Homeಮುಖಪುಟದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ...

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ ಪತ್ನಿ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು ಹೇಳಿರುವ ಅವರ ಸಂದೇಶವನ್ನು ಜನರಿಗೆ ನೆನಪಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ಯಾರು?

ಅಡ್ಮಿರಲ್ ರಾಮದಾಸ್ ಅವರು ಸೆಪ್ಟೆಂಬರ್ 5, 1933ರಂದು ಬಾಂಬೆಯ ಮಾಟುಂಗಾದಲ್ಲಿ ಜನಿಸಿದರು. ಅವರ ಆರಂಭಿಕ ಶಿಕ್ಷಣ ದೆಹಲಿಯಲ್ಲಿ ಪ್ರೆಸೆಂಟೇಶನ್ ಕಾನ್ವೆಂಟ್ ಮತ್ತು ರಾಮ್ಜಾಸ್ ಕಾಲೇಜಿನಲ್ಲಿ ನಡೆದಿತ್ತು. ಅವರು 1949ರಲ್ಲಿ ಕ್ಲೆಮೆಂಟ್ ಟೌನ್ ಡೆಹ್ರಾಡೂನ್‌ನಲ್ಲಿರುವ ಆರ್ಮ್ಡ್ ಫೋರ್ಸಸ್ ಅಕಾಡೆಮಿಯ ಜಂಟಿ ಸೇವೆಗಳ ವಿಭಾಗಕ್ಕೆ ಸೇರಿದ್ದಾರೆ, ಸೆಪ್ಟೆಂಬರ್ 1953ರಲ್ಲಿ ಭಾರತೀಯ ನೌಕಾಪಡೆಗೆ ನೇಮಕಗೊಂಡಿದ್ದರು. ಇವರು ಕೊಚ್ಚಿಯಲ್ಲಿ ನೌಕಾ ಅಕಾಡೆಮಿಯನ್ನು ಸ್ಥಾಪಿಸಿದ್ದರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪ್ರಮುಖ ಪಾತ್ರ ವಹಿಸಿದ INS ಬಿಯಾಸ್‌ಗೆ ಕಮಾಂಡಿಂಗ್ ಆಗಿದ್ದರು. ಪಶ್ಚಿಮ ಜರ್ಮನಿಯ ಬಾನ್‌ನಲ್ಲಿ ಭಾರತೀಯ ನೌಕಾಪಡೆಯ ಪ್ರಮುಖ ಅಧಿಕಾರಿಯಾಗಿ ಆಗಿ ಸೇವೆ ಸಲ್ಲಿಸಿದ್ದರು. ಪೂರ್ವ ನೌಕಾ ಕಮಾಂಡ್‌ನ ಫ್ಲೀಟ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ ಮತ್ತು ದಕ್ಷಿಣ ಮತ್ತು ಪೂರ್ವ ನೌಕಾ ಕಮಾಂಡ್‌ಗಳೆರಡಕ್ಕೂ ಕಮಾಂಡರ್ ಆಗಿದ್ದರು. ಅವರು 13ನೇ ಚೀಫ್ ಆಫ್ ನೇವಲ್ ಸ್ಟಾಫ್ (CNS) ಆಗಿ 30ನೇ ನವೆಂಬರ್ 1990 ರಂದು ಅಧಿಕಾರ ವಹಿಸಿಕೊಂಡಿದ್ದರು. ಅವರು 1993ರಲ್ಲಿ ಭಾರತೀಯ ನೌಕಾಪಡೆಯಿಂದ ನಿವೃತ್ತರಾಗಿದ್ದರು.

ನಿವೃತ್ತಿಯ ನಂತರ, ಅಡ್ಮಿರಲ್ ರಾಮದಾಸ್ ಅವರು ಮಹಾರಾಷ್ಟ್ರದ ಅಲಿಬಾಗ್‌ನ ಭೈಮಾಲಾ ಗ್ರಾಮದಲ್ಲಿ ವಾಸಿಸುತ್ತಿದ್ದರು. 1971ರ ಯುದ್ಧ ಕಾರ್ಯಾಚರಣೆಗಳಲ್ಲಿ ಅವರ ಶೌರ್ಯ ಕೃತ್ಯಗಳನ್ನು ಗುರುತಿಸಿ ಮಹಾರಾಷ್ಟ್ರ ಸರ್ಕಾರವು ಅವರಿಗೆ ನೀಡಿದ ಭೂಮಿಯಲ್ಲಿ ನೆಲೆಸಿದ್ದರು. ಅಲ್ಲಿ ಅವರು ಮತ್ತು ಅವರ ಪತ್ನಿ ಲಲಿತಾ ರಾಮದಾಸ್ ಅವರು ವೈವಿಧ್ಯಮಯ ಕೃಷಿ ಕಾರ್ಯವನ್ನು ಮಾಡಿದ್ದರು. ಸಾವಯವ ಕೃಷಿಯ ಜೊತೆ  ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇವುಗಳಲ್ಲಿ ಪಾಕಿಸ್ತಾನ ಇಂಡಿಯಾ ಪೀಪಲ್ಸ್ ಫೋರಮ್ ಫಾರ್ ಪೀಸ್ ಅಂಡ್ ಡೆಮಾಕ್ರಸಿ (ಪಿಐಪಿಪಿಎಫ್‌ಡಿ), ಇಂಡೋ-ಪಾಕಿಸ್ತಾನ್ ಸೋಲ್ಜರ್ಸ್ ಇನಿಶಿಯೇಟಿವ್ ಫಾರ್ ಪೀಸ್ (ಐಪಿಎಸ್‌ಐ),  ಪರಮಾಣು ನಿಶ್ಯಸ್ತ್ರೀಕರಣ ಮತ್ತು ಶಾಂತಿಗಾಗಿ ಒಕ್ಕೂಟದ ಜೊತೆಗೆ ತೊಡಗಿಸಿಕೊಂಡರು, ಅವರ ಹೋರಾಟವನ್ನು ಬೆಂಬಲಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 22 ಗಾಂವ್ ಬಚಾವೋ ಆಂದೋಲನ ಅಡಿಯಲ್ಲಿ SEZ ವಿರುದ್ಧ ಹೋರಾಟ, ಲಿಂಗ ಸಮಾನತೆ, ಮೀನುಗಾರರ ಹಕ್ಕುಗಳು, ರೈತರ ಹಕ್ಕುಗಳು, ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳು ಸೇರಿದಂತೆ ವಿವಿಧ ಹೋರಾಟಗಳಲ್ಲಿ ಇವರು ಮುಂಚೂಣಿಯಲ್ಲಿದ್ದರು.

ಸಂದೇಶದಲ್ಲೇನಿದೆ?

ನಮಸ್ಕಾರ, ನನ್ನ ಹೆಸರು ಲಲಿತಾ ರಾಮದಾಸ್‌, ನನ್ನ ಪತಿ ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್, ಅವರು 90ನೇ ವರ್ಷದಲ್ಲಿ ಸಿಕಂದರಾಬಾದ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾನು ಅವರ ಧ್ವನಿಯನ್ನು ಕೇಳುತ್ತಿದ್ದೇನೆ. ದೇಶ, ಪ್ರೀತಿಯ ಜನರು, 45 ವರ್ಷಗಳ ಕಾಲ ಅವರು ಕೆಲಸ ಮಾಡಿದ ಭಾರತೀಯ ನೌಕಾಪಡೆ ಮತ್ತು ಸಂವಿಧಾನದ ಬಗ್ಗೆ ಅವರ ಕಾಳಜಿಯನ್ನು ನೆನಪಿಸಿಕೊಳ್ಳುತ್ತೇನೆ. ಅವರ ನಿವೃತ್ತಿ ಬಳಿಕ ನಾವು ರಾಯಗಢ ಜಿಲ್ಲೆಯ ಅಲಿಬಾಗ್‌ನ ಭೈಮಾಲಾ ಹಳ್ಳಿಯಲ್ಲಿ ವಾಸಿಸುತ್ತಿದ್ದೆವು. ಅವರು ಜಮಮೀನಿನಲ್ಲಿ ಕೆಲಸ ಮಾಡಿದರು, ಜಮೀನು, ಕೃಷಿ, ಕಾಡುಗಳ ಬಗ್ಗೆ ಜನರಿಂದ ತಿಳಿದರು. ಗಾಂವ್ ಬಚಾವೋ ಆಂದೋಲನದ ಅಡಿಯಲ್ಲಿ ವಿಶೇಷ ಆರ್ಥಿಕ ವಲಯದ (SEZ) ಬಗ್ಗೆ  ಹೋರಾಟವನ್ನು ಮಾಡಿದರು. ಅವರು ಆಂದೋಲನದ ನೇತೃತ್ವ ವಹಿಸಿದ್ದರು. 4 ವರ್ಷಗಳ ಕಾಲ ಅವರು  ಹೋರಾಟವನ್ನು ನಡೆಸಿದ್ದರು.

ಅಡ್ಮಿರಲ್ ರಾಮ್‌ದಾಸ್ ಅವರು ಸಂವಿಧಾನದ ಪ್ರಬಲ ಪ್ರತಿಪಾದಕರಾಗಿದ್ದು, 16ನೇ ವರ್ಷಕ್ಕೆ ನೌಕಾಪಡೆಗೆ ಸೇರ್ಪಡೆಯಾಗಿದ್ದರು. 16ರಿಂದ 90ರವರೆಗೆ ನಾಗರಿಕನಾಗಿ ಅವರು ಅವರು ಕೊನೆಯ ದಿನಗಳಲ್ಲಿ ಸಮಾನತೆ ಭ್ರಾತೃತ್ವ, ಸ್ವಾತಂತ್ರ್ಯ, ನ್ಯಾಯವನ್ನು ಗೌರವಿಸದ ಶಕ್ತಿಗಳಿಂದ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಅವರು ಕಳವಳವನ್ನು ವ್ಯಕ್ತಪಡಿಸಿದ್ದರು. ಅನಾರೋಗ್ಯದ ದಿನಗಳಲ್ಲೂ ಅವರು 2024ರ ಗಣರಾಜ್ಯೋತ್ಸವದ ದಿನದಂದು ಸಾರ್ವಜನಿಕ ಸ್ಥಳದಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ಏ.14ರಂದು ಅಂಬೇಡ್ಕರ್‌ ಜಯಂತಿಯನ್ನು ಆಚರಿಸುತ್ತೇವೆ. ಮುಂದಿನ ವಾರ ದೇಶದಲ್ಲಿ ಮತದಾನ ನಡೆಯಲಿದೆ. ಜನರು ದೇಶದಾದ್ಯಂತ ಮತದಾನ ಮಾಡಲಿದ್ದಾರೆ. ನಾನು ಅಲಿಬಾಗ್‌ಗೆ ಮತದಾನಕ್ಕೆ ಹೋಗುತ್ತಾನೆ. ನಾನು ಪತಿಯ ಜೊತೆ ಮತದಾನಕ್ಕೆ ಆಟೋ ರಿಕ್ಷಾದಲ್ಲಿ ಹೋದ ದಿನಗಳನ್ನು ನೆನಪಿಸುತ್ತೇನೆ, ಅವರು ತನ್ನ ಕೊನೆಯ ದಿನಗಳಲ್ಲಿ ನಾವು ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು, ನಿರ್ಭೀತಿಯಿಂದ ಮತ ಚಲಾಯಿಸುವ ಮೂಲಕ, ಪ್ರಜಾಪ್ರಭುತ್ವಕ್ಕಾಗಿ, ಜಾತ್ಯತೀತತೆಗಾಗಿ, ಪ್ರೀತಿ ಮತ್ತು ಶಾಂತಿಗಾಗಿ ವಿಭಜನೀಯ, ಸರ್ವಾಧಿಕಾರಿ ಶಕ್ತಿಗಳನ್ನು ಸೋಲಿಸಬೇಕು ಎಂದು ಹೇಳಿದ್ದಾರೆ ಎಂಬ ಉಲ್ಲೇಖವಿರುವ ಸಂದೇಶವನ್ನು ಓದಿದ್ದಾರೆ.

ಇದನ್ನು ಓದಿ: ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...