Homeಮುಖಪುಟದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ...

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ ಪತ್ನಿ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು ಹೇಳಿರುವ ಅವರ ಸಂದೇಶವನ್ನು ಜನರಿಗೆ ನೆನಪಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ಯಾರು?

ಅಡ್ಮಿರಲ್ ರಾಮದಾಸ್ ಅವರು ಸೆಪ್ಟೆಂಬರ್ 5, 1933ರಂದು ಬಾಂಬೆಯ ಮಾಟುಂಗಾದಲ್ಲಿ ಜನಿಸಿದರು. ಅವರ ಆರಂಭಿಕ ಶಿಕ್ಷಣ ದೆಹಲಿಯಲ್ಲಿ ಪ್ರೆಸೆಂಟೇಶನ್ ಕಾನ್ವೆಂಟ್ ಮತ್ತು ರಾಮ್ಜಾಸ್ ಕಾಲೇಜಿನಲ್ಲಿ ನಡೆದಿತ್ತು. ಅವರು 1949ರಲ್ಲಿ ಕ್ಲೆಮೆಂಟ್ ಟೌನ್ ಡೆಹ್ರಾಡೂನ್‌ನಲ್ಲಿರುವ ಆರ್ಮ್ಡ್ ಫೋರ್ಸಸ್ ಅಕಾಡೆಮಿಯ ಜಂಟಿ ಸೇವೆಗಳ ವಿಭಾಗಕ್ಕೆ ಸೇರಿದ್ದಾರೆ, ಸೆಪ್ಟೆಂಬರ್ 1953ರಲ್ಲಿ ಭಾರತೀಯ ನೌಕಾಪಡೆಗೆ ನೇಮಕಗೊಂಡಿದ್ದರು. ಇವರು ಕೊಚ್ಚಿಯಲ್ಲಿ ನೌಕಾ ಅಕಾಡೆಮಿಯನ್ನು ಸ್ಥಾಪಿಸಿದ್ದರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪ್ರಮುಖ ಪಾತ್ರ ವಹಿಸಿದ INS ಬಿಯಾಸ್‌ಗೆ ಕಮಾಂಡಿಂಗ್ ಆಗಿದ್ದರು. ಪಶ್ಚಿಮ ಜರ್ಮನಿಯ ಬಾನ್‌ನಲ್ಲಿ ಭಾರತೀಯ ನೌಕಾಪಡೆಯ ಪ್ರಮುಖ ಅಧಿಕಾರಿಯಾಗಿ ಆಗಿ ಸೇವೆ ಸಲ್ಲಿಸಿದ್ದರು. ಪೂರ್ವ ನೌಕಾ ಕಮಾಂಡ್‌ನ ಫ್ಲೀಟ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ ಮತ್ತು ದಕ್ಷಿಣ ಮತ್ತು ಪೂರ್ವ ನೌಕಾ ಕಮಾಂಡ್‌ಗಳೆರಡಕ್ಕೂ ಕಮಾಂಡರ್ ಆಗಿದ್ದರು. ಅವರು 13ನೇ ಚೀಫ್ ಆಫ್ ನೇವಲ್ ಸ್ಟಾಫ್ (CNS) ಆಗಿ 30ನೇ ನವೆಂಬರ್ 1990 ರಂದು ಅಧಿಕಾರ ವಹಿಸಿಕೊಂಡಿದ್ದರು. ಅವರು 1993ರಲ್ಲಿ ಭಾರತೀಯ ನೌಕಾಪಡೆಯಿಂದ ನಿವೃತ್ತರಾಗಿದ್ದರು.

ನಿವೃತ್ತಿಯ ನಂತರ, ಅಡ್ಮಿರಲ್ ರಾಮದಾಸ್ ಅವರು ಮಹಾರಾಷ್ಟ್ರದ ಅಲಿಬಾಗ್‌ನ ಭೈಮಾಲಾ ಗ್ರಾಮದಲ್ಲಿ ವಾಸಿಸುತ್ತಿದ್ದರು. 1971ರ ಯುದ್ಧ ಕಾರ್ಯಾಚರಣೆಗಳಲ್ಲಿ ಅವರ ಶೌರ್ಯ ಕೃತ್ಯಗಳನ್ನು ಗುರುತಿಸಿ ಮಹಾರಾಷ್ಟ್ರ ಸರ್ಕಾರವು ಅವರಿಗೆ ನೀಡಿದ ಭೂಮಿಯಲ್ಲಿ ನೆಲೆಸಿದ್ದರು. ಅಲ್ಲಿ ಅವರು ಮತ್ತು ಅವರ ಪತ್ನಿ ಲಲಿತಾ ರಾಮದಾಸ್ ಅವರು ವೈವಿಧ್ಯಮಯ ಕೃಷಿ ಕಾರ್ಯವನ್ನು ಮಾಡಿದ್ದರು. ಸಾವಯವ ಕೃಷಿಯ ಜೊತೆ  ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇವುಗಳಲ್ಲಿ ಪಾಕಿಸ್ತಾನ ಇಂಡಿಯಾ ಪೀಪಲ್ಸ್ ಫೋರಮ್ ಫಾರ್ ಪೀಸ್ ಅಂಡ್ ಡೆಮಾಕ್ರಸಿ (ಪಿಐಪಿಪಿಎಫ್‌ಡಿ), ಇಂಡೋ-ಪಾಕಿಸ್ತಾನ್ ಸೋಲ್ಜರ್ಸ್ ಇನಿಶಿಯೇಟಿವ್ ಫಾರ್ ಪೀಸ್ (ಐಪಿಎಸ್‌ಐ),  ಪರಮಾಣು ನಿಶ್ಯಸ್ತ್ರೀಕರಣ ಮತ್ತು ಶಾಂತಿಗಾಗಿ ಒಕ್ಕೂಟದ ಜೊತೆಗೆ ತೊಡಗಿಸಿಕೊಂಡರು, ಅವರ ಹೋರಾಟವನ್ನು ಬೆಂಬಲಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 22 ಗಾಂವ್ ಬಚಾವೋ ಆಂದೋಲನ ಅಡಿಯಲ್ಲಿ SEZ ವಿರುದ್ಧ ಹೋರಾಟ, ಲಿಂಗ ಸಮಾನತೆ, ಮೀನುಗಾರರ ಹಕ್ಕುಗಳು, ರೈತರ ಹಕ್ಕುಗಳು, ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳು ಸೇರಿದಂತೆ ವಿವಿಧ ಹೋರಾಟಗಳಲ್ಲಿ ಇವರು ಮುಂಚೂಣಿಯಲ್ಲಿದ್ದರು.

ಸಂದೇಶದಲ್ಲೇನಿದೆ?

ನಮಸ್ಕಾರ, ನನ್ನ ಹೆಸರು ಲಲಿತಾ ರಾಮದಾಸ್‌, ನನ್ನ ಪತಿ ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್, ಅವರು 90ನೇ ವರ್ಷದಲ್ಲಿ ಸಿಕಂದರಾಬಾದ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾನು ಅವರ ಧ್ವನಿಯನ್ನು ಕೇಳುತ್ತಿದ್ದೇನೆ. ದೇಶ, ಪ್ರೀತಿಯ ಜನರು, 45 ವರ್ಷಗಳ ಕಾಲ ಅವರು ಕೆಲಸ ಮಾಡಿದ ಭಾರತೀಯ ನೌಕಾಪಡೆ ಮತ್ತು ಸಂವಿಧಾನದ ಬಗ್ಗೆ ಅವರ ಕಾಳಜಿಯನ್ನು ನೆನಪಿಸಿಕೊಳ್ಳುತ್ತೇನೆ. ಅವರ ನಿವೃತ್ತಿ ಬಳಿಕ ನಾವು ರಾಯಗಢ ಜಿಲ್ಲೆಯ ಅಲಿಬಾಗ್‌ನ ಭೈಮಾಲಾ ಹಳ್ಳಿಯಲ್ಲಿ ವಾಸಿಸುತ್ತಿದ್ದೆವು. ಅವರು ಜಮಮೀನಿನಲ್ಲಿ ಕೆಲಸ ಮಾಡಿದರು, ಜಮೀನು, ಕೃಷಿ, ಕಾಡುಗಳ ಬಗ್ಗೆ ಜನರಿಂದ ತಿಳಿದರು. ಗಾಂವ್ ಬಚಾವೋ ಆಂದೋಲನದ ಅಡಿಯಲ್ಲಿ ವಿಶೇಷ ಆರ್ಥಿಕ ವಲಯದ (SEZ) ಬಗ್ಗೆ  ಹೋರಾಟವನ್ನು ಮಾಡಿದರು. ಅವರು ಆಂದೋಲನದ ನೇತೃತ್ವ ವಹಿಸಿದ್ದರು. 4 ವರ್ಷಗಳ ಕಾಲ ಅವರು  ಹೋರಾಟವನ್ನು ನಡೆಸಿದ್ದರು.

ಅಡ್ಮಿರಲ್ ರಾಮ್‌ದಾಸ್ ಅವರು ಸಂವಿಧಾನದ ಪ್ರಬಲ ಪ್ರತಿಪಾದಕರಾಗಿದ್ದು, 16ನೇ ವರ್ಷಕ್ಕೆ ನೌಕಾಪಡೆಗೆ ಸೇರ್ಪಡೆಯಾಗಿದ್ದರು. 16ರಿಂದ 90ರವರೆಗೆ ನಾಗರಿಕನಾಗಿ ಅವರು ಅವರು ಕೊನೆಯ ದಿನಗಳಲ್ಲಿ ಸಮಾನತೆ ಭ್ರಾತೃತ್ವ, ಸ್ವಾತಂತ್ರ್ಯ, ನ್ಯಾಯವನ್ನು ಗೌರವಿಸದ ಶಕ್ತಿಗಳಿಂದ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಅವರು ಕಳವಳವನ್ನು ವ್ಯಕ್ತಪಡಿಸಿದ್ದರು. ಅನಾರೋಗ್ಯದ ದಿನಗಳಲ್ಲೂ ಅವರು 2024ರ ಗಣರಾಜ್ಯೋತ್ಸವದ ದಿನದಂದು ಸಾರ್ವಜನಿಕ ಸ್ಥಳದಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ಏ.14ರಂದು ಅಂಬೇಡ್ಕರ್‌ ಜಯಂತಿಯನ್ನು ಆಚರಿಸುತ್ತೇವೆ. ಮುಂದಿನ ವಾರ ದೇಶದಲ್ಲಿ ಮತದಾನ ನಡೆಯಲಿದೆ. ಜನರು ದೇಶದಾದ್ಯಂತ ಮತದಾನ ಮಾಡಲಿದ್ದಾರೆ. ನಾನು ಅಲಿಬಾಗ್‌ಗೆ ಮತದಾನಕ್ಕೆ ಹೋಗುತ್ತಾನೆ. ನಾನು ಪತಿಯ ಜೊತೆ ಮತದಾನಕ್ಕೆ ಆಟೋ ರಿಕ್ಷಾದಲ್ಲಿ ಹೋದ ದಿನಗಳನ್ನು ನೆನಪಿಸುತ್ತೇನೆ, ಅವರು ತನ್ನ ಕೊನೆಯ ದಿನಗಳಲ್ಲಿ ನಾವು ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು, ನಿರ್ಭೀತಿಯಿಂದ ಮತ ಚಲಾಯಿಸುವ ಮೂಲಕ, ಪ್ರಜಾಪ್ರಭುತ್ವಕ್ಕಾಗಿ, ಜಾತ್ಯತೀತತೆಗಾಗಿ, ಪ್ರೀತಿ ಮತ್ತು ಶಾಂತಿಗಾಗಿ ವಿಭಜನೀಯ, ಸರ್ವಾಧಿಕಾರಿ ಶಕ್ತಿಗಳನ್ನು ಸೋಲಿಸಬೇಕು ಎಂದು ಹೇಳಿದ್ದಾರೆ ಎಂಬ ಉಲ್ಲೇಖವಿರುವ ಸಂದೇಶವನ್ನು ಓದಿದ್ದಾರೆ.

ಇದನ್ನು ಓದಿ: ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...