Homeಮುಖಪುಟಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

- Advertisement -
- Advertisement -

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ ಕುಲ್ದೀಪ್ ಶರ್ಮಾ, ಪತ್ರಕರ್ತ ಅರ್ಫಾಝ್ ಅಹ್ಮದ್ ದೈಂಗ್ ಅವರಿಗೆ ಭೂ ದಾಖಲೆಗಳನ್ನು ಹಸ್ತಾಂತರಿಸುವಾಗ ಕಣ್ಣೀರು ಹಾಕುತ್ತಾ, ಬಿಜೆಪಿಯ ಭದ್ರಕೋಟೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಯ ತಾಣವಾಗಿರುವ ಜಮ್ಮುವಿನಲ್ಲಿ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

"ಹಣ ಹೊಂದಿಸಲು ಭಿಕ್ಷೆ ಬೇಡಿದರೂ ಪರವಾಗಿಲ್ಲ, ನಾನು ನಿಮಗೆ ಮನೆ ನಿರ್ಮಿಸಿ ಕೊಡುತ್ತೇನೆ. ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಪಿತೂರಿ ಎಂದಿಗೂ ಯಶಸ್ವಿಯಾಗುವುದಿಲ್ಲ. ನಮ್ಮ ಸಹೋದರತ್ವ ಯಾವಾಗಲೂ ಹೀಗೆಯೇ ಇರುತ್ತದೆ. ನೀವು ಒಳ್ಳೆಯ ವ್ಯಕ್ತಿ, ನಿಮ್ಮ ಮಕ್ಕಳಿಗೆ ಒಳ್ಳೆಯದಾಗಲಿ" ಎಂದು ಕುಲ್ದೀಪ್ ಶರ್ಮಾ ಅರ್ಫಾಝ್‌ ಮುಂದೆ ಹೇಳಿರುವುದು ಭವ್ಯ ಭಾರತದ ಸಾಮರಸ್ಯದ ಅಸ್ಮಿತೆಯನ್ನು ಯಾವ ದ್ವೇಷದ ಶಕ್ತಿಯಿಂದಲೂ ಹದೆಗೆಡಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಸಾರಿದೆ.

ನವೆಂಬರ್ ತಿಂಗಳ ಆರಂಭದಲ್ಲಿ ಗಡಿಯಾಚೆಗಿನ ಪ್ರಮುಖ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಬಂಧಿಸಲ್ಪಟ್ಟ ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ಜಮ್ಮು (ಪೂರ್ವ) ಉಪ ವಿಭಾಗೀಯ ಪೊಲೀಸ್ ಅಧಿಕಾರಿಗೆ ಸಂಪರ್ಕ ಇದೆ ಎಂಬ ಬಗ್ಗೆ ಅರ್ಫಾಝ್ ಅಹ್ಮದ್ ದೈಂಗ್ ನವೆಂಬರ್ 14ರಂದು ವರದಿ ಮಾಡಿದ್ದರು. ನವೆಂಬರ್ 26ರಂದು ಆ ಪೊಲೀಸ್ ಅಧಿಕಾರಿಯ ವರ್ಗಾವಣೆ ಆಗಿತ್ತು. ಈ ಬೆನ್ನಲ್ಲೇ ನವೆಂಬರ್ 27ರಂದು ಆರ್ಫಾಝ್ ಅವರ ಮನೆ ಕೆಡವಲಾಗಿದೆ.

ಆದರೆ, ಪೊಲೀಸ್ ಅಧಿಕಾರಿಯ ವಿರುದ್ದ ವರದಿ ಮಾಡಿದ್ದಕ್ಕೆ ಗುರಿಯಾಗಿಸಿ ಅರ್ಫಾಝ್ ಅವರ ಮನೆ ಕೆಡವಲಾಗಿದೆ ಎಂಬ ಆರೋಪವನ್ನು ಜಮ್ಮು ಕಾಶ್ಮೀರ ಆಡಳಿತ ನಿರಾಕರಿಸಿದ್ದು, ಅರ್ಫಾಝ್ ಅವರ ಮನೆಯನ್ನು ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿತ್ತು ಎಂದಿದೆ. ಇನ್ನು ಅರ್ಫಾಝ್ ತನ್ನ ವಿರುದ್ದ ಮಾಡಿರುವ ಆರೋಪವೂ ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸರ್ಕಾರಕ್ಕೆ ನಾಚಿಕೆಯಾಗಬೇಕು- ಕುಲ್ದೀಪ್ ಶರ್ಮಾ

ಆಡಳಿತ ಮನೆ ಕೆಡವಿದ ಬಳಿಕ ಜಮ್ಮುವಿನ ಚನ್ನಿ ಪ್ರದೇಶದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಟಾರ್ಪಲ್ ಶೆಡ್‌ನಲ್ಲಿ ಅರ್ಫಾಝ್ ಅವರ ಕುಟುಂಬ ಉಳಿದುಕೊಂಡಿದೆ. ಇದನ್ನು ಮಾಧ್ಯಮಗಳ ಮುಂದೆ ತೋರಿಸಿದ ಕುಲ್ದೀಪ್ ಶರ್ಮಾ, “ನೋಡಿ ಅವರ ಮಕ್ಕಳು ಬಯಲಿನಲ್ಲಿ ಕುಳಿತಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ದೇಶದ ನಾಗರಿಕರಾದ ನಂತರವೂ ಜನರನ್ನು ನಿರಾಶ್ರಿತರನ್ನಾಗಿ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಲ್ದೀಪ್ ಅವರ ನಿರ್ಧಾರದ ಬಗ್ಗೆ ಅವರ ಮಗಳು ತಾನಿಯಾ ಶರ್ಮಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅರ್ಫಾಝ್ ಅವರ ಸ್ಥಿತಿ ನೋಡಿ ನನಗೆ ತುಂಬಾ ದುಖಃವಾಗಿದೆ. ರಾತ್ರೋ ರಾತ್ರಿ ಒಬ್ಬರು ನಿರಾಶ್ರಿತರಾಗುವುದು ಅಂದರೆ? ಅರ್ಫಾಝ್ ನನಗೆ ಸಹೋದರನಂತೆ. ನಾನು ಮಾತ್ರವಲ್ಲ ನನ್ನ ಕುಟುಂಬ ಮತ್ತು ಇಡೀ ಸಮುದಾಯ ಅವರ ಜೊತೆಗಿದೆ" ಎಂದು ತಾನಿಯಾ ಶರ್ಮಾ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ” ರಾಜಕೀಯದ ಹೊರತಾಗಿಯೂ, ಜಮ್ಮು ಮತ್ತು ಕಾಶ್ಮೀರದ ಜನರು ಒಗ್ಗಟ್ಟಿನಿಂದ ಇರಬೇಕು” ಎಂದು ಸುದ್ದಿ ಸಂಸ್ಥೆ ದಿ ವೈರ್‌ ತಾನಿಯಾ ತಿಳಿಸಿದ್ದಾರೆ.

“ನನ್ನ ತಂದೆಯ ಬಗ್ಗೆ ನನಗೆ ಹೆಮ್ಮೆ ಇದೆ. ಹಿಂದೂ-ಮುಸ್ಲಿಂ ಐಕ್ಯತೆಯನ್ನು ಬಲಪಡಿಸಬೇಕು ಎಂಬುದಕ್ಕೆ ಅವರು ಉತ್ತಮ ಉದಾಹರಣೆ ನೀಡಿದ್ದಾರೆ” ಎಂದು ತಾನಿಯಾ ಹೇಳಿದ್ದಾರೆ.

ಕುಲ್ದೀಪ್ ಜಾಗದ ದಾಖಲೆಗಳನ್ನು ಹಸ್ತಾಂತರಿಸುವಾಗ ಅವರನ್ನು ತಬ್ಬಿಕೊಂಡ ಅರ್ಫಾಝ್ ಅವರ ತಂದೆ ಗುಲಾಮ್ ಖಾದಿರ್, ನವೆಂಬರ್ 27ರಂದು ನಮ್ಮ ಮನೆ ನೆಲಸಮವಾದ ನಂತರ ಸಾವಿರಾರು ಜನರು ನಮಗೆ ಬೆಂಬಲ, ಸಹಕಾರ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ನಮಗೆ ಯಾವುದೇ ಚಿಂತೆಯಿಲ್ಲ. ಸಾರ್ವಜನಿಕರು ನಮ್ಮ ಬೆನ್ನಿಗೆ ನಿಂತಿದ್ದಾರೆ. ಅವರು ನನ್ನ ಮಗನನ್ನು ಬೆಂಬಲಿಸಿದ್ದಾರೆ. ಇದು ನನಗೆ ಅಮೂಲ್ಯವಾದುದು. ನನಗೆ ಇನ್ನೇನು ಬೇಕು? ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೋಮು ಸಾಮರಸ್ಯ ಇನ್ನೂ ಅಸ್ತಿತ್ವದಲ್ಲಿದೆ ಎಂದು ತೋರಿಸುತ್ತವೆ. ನಾನು ನಿಜವಾಗಿಯೂ ಸಂತೋಷವಾಗಿದ್ದೇನೆ” ಎಂದು ಗುಲಾಮ್ ಖಾದಿರ್ ಹೇಳಿದ್ದಾರೆ.

ಮುಂದುವರಿದು, “ಇದು ಸತ್ಯ ಮಾತನಾಡುವ ಯುಗವಲ್ಲ. ಕೆಲವೇ ಜನರು ಸತ್ಯವನ್ನು ಬೆಂಬಲಿಸುತ್ತಾರೆ. ಅಪ್ರಾಮಾಣಿಕರು ಮತ್ತು ಭ್ರಷ್ಟರು, ಅಕ್ರಮ ವ್ಯಾಪಾರ ಮಾಡುವವರು, ಸಾವಿರಾರು ಎಕರೆ ಭೂಮಿಯನ್ನು ಅತಿಕ್ರಮಿಸಿಕೊಂಡವರು, ಯಾರೂ ಅವರನ್ನು ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ” ಎಂದಿದ್ದಾರೆ.

ಜಮ್ಮು ಅಭಿವೃದ್ಧಿ ಪ್ರಾಧಿಕಾರ (ಜೆಡಿಎ) ನಮ್ಮ ಒಂದು ಅಂತಸ್ತಿನ ಮನೆಯನ್ನು ಮಾತ್ರ ಗುರಿಯಾಗಿಸಿ ಕೆಡವಿದೆ. ಇದನ್ನು ಸುಮಾರು 40 ವರ್ಷಗಳ ಹಿಂದೆ ಕೆಲವು ಮಾರ್ಲಾ ಭೂಮಿಯಲ್ಲಿ ನಿರ್ಮಿಸಲಾಗಿತ್ತು. ನಮಗೆ ಬೇರೆ ಯಾವುದೇ ಆಸ್ತಿ ಇರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಜೆಡಿಎ ಆಯ್ದ ಆಸ್ತಿಯನ್ನು ಗುರಿಯಾಗಿಸಿಕೊಂಡಿದೆ ಎಂಬ ಆರೋಪಗಳನ್ನು ನಿರಾಕರಿಸಿದೆ.

“ನನ್ನ ಮಗ ಭ್ರಷ್ಟನಾಗಿದ್ದರೆ, (ದುಡ್ಡು ಮಾಡುವವನು ಆಗಿದ್ದರೆ) ನಮಗೆ ಒಂದಷ್ಟು ಜಾಗವನ್ನಾದರೂ ಮಾಡುತ್ತಿದ್ದ. ಸಾರ್ವಜನಿಕ ಹಿತಕ್ಕಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಬೇಕಾಗಿದ್ದರೂ ಸಹ ಹಿಂಜರಿಯಬಾರದು ಎಂದು ನಾನು ಯಾವಾಗಲು ಅವನಿಗೆ ಸಲಹೆ ನೀಡುತ್ತಿರುತ್ತೇನೆ. ನನ್ನ ಮಗ ದೇಶದ ಸಂವಿಧಾನವನ್ನು ಎತ್ತಿ ಹಿಡಿಯಲು ತನ್ನ ಪ್ರಾಣವನ್ನು ಒತ್ತೆ ಇಟ್ಟಿದ್ದಾನೆ” ಗುಲಾಮ್ ಖಾದಿರ್ ಭಾವುಕರಾಗಿ ನುಡಿದಿದ್ದಾರೆ ಎಂದು ದಿ ವೈರ್ ವಿವರಿಸಿದೆ.

ಕುಲ್ದೀಪ್ ಶರ್ಮಾ ಅರ್ಫಾಝ್‌ಗೆ ಜಮೀನು ಕೊಟ್ಟ ವಿಷಯವನ್ನು ಮೊದಲು ವರದಿ ಮಾಡಿದ್ದು ಜಮ್ಮು ಮೂಲದ ಪತ್ರಕರ್ತೆ ರಶ್ಮಿ ಶರ್ಮಾ. ಇವರು ಅರ್ಫಾಝ್ ನಡೆಸುತ್ತಿರುವ ಹೊಸ ಡಿಜಿಟಲ್ ಮಾಧ್ಯಮ ‘ನ್ಯೂಸ್ ಸೆಹರ್ ಇಂಡಿಯಾ’ದ ವೀಕ್ಷಕಿ ಮತ್ತು ಫಾಲೋವರ್ ಕೂಡ ಹೌದು. ನ್ಯೂಸ್ ಸೆಹರ್ ಇಂಡಿಯಾ ಸಾಮಾಜಿಕ ಮಾಧ್ಯಮದಲ್ಲಿ ಸುಮಾರು ಅರ್ಧ ಮಿಲಿಯನ್ ಅನುಯಾಯಿಗಳು ಮತ್ತು ಚಂದಾದಾರರನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...