Homeಮುಖಪುಟದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ...

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ ಪತ್ನಿ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು ಹೇಳಿರುವ ಅವರ ಸಂದೇಶವನ್ನು ಜನರಿಗೆ ನೆನಪಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ಯಾರು?

ಅಡ್ಮಿರಲ್ ರಾಮದಾಸ್ ಅವರು ಸೆಪ್ಟೆಂಬರ್ 5, 1933ರಂದು ಬಾಂಬೆಯ ಮಾಟುಂಗಾದಲ್ಲಿ ಜನಿಸಿದರು. ಅವರ ಆರಂಭಿಕ ಶಿಕ್ಷಣ ದೆಹಲಿಯಲ್ಲಿ ಪ್ರೆಸೆಂಟೇಶನ್ ಕಾನ್ವೆಂಟ್ ಮತ್ತು ರಾಮ್ಜಾಸ್ ಕಾಲೇಜಿನಲ್ಲಿ ನಡೆದಿತ್ತು. ಅವರು 1949ರಲ್ಲಿ ಕ್ಲೆಮೆಂಟ್ ಟೌನ್ ಡೆಹ್ರಾಡೂನ್‌ನಲ್ಲಿರುವ ಆರ್ಮ್ಡ್ ಫೋರ್ಸಸ್ ಅಕಾಡೆಮಿಯ ಜಂಟಿ ಸೇವೆಗಳ ವಿಭಾಗಕ್ಕೆ ಸೇರಿದ್ದಾರೆ, ಸೆಪ್ಟೆಂಬರ್ 1953ರಲ್ಲಿ ಭಾರತೀಯ ನೌಕಾಪಡೆಗೆ ನೇಮಕಗೊಂಡಿದ್ದರು. ಇವರು ಕೊಚ್ಚಿಯಲ್ಲಿ ನೌಕಾ ಅಕಾಡೆಮಿಯನ್ನು ಸ್ಥಾಪಿಸಿದ್ದರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪ್ರಮುಖ ಪಾತ್ರ ವಹಿಸಿದ INS ಬಿಯಾಸ್‌ಗೆ ಕಮಾಂಡಿಂಗ್ ಆಗಿದ್ದರು. ಪಶ್ಚಿಮ ಜರ್ಮನಿಯ ಬಾನ್‌ನಲ್ಲಿ ಭಾರತೀಯ ನೌಕಾಪಡೆಯ ಪ್ರಮುಖ ಅಧಿಕಾರಿಯಾಗಿ ಆಗಿ ಸೇವೆ ಸಲ್ಲಿಸಿದ್ದರು. ಪೂರ್ವ ನೌಕಾ ಕಮಾಂಡ್‌ನ ಫ್ಲೀಟ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ ಮತ್ತು ದಕ್ಷಿಣ ಮತ್ತು ಪೂರ್ವ ನೌಕಾ ಕಮಾಂಡ್‌ಗಳೆರಡಕ್ಕೂ ಕಮಾಂಡರ್ ಆಗಿದ್ದರು. ಅವರು 13ನೇ ಚೀಫ್ ಆಫ್ ನೇವಲ್ ಸ್ಟಾಫ್ (CNS) ಆಗಿ 30ನೇ ನವೆಂಬರ್ 1990 ರಂದು ಅಧಿಕಾರ ವಹಿಸಿಕೊಂಡಿದ್ದರು. ಅವರು 1993ರಲ್ಲಿ ಭಾರತೀಯ ನೌಕಾಪಡೆಯಿಂದ ನಿವೃತ್ತರಾಗಿದ್ದರು.

ನಿವೃತ್ತಿಯ ನಂತರ, ಅಡ್ಮಿರಲ್ ರಾಮದಾಸ್ ಅವರು ಮಹಾರಾಷ್ಟ್ರದ ಅಲಿಬಾಗ್‌ನ ಭೈಮಾಲಾ ಗ್ರಾಮದಲ್ಲಿ ವಾಸಿಸುತ್ತಿದ್ದರು. 1971ರ ಯುದ್ಧ ಕಾರ್ಯಾಚರಣೆಗಳಲ್ಲಿ ಅವರ ಶೌರ್ಯ ಕೃತ್ಯಗಳನ್ನು ಗುರುತಿಸಿ ಮಹಾರಾಷ್ಟ್ರ ಸರ್ಕಾರವು ಅವರಿಗೆ ನೀಡಿದ ಭೂಮಿಯಲ್ಲಿ ನೆಲೆಸಿದ್ದರು. ಅಲ್ಲಿ ಅವರು ಮತ್ತು ಅವರ ಪತ್ನಿ ಲಲಿತಾ ರಾಮದಾಸ್ ಅವರು ವೈವಿಧ್ಯಮಯ ಕೃಷಿ ಕಾರ್ಯವನ್ನು ಮಾಡಿದ್ದರು. ಸಾವಯವ ಕೃಷಿಯ ಜೊತೆ  ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇವುಗಳಲ್ಲಿ ಪಾಕಿಸ್ತಾನ ಇಂಡಿಯಾ ಪೀಪಲ್ಸ್ ಫೋರಮ್ ಫಾರ್ ಪೀಸ್ ಅಂಡ್ ಡೆಮಾಕ್ರಸಿ (ಪಿಐಪಿಪಿಎಫ್‌ಡಿ), ಇಂಡೋ-ಪಾಕಿಸ್ತಾನ್ ಸೋಲ್ಜರ್ಸ್ ಇನಿಶಿಯೇಟಿವ್ ಫಾರ್ ಪೀಸ್ (ಐಪಿಎಸ್‌ಐ),  ಪರಮಾಣು ನಿಶ್ಯಸ್ತ್ರೀಕರಣ ಮತ್ತು ಶಾಂತಿಗಾಗಿ ಒಕ್ಕೂಟದ ಜೊತೆಗೆ ತೊಡಗಿಸಿಕೊಂಡರು, ಅವರ ಹೋರಾಟವನ್ನು ಬೆಂಬಲಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 22 ಗಾಂವ್ ಬಚಾವೋ ಆಂದೋಲನ ಅಡಿಯಲ್ಲಿ SEZ ವಿರುದ್ಧ ಹೋರಾಟ, ಲಿಂಗ ಸಮಾನತೆ, ಮೀನುಗಾರರ ಹಕ್ಕುಗಳು, ರೈತರ ಹಕ್ಕುಗಳು, ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳು ಸೇರಿದಂತೆ ವಿವಿಧ ಹೋರಾಟಗಳಲ್ಲಿ ಇವರು ಮುಂಚೂಣಿಯಲ್ಲಿದ್ದರು.

ಸಂದೇಶದಲ್ಲೇನಿದೆ?

ನಮಸ್ಕಾರ, ನನ್ನ ಹೆಸರು ಲಲಿತಾ ರಾಮದಾಸ್‌, ನನ್ನ ಪತಿ ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್, ಅವರು 90ನೇ ವರ್ಷದಲ್ಲಿ ಸಿಕಂದರಾಬಾದ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾನು ಅವರ ಧ್ವನಿಯನ್ನು ಕೇಳುತ್ತಿದ್ದೇನೆ. ದೇಶ, ಪ್ರೀತಿಯ ಜನರು, 45 ವರ್ಷಗಳ ಕಾಲ ಅವರು ಕೆಲಸ ಮಾಡಿದ ಭಾರತೀಯ ನೌಕಾಪಡೆ ಮತ್ತು ಸಂವಿಧಾನದ ಬಗ್ಗೆ ಅವರ ಕಾಳಜಿಯನ್ನು ನೆನಪಿಸಿಕೊಳ್ಳುತ್ತೇನೆ. ಅವರ ನಿವೃತ್ತಿ ಬಳಿಕ ನಾವು ರಾಯಗಢ ಜಿಲ್ಲೆಯ ಅಲಿಬಾಗ್‌ನ ಭೈಮಾಲಾ ಹಳ್ಳಿಯಲ್ಲಿ ವಾಸಿಸುತ್ತಿದ್ದೆವು. ಅವರು ಜಮಮೀನಿನಲ್ಲಿ ಕೆಲಸ ಮಾಡಿದರು, ಜಮೀನು, ಕೃಷಿ, ಕಾಡುಗಳ ಬಗ್ಗೆ ಜನರಿಂದ ತಿಳಿದರು. ಗಾಂವ್ ಬಚಾವೋ ಆಂದೋಲನದ ಅಡಿಯಲ್ಲಿ ವಿಶೇಷ ಆರ್ಥಿಕ ವಲಯದ (SEZ) ಬಗ್ಗೆ  ಹೋರಾಟವನ್ನು ಮಾಡಿದರು. ಅವರು ಆಂದೋಲನದ ನೇತೃತ್ವ ವಹಿಸಿದ್ದರು. 4 ವರ್ಷಗಳ ಕಾಲ ಅವರು  ಹೋರಾಟವನ್ನು ನಡೆಸಿದ್ದರು.

ಅಡ್ಮಿರಲ್ ರಾಮ್‌ದಾಸ್ ಅವರು ಸಂವಿಧಾನದ ಪ್ರಬಲ ಪ್ರತಿಪಾದಕರಾಗಿದ್ದು, 16ನೇ ವರ್ಷಕ್ಕೆ ನೌಕಾಪಡೆಗೆ ಸೇರ್ಪಡೆಯಾಗಿದ್ದರು. 16ರಿಂದ 90ರವರೆಗೆ ನಾಗರಿಕನಾಗಿ ಅವರು ಅವರು ಕೊನೆಯ ದಿನಗಳಲ್ಲಿ ಸಮಾನತೆ ಭ್ರಾತೃತ್ವ, ಸ್ವಾತಂತ್ರ್ಯ, ನ್ಯಾಯವನ್ನು ಗೌರವಿಸದ ಶಕ್ತಿಗಳಿಂದ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಅವರು ಕಳವಳವನ್ನು ವ್ಯಕ್ತಪಡಿಸಿದ್ದರು. ಅನಾರೋಗ್ಯದ ದಿನಗಳಲ್ಲೂ ಅವರು 2024ರ ಗಣರಾಜ್ಯೋತ್ಸವದ ದಿನದಂದು ಸಾರ್ವಜನಿಕ ಸ್ಥಳದಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ಏ.14ರಂದು ಅಂಬೇಡ್ಕರ್‌ ಜಯಂತಿಯನ್ನು ಆಚರಿಸುತ್ತೇವೆ. ಮುಂದಿನ ವಾರ ದೇಶದಲ್ಲಿ ಮತದಾನ ನಡೆಯಲಿದೆ. ಜನರು ದೇಶದಾದ್ಯಂತ ಮತದಾನ ಮಾಡಲಿದ್ದಾರೆ. ನಾನು ಅಲಿಬಾಗ್‌ಗೆ ಮತದಾನಕ್ಕೆ ಹೋಗುತ್ತಾನೆ. ನಾನು ಪತಿಯ ಜೊತೆ ಮತದಾನಕ್ಕೆ ಆಟೋ ರಿಕ್ಷಾದಲ್ಲಿ ಹೋದ ದಿನಗಳನ್ನು ನೆನಪಿಸುತ್ತೇನೆ, ಅವರು ತನ್ನ ಕೊನೆಯ ದಿನಗಳಲ್ಲಿ ನಾವು ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು, ನಿರ್ಭೀತಿಯಿಂದ ಮತ ಚಲಾಯಿಸುವ ಮೂಲಕ, ಪ್ರಜಾಪ್ರಭುತ್ವಕ್ಕಾಗಿ, ಜಾತ್ಯತೀತತೆಗಾಗಿ, ಪ್ರೀತಿ ಮತ್ತು ಶಾಂತಿಗಾಗಿ ವಿಭಜನೀಯ, ಸರ್ವಾಧಿಕಾರಿ ಶಕ್ತಿಗಳನ್ನು ಸೋಲಿಸಬೇಕು ಎಂದು ಹೇಳಿದ್ದಾರೆ ಎಂಬ ಉಲ್ಲೇಖವಿರುವ ಸಂದೇಶವನ್ನು ಓದಿದ್ದಾರೆ.

ಇದನ್ನು ಓದಿ: ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...