Homeಮುಖಪುಟದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ...

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ ಪತ್ನಿ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು ಹೇಳಿರುವ ಅವರ ಸಂದೇಶವನ್ನು ಜನರಿಗೆ ನೆನಪಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ಯಾರು?

ಅಡ್ಮಿರಲ್ ರಾಮದಾಸ್ ಅವರು ಸೆಪ್ಟೆಂಬರ್ 5, 1933ರಂದು ಬಾಂಬೆಯ ಮಾಟುಂಗಾದಲ್ಲಿ ಜನಿಸಿದರು. ಅವರ ಆರಂಭಿಕ ಶಿಕ್ಷಣ ದೆಹಲಿಯಲ್ಲಿ ಪ್ರೆಸೆಂಟೇಶನ್ ಕಾನ್ವೆಂಟ್ ಮತ್ತು ರಾಮ್ಜಾಸ್ ಕಾಲೇಜಿನಲ್ಲಿ ನಡೆದಿತ್ತು. ಅವರು 1949ರಲ್ಲಿ ಕ್ಲೆಮೆಂಟ್ ಟೌನ್ ಡೆಹ್ರಾಡೂನ್‌ನಲ್ಲಿರುವ ಆರ್ಮ್ಡ್ ಫೋರ್ಸಸ್ ಅಕಾಡೆಮಿಯ ಜಂಟಿ ಸೇವೆಗಳ ವಿಭಾಗಕ್ಕೆ ಸೇರಿದ್ದಾರೆ, ಸೆಪ್ಟೆಂಬರ್ 1953ರಲ್ಲಿ ಭಾರತೀಯ ನೌಕಾಪಡೆಗೆ ನೇಮಕಗೊಂಡಿದ್ದರು. ಇವರು ಕೊಚ್ಚಿಯಲ್ಲಿ ನೌಕಾ ಅಕಾಡೆಮಿಯನ್ನು ಸ್ಥಾಪಿಸಿದ್ದರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪ್ರಮುಖ ಪಾತ್ರ ವಹಿಸಿದ INS ಬಿಯಾಸ್‌ಗೆ ಕಮಾಂಡಿಂಗ್ ಆಗಿದ್ದರು. ಪಶ್ಚಿಮ ಜರ್ಮನಿಯ ಬಾನ್‌ನಲ್ಲಿ ಭಾರತೀಯ ನೌಕಾಪಡೆಯ ಪ್ರಮುಖ ಅಧಿಕಾರಿಯಾಗಿ ಆಗಿ ಸೇವೆ ಸಲ್ಲಿಸಿದ್ದರು. ಪೂರ್ವ ನೌಕಾ ಕಮಾಂಡ್‌ನ ಫ್ಲೀಟ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ ಮತ್ತು ದಕ್ಷಿಣ ಮತ್ತು ಪೂರ್ವ ನೌಕಾ ಕಮಾಂಡ್‌ಗಳೆರಡಕ್ಕೂ ಕಮಾಂಡರ್ ಆಗಿದ್ದರು. ಅವರು 13ನೇ ಚೀಫ್ ಆಫ್ ನೇವಲ್ ಸ್ಟಾಫ್ (CNS) ಆಗಿ 30ನೇ ನವೆಂಬರ್ 1990 ರಂದು ಅಧಿಕಾರ ವಹಿಸಿಕೊಂಡಿದ್ದರು. ಅವರು 1993ರಲ್ಲಿ ಭಾರತೀಯ ನೌಕಾಪಡೆಯಿಂದ ನಿವೃತ್ತರಾಗಿದ್ದರು.

ನಿವೃತ್ತಿಯ ನಂತರ, ಅಡ್ಮಿರಲ್ ರಾಮದಾಸ್ ಅವರು ಮಹಾರಾಷ್ಟ್ರದ ಅಲಿಬಾಗ್‌ನ ಭೈಮಾಲಾ ಗ್ರಾಮದಲ್ಲಿ ವಾಸಿಸುತ್ತಿದ್ದರು. 1971ರ ಯುದ್ಧ ಕಾರ್ಯಾಚರಣೆಗಳಲ್ಲಿ ಅವರ ಶೌರ್ಯ ಕೃತ್ಯಗಳನ್ನು ಗುರುತಿಸಿ ಮಹಾರಾಷ್ಟ್ರ ಸರ್ಕಾರವು ಅವರಿಗೆ ನೀಡಿದ ಭೂಮಿಯಲ್ಲಿ ನೆಲೆಸಿದ್ದರು. ಅಲ್ಲಿ ಅವರು ಮತ್ತು ಅವರ ಪತ್ನಿ ಲಲಿತಾ ರಾಮದಾಸ್ ಅವರು ವೈವಿಧ್ಯಮಯ ಕೃಷಿ ಕಾರ್ಯವನ್ನು ಮಾಡಿದ್ದರು. ಸಾವಯವ ಕೃಷಿಯ ಜೊತೆ  ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇವುಗಳಲ್ಲಿ ಪಾಕಿಸ್ತಾನ ಇಂಡಿಯಾ ಪೀಪಲ್ಸ್ ಫೋರಮ್ ಫಾರ್ ಪೀಸ್ ಅಂಡ್ ಡೆಮಾಕ್ರಸಿ (ಪಿಐಪಿಪಿಎಫ್‌ಡಿ), ಇಂಡೋ-ಪಾಕಿಸ್ತಾನ್ ಸೋಲ್ಜರ್ಸ್ ಇನಿಶಿಯೇಟಿವ್ ಫಾರ್ ಪೀಸ್ (ಐಪಿಎಸ್‌ಐ),  ಪರಮಾಣು ನಿಶ್ಯಸ್ತ್ರೀಕರಣ ಮತ್ತು ಶಾಂತಿಗಾಗಿ ಒಕ್ಕೂಟದ ಜೊತೆಗೆ ತೊಡಗಿಸಿಕೊಂಡರು, ಅವರ ಹೋರಾಟವನ್ನು ಬೆಂಬಲಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 22 ಗಾಂವ್ ಬಚಾವೋ ಆಂದೋಲನ ಅಡಿಯಲ್ಲಿ SEZ ವಿರುದ್ಧ ಹೋರಾಟ, ಲಿಂಗ ಸಮಾನತೆ, ಮೀನುಗಾರರ ಹಕ್ಕುಗಳು, ರೈತರ ಹಕ್ಕುಗಳು, ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳು ಸೇರಿದಂತೆ ವಿವಿಧ ಹೋರಾಟಗಳಲ್ಲಿ ಇವರು ಮುಂಚೂಣಿಯಲ್ಲಿದ್ದರು.

ಸಂದೇಶದಲ್ಲೇನಿದೆ?

ನಮಸ್ಕಾರ, ನನ್ನ ಹೆಸರು ಲಲಿತಾ ರಾಮದಾಸ್‌, ನನ್ನ ಪತಿ ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್, ಅವರು 90ನೇ ವರ್ಷದಲ್ಲಿ ಸಿಕಂದರಾಬಾದ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾನು ಅವರ ಧ್ವನಿಯನ್ನು ಕೇಳುತ್ತಿದ್ದೇನೆ. ದೇಶ, ಪ್ರೀತಿಯ ಜನರು, 45 ವರ್ಷಗಳ ಕಾಲ ಅವರು ಕೆಲಸ ಮಾಡಿದ ಭಾರತೀಯ ನೌಕಾಪಡೆ ಮತ್ತು ಸಂವಿಧಾನದ ಬಗ್ಗೆ ಅವರ ಕಾಳಜಿಯನ್ನು ನೆನಪಿಸಿಕೊಳ್ಳುತ್ತೇನೆ. ಅವರ ನಿವೃತ್ತಿ ಬಳಿಕ ನಾವು ರಾಯಗಢ ಜಿಲ್ಲೆಯ ಅಲಿಬಾಗ್‌ನ ಭೈಮಾಲಾ ಹಳ್ಳಿಯಲ್ಲಿ ವಾಸಿಸುತ್ತಿದ್ದೆವು. ಅವರು ಜಮಮೀನಿನಲ್ಲಿ ಕೆಲಸ ಮಾಡಿದರು, ಜಮೀನು, ಕೃಷಿ, ಕಾಡುಗಳ ಬಗ್ಗೆ ಜನರಿಂದ ತಿಳಿದರು. ಗಾಂವ್ ಬಚಾವೋ ಆಂದೋಲನದ ಅಡಿಯಲ್ಲಿ ವಿಶೇಷ ಆರ್ಥಿಕ ವಲಯದ (SEZ) ಬಗ್ಗೆ  ಹೋರಾಟವನ್ನು ಮಾಡಿದರು. ಅವರು ಆಂದೋಲನದ ನೇತೃತ್ವ ವಹಿಸಿದ್ದರು. 4 ವರ್ಷಗಳ ಕಾಲ ಅವರು  ಹೋರಾಟವನ್ನು ನಡೆಸಿದ್ದರು.

ಅಡ್ಮಿರಲ್ ರಾಮ್‌ದಾಸ್ ಅವರು ಸಂವಿಧಾನದ ಪ್ರಬಲ ಪ್ರತಿಪಾದಕರಾಗಿದ್ದು, 16ನೇ ವರ್ಷಕ್ಕೆ ನೌಕಾಪಡೆಗೆ ಸೇರ್ಪಡೆಯಾಗಿದ್ದರು. 16ರಿಂದ 90ರವರೆಗೆ ನಾಗರಿಕನಾಗಿ ಅವರು ಅವರು ಕೊನೆಯ ದಿನಗಳಲ್ಲಿ ಸಮಾನತೆ ಭ್ರಾತೃತ್ವ, ಸ್ವಾತಂತ್ರ್ಯ, ನ್ಯಾಯವನ್ನು ಗೌರವಿಸದ ಶಕ್ತಿಗಳಿಂದ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಅವರು ಕಳವಳವನ್ನು ವ್ಯಕ್ತಪಡಿಸಿದ್ದರು. ಅನಾರೋಗ್ಯದ ದಿನಗಳಲ್ಲೂ ಅವರು 2024ರ ಗಣರಾಜ್ಯೋತ್ಸವದ ದಿನದಂದು ಸಾರ್ವಜನಿಕ ಸ್ಥಳದಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ಏ.14ರಂದು ಅಂಬೇಡ್ಕರ್‌ ಜಯಂತಿಯನ್ನು ಆಚರಿಸುತ್ತೇವೆ. ಮುಂದಿನ ವಾರ ದೇಶದಲ್ಲಿ ಮತದಾನ ನಡೆಯಲಿದೆ. ಜನರು ದೇಶದಾದ್ಯಂತ ಮತದಾನ ಮಾಡಲಿದ್ದಾರೆ. ನಾನು ಅಲಿಬಾಗ್‌ಗೆ ಮತದಾನಕ್ಕೆ ಹೋಗುತ್ತಾನೆ. ನಾನು ಪತಿಯ ಜೊತೆ ಮತದಾನಕ್ಕೆ ಆಟೋ ರಿಕ್ಷಾದಲ್ಲಿ ಹೋದ ದಿನಗಳನ್ನು ನೆನಪಿಸುತ್ತೇನೆ, ಅವರು ತನ್ನ ಕೊನೆಯ ದಿನಗಳಲ್ಲಿ ನಾವು ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು, ನಿರ್ಭೀತಿಯಿಂದ ಮತ ಚಲಾಯಿಸುವ ಮೂಲಕ, ಪ್ರಜಾಪ್ರಭುತ್ವಕ್ಕಾಗಿ, ಜಾತ್ಯತೀತತೆಗಾಗಿ, ಪ್ರೀತಿ ಮತ್ತು ಶಾಂತಿಗಾಗಿ ವಿಭಜನೀಯ, ಸರ್ವಾಧಿಕಾರಿ ಶಕ್ತಿಗಳನ್ನು ಸೋಲಿಸಬೇಕು ಎಂದು ಹೇಳಿದ್ದಾರೆ ಎಂಬ ಉಲ್ಲೇಖವಿರುವ ಸಂದೇಶವನ್ನು ಓದಿದ್ದಾರೆ.

ಇದನ್ನು ಓದಿ: ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...