Homeಮುಖಪುಟಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

- Advertisement -
- Advertisement -

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ ಕುಲ್ದೀಪ್ ಶರ್ಮಾ, ಪತ್ರಕರ್ತ ಅರ್ಫಾಝ್ ಅಹ್ಮದ್ ದೈಂಗ್ ಅವರಿಗೆ ಭೂ ದಾಖಲೆಗಳನ್ನು ಹಸ್ತಾಂತರಿಸುವಾಗ ಕಣ್ಣೀರು ಹಾಕುತ್ತಾ, ಬಿಜೆಪಿಯ ಭದ್ರಕೋಟೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯ ತಾಣವಾಗಿರುವ ಜಮ್ಮುವಿನಲ್ಲಿ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

"ಹಣ ಹೊಂದಿಸಲು ಭಿಕ್ಷೆ ಬೇಡಿದರೂ ಪರವಾಗಿಲ್ಲ, ನಾನು ನಿಮಗೆ ಮನೆ ನಿರ್ಮಿಸಿ ಕೊಡುತ್ತೇನೆ. ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಪಿತೂರಿ ಎಂದಿಗೂ ಯಶಸ್ವಿಯಾಗುವುದಿಲ್ಲ. ನಮ್ಮ ಸಹೋದರತ್ವ ಯಾವಾಗಲೂ ಹೀಗೆಯೇ ಇರುತ್ತದೆ. ನೀವು ಒಳ್ಳೆಯ ವ್ಯಕ್ತಿ, ನಿಮ್ಮ ಮಕ್ಕಳಿಗೆ ಒಳ್ಳೆಯದಾಗಲಿ" ಎಂದು ಕುಲ್ದೀಪ್ ಶರ್ಮಾ ಅರ್ಫಾಝ್‌ ಮುಂದೆ ಹೇಳಿರುವುದು ಭವ್ಯ ಭಾರತದ ಸಾಮರಸ್ಯದ ಅಸ್ಮಿತೆಯನ್ನು ಯಾವ ದ್ವೇಷದ ಶಕ್ತಿಯಿಂದಲೂ ಹದೆಗೆಡಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಸಾರಿದೆ.

ನವೆಂಬರ್ ತಿಂಗಳ ಆರಂಭದಲ್ಲಿ ಗಡಿಯಾಚೆಗಿನ ಪ್ರಮುಖ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಬಂಧಿಸಲ್ಪಟ್ಟ ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ಜಮ್ಮು (ಪೂರ್ವ) ಉಪ ವಿಭಾಗೀಯ ಪೊಲೀಸ್ ಅಧಿಕಾರಿಗೆ ಸಂಪರ್ಕ ಇದೆ ಎಂಬ ಬಗ್ಗೆ ಅರ್ಫಾಝ್ ಅಹ್ಮದ್ ದೈಂಗ್ ನವೆಂಬರ್ 14ರಂದು ವರದಿ ಮಾಡಿದ್ದರು. ನವೆಂಬರ್ 26ರಂದು ಆ ಪೊಲೀಸ್ ಅಧಿಕಾರಿಯ ವರ್ಗಾವಣೆ ಆಗಿತ್ತು. ಈ ಬೆನ್ನಲ್ಲೇ ನವೆಂಬರ್ 27ರಂದು ಆರ್ಫಾಝ್ ಅವರ ಮನೆ ಕೆಡವಲಾಗಿದೆ.

ಆದರೆ, ಪೊಲೀಸ್ ಅಧಿಕಾರಿಯ ವಿರುದ್ದ ವರದಿ ಮಾಡಿದ್ದಕ್ಕೆ ಗುರಿಯಾಗಿಸಿ ಅರ್ಫಾಝ್ ಅವರ ಮನೆ ಕೆಡವಲಾಗಿದೆ ಎಂಬ ಆರೋಪವನ್ನು ಜಮ್ಮು ಕಾಶ್ಮೀರ ಆಡಳಿತ ನಿರಾಕರಿಸಿದ್ದು, ಅರ್ಫಾಝ್ ಅವರ ಮನೆಯನ್ನು ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿತ್ತು ಎಂದಿದೆ. ಇನ್ನು ಅರ್ಫಾಝ್ ತನ್ನ ವಿರುದ್ದ ಮಾಡಿರುವ ಆರೋಪವೂ ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸರ್ಕಾರಕ್ಕೆ ನಾಚಿಕೆಯಾಗಬೇಕು- ಕುಲ್ದೀಪ್ ಶರ್ಮಾ

ಆಡಳಿತ ಮನೆ ಕೆಡವಿದ ಬಳಿಕ ಜಮ್ಮುವಿನ ಚನ್ನಿ ಪ್ರದೇಶದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಟಾರ್ಪಲ್ ಶೆಡ್‌ನಲ್ಲಿ ಅರ್ಫಾಝ್ ಅವರ ಕುಟುಂಬ ಉಳಿದುಕೊಂಡಿದೆ. ಇದನ್ನು ಮಾಧ್ಯಮಗಳ ಮುಂದೆ ತೋರಿಸಿದ ಕುಲ್ದೀಪ್ ಶರ್ಮಾ, “ನೋಡಿ ಅವರ ಮಕ್ಕಳು ಬಯಲಿನಲ್ಲಿ ಕುಳಿತಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ದೇಶದ ನಾಗರಿಕರಾದ ನಂತರವೂ ಜನರನ್ನು ನಿರಾಶ್ರಿತರನ್ನಾಗಿ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಲ್ದೀಪ್ ಅವರ ನಿರ್ಧಾರದ ಬಗ್ಗೆ ಅವರ ಮಗಳು ತಾನಿಯಾ ಶರ್ಮಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅರ್ಫಾಝ್ ಅವರ ಸ್ಥಿತಿ ನೋಡಿ ನನಗೆ ತುಂಬಾ ದುಖಃವಾಗಿದೆ. ರಾತ್ರೋ ರಾತ್ರಿ ಒಬ್ಬರು ನಿರಾಶ್ರಿತರಾಗುವುದು ಅಂದರೆ? ಅರ್ಫಾಝ್ ನನಗೆ ಸಹೋದರನಂತೆ. ನಾನು ಮಾತ್ರವಲ್ಲ ನನ್ನ ಕುಟುಂಬ ಮತ್ತು ಇಡೀ ಸಮುದಾಯ ಅವರ ಜೊತೆಗಿದೆ" ಎಂದು ತಾನಿಯಾ ಶರ್ಮಾ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ” ರಾಜಕೀಯದ ಹೊರತಾಗಿಯೂ, ಜಮ್ಮು ಮತ್ತು ಕಾಶ್ಮೀರದ ಜನರು ಒಗ್ಗಟ್ಟಿನಿಂದ ಇರಬೇಕು” ಎಂದು ಸುದ್ದಿ ಸಂಸ್ಥೆ ದಿ ವೈರ್‌ ತಾನಿಯಾ ತಿಳಿಸಿದ್ದಾರೆ.

“ನನ್ನ ತಂದೆಯ ಬಗ್ಗೆ ನನಗೆ ಹೆಮ್ಮೆ ಇದೆ. ಹಿಂದೂ-ಮುಸ್ಲಿಂ ಐಕ್ಯತೆಯನ್ನು ಬಲಪಡಿಸಬೇಕು ಎಂಬುದಕ್ಕೆ ಅವರು ಉತ್ತಮ ಉದಾಹರಣೆ ನೀಡಿದ್ದಾರೆ” ಎಂದು ತಾನಿಯಾ ಹೇಳಿದ್ದಾರೆ.

ಕುಲ್ದೀಪ್ ಜಾಗದ ದಾಖಲೆಗಳನ್ನು ಹಸ್ತಾಂತರಿಸುವಾಗ ಅವರನ್ನು ತಬ್ಬಿಕೊಂಡ ಅರ್ಫಾಝ್ ಅವರ ತಂದೆ ಗುಲಾಮ್ ಖಾದಿರ್, ನವೆಂಬರ್ 27ರಂದು ನಮ್ಮ ಮನೆ ನೆಲಸಮವಾದ ನಂತರ ಸಾವಿರಾರು ಜನರು ನಮಗೆ ಬೆಂಬಲ, ಸಹಕಾರ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ನಮಗೆ ಯಾವುದೇ ಚಿಂತೆಯಿಲ್ಲ. ಸಾರ್ವಜನಿಕರು ನಮ್ಮ ಬೆನ್ನಿಗೆ ನಿಂತಿದ್ದಾರೆ. ಅವರು ನನ್ನ ಮಗನನ್ನು ಬೆಂಬಲಿಸಿದ್ದಾರೆ. ಇದು ನನಗೆ ಅಮೂಲ್ಯವಾದುದು. ನನಗೆ ಇನ್ನೇನು ಬೇಕು? ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೋಮು ಸಾಮರಸ್ಯ ಇನ್ನೂ ಅಸ್ತಿತ್ವದಲ್ಲಿದೆ ಎಂದು ತೋರಿಸುತ್ತವೆ. ನಾನು ನಿಜವಾಗಿಯೂ ಸಂತೋಷವಾಗಿದ್ದೇನೆ” ಎಂದು ಗುಲಾಮ್ ಖಾದಿರ್ ಹೇಳಿದ್ದಾರೆ.

ಮುಂದುವರಿದು, “ಇದು ಸತ್ಯ ಮಾತನಾಡುವ ಯುಗವಲ್ಲ. ಕೆಲವೇ ಜನರು ಸತ್ಯವನ್ನು ಬೆಂಬಲಿಸುತ್ತಾರೆ. ಅಪ್ರಾಮಾಣಿಕರು ಮತ್ತು ಭ್ರಷ್ಟರು, ಅಕ್ರಮ ವ್ಯಾಪಾರ ಮಾಡುವವರು, ಸಾವಿರಾರು ಎಕರೆ ಭೂಮಿಯನ್ನು ಅತಿಕ್ರಮಿಸಿಕೊಂಡವರು, ಯಾರೂ ಅವರನ್ನು ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದಿದ್ದಾರೆ.

ಜಮ್ಮು ಅಭಿವೃದ್ಧಿ ಪ್ರಾಧಿಕಾರ (ಜೆಡಿಎ) ನಮ್ಮ ಒಂದು ಅಂತಸ್ತಿನ ಮನೆಯನ್ನು ಮಾತ್ರ ಗುರಿಯಾಗಿಸಿ ಕೆಡವಿದೆ. ಇದನ್ನು ಸುಮಾರು 40 ವರ್ಷಗಳ ಹಿಂದೆ ಕೆಲವು ಮಾರ್ಲಾ ಭೂಮಿಯಲ್ಲಿ ನಿರ್ಮಿಸಲಾಗಿತ್ತು. ನಮಗೆ ಬೇರೆ ಯಾವುದೇ ಆಸ್ತಿ ಇರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಜೆಡಿಎ ಆಯ್ದ ಆಸ್ತಿಯನ್ನು ಗುರಿಯಾಗಿಸಿಕೊಂಡಿದೆ ಎಂಬ ಆರೋಪಗಳನ್ನು ನಿರಾಕರಿಸಿದೆ.

“ನನ್ನ ಮಗ ಭ್ರಷ್ಟನಾಗಿದ್ದರೆ, (ದುಡ್ಡು ಮಾಡುವವನು ಆಗಿದ್ದರೆ) ನಮಗೆ ಒಂದಷ್ಟು ಜಾಗವನ್ನಾದರೂ ಮಾಡುತ್ತಿದ್ದ. ಸಾರ್ವಜನಿಕ ಹಿತಕ್ಕಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಬೇಕಾಗಿದ್ದರೂ ಸಹ ಹಿಂಜರಿಯಬಾರದು ಎಂದು ನಾನು ಯಾವಾಗಲು ಅವನಿಗೆ ಸಲಹೆ ನೀಡುತ್ತಿರುತ್ತೇನೆ. ನನ್ನ ಮಗ ದೇಶದ ಸಂವಿಧಾನವನ್ನು ಎತ್ತಿ ಹಿಡಿಯಲು ತನ್ನ ಪ್ರಾಣವನ್ನು ಒತ್ತೆ ಇಟ್ಟಿದ್ದಾನೆ” ಗುಲಾಮ್ ಖಾದಿರ್ ಭಾವುಕರಾಗಿ ನುಡಿದಿದ್ದಾರೆ ಎಂದು ದಿ ವೈರ್ ವಿವರಿಸಿದೆ.

ಕುಲ್ದೀಪ್ ಶರ್ಮಾ ಅರ್ಫಾಝ್‌ಗೆ ಜಮೀನು ಕೊಟ್ಟ ವಿಷಯವನ್ನು ಮೊದಲು ವರದಿ ಮಾಡಿದ್ದು ಜಮ್ಮು ಮೂಲದ ಪತ್ರಕರ್ತೆ ರಶ್ಮಿ ಶರ್ಮಾ. ಇವರು ಅರ್ಫಾಝ್ ನಡೆಸುತ್ತಿರುವ ಹೊಸ ಡಿಜಿಟಲ್ ಮಾಧ್ಯಮ ‘ನ್ಯೂಸ್ ಸೆಹರ್ ಇಂಡಿಯಾ’ದ ವೀಕ್ಷಕಿ ಮತ್ತು ಫಾಲೋವರ್ ಕೂಡ ಹೌದು. ನ್ಯೂಸ್ ಸೆಹರ್ ಇಂಡಿಯಾ ಸಾಮಾಜಿಕ ಮಾಧ್ಯಮದಲ್ಲಿ ಸುಮಾರು ಅರ್ಧ ಮಿಲಿಯನ್ ಅನುಯಾಯಿಗಳು ಮತ್ತು ಚಂದಾದಾರರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...