದರೆ) ನಮಗೆ ಒಂದಷ್ಟು ಜಾಗವನ್ನಾದರೂ ಮಾಡುತ್ತಿದ್ದ. ಸಾರ್ವಜನಿಕ ಹಿತಕ್ಕಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಬೇಕಾಗಿದ್ದರೂ ಸಹ ಹಿಂಜರಿಯಬಾರದು ಎಂದು ನಾನು ಯಾವಾಗಲು ಅವನಿಗೆ ಸಲಹೆ ನೀಡುತ್ತಿರುತ್ತೇನೆ. ನನ್ನ ಮಗ ದೇಶದ ಸಂವಿಧಾನವನ್ನು ಎತ್ತಿ ಹಿಡಿಯಲು ತನ್ನ ಪ್ರಾಣವನ್ನು ಒತ್ತೆ ಇಟ್ಟಿದ್ದಾನೆ” ಗುಲಾಮ್ ಖಾದಿರ್ ಭಾವುಕರಾಗಿ ನುಡಿದಿದ್ದಾರೆ ಎಂದು ದಿ ವೈರ್ ವಿವರಿಸಿದೆ.

ಕುಲ್ದೀಪ್ ಶರ್ಮಾ ಅರ್ಫಾಝ್‌ಗೆ ಜಮೀನು ಕೊಟ್ಟ ವಿಷಯವನ್ನು ಮೊದಲು ವರದಿ ಮಾಡಿದ್ದು ಜಮ್ಮು ಮೂಲದ ಪತ್ರಕರ್ತೆ ರಶ್ಮಿ ಶರ್ಮಾ. ಇವರು ಅರ್ಫಾಝ್ ನಡೆಸುತ್ತಿರುವ ಹೊಸ ಡಿಜಿಟಲ್ ಮಾಧ್ಯಮ ‘ನ್ಯೂಸ್ ಸೆಹರ್ ಇಂಡಿಯಾ’ದ ವೀಕ್ಷಕಿ ಮತ್ತು ಫಾಲೋವರ್ ಕೂಡ ಹೌದು. ನ್ಯೂಸ್ ಸೆಹರ್ ಇಂಡಿಯಾ ಸಾಮಾಜಿಕ ಮಾಧ್ಯಮದಲ್ಲಿ ಸುಮಾರು ಅರ್ಧ ಮಿಲಿಯನ್ ಅನುಯಾಯಿಗಳು ಮತ್ತು ಚಂದಾದಾರರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...