Homeಮುಖಪುಟದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ...

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ ಪತ್ನಿ

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು ಹೇಳಿರುವ ಅವರ ಸಂದೇಶವನ್ನು ಜನರಿಗೆ ನೆನಪಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ಯಾರು?

ಅಡ್ಮಿರಲ್ ರಾಮದಾಸ್ ಅವರು ಸೆಪ್ಟೆಂಬರ್ 5, 1933ರಂದು ಬಾಂಬೆಯ ಮಾಟುಂಗಾದಲ್ಲಿ ಜನಿಸಿದರು. ಅವರ ಆರಂಭಿಕ ಶಿಕ್ಷಣ ದೆಹಲಿಯಲ್ಲಿ ಪ್ರೆಸೆಂಟೇಶನ್ ಕಾನ್ವೆಂಟ್ ಮತ್ತು ರಾಮ್ಜಾಸ್ ಕಾಲೇಜಿನಲ್ಲಿ ನಡೆದಿತ್ತು. ಅವರು 1949ರಲ್ಲಿ ಕ್ಲೆಮೆಂಟ್ ಟೌನ್ ಡೆಹ್ರಾಡೂನ್‌ನಲ್ಲಿರುವ ಆರ್ಮ್ಡ್ ಫೋರ್ಸಸ್ ಅಕಾಡೆಮಿಯ ಜಂಟಿ ಸೇವೆಗಳ ವಿಭಾಗಕ್ಕೆ ಸೇರಿದ್ದಾರೆ, ಸೆಪ್ಟೆಂಬರ್ 1953ರಲ್ಲಿ ಭಾರತೀಯ ನೌಕಾಪಡೆಗೆ ನೇಮಕಗೊಂಡಿದ್ದರು. ಇವರು ಕೊಚ್ಚಿಯಲ್ಲಿ ನೌಕಾ ಅಕಾಡೆಮಿಯನ್ನು ಸ್ಥಾಪಿಸಿದ್ದರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪ್ರಮುಖ ಪಾತ್ರ ವಹಿಸಿದ INS ಬಿಯಾಸ್‌ಗೆ ಕಮಾಂಡಿಂಗ್ ಆಗಿದ್ದರು. ಪಶ್ಚಿಮ ಜರ್ಮನಿಯ ಬಾನ್‌ನಲ್ಲಿ ಭಾರತೀಯ ನೌಕಾಪಡೆಯ ಪ್ರಮುಖ ಅಧಿಕಾರಿಯಾಗಿ ಆಗಿ ಸೇವೆ ಸಲ್ಲಿಸಿದ್ದರು. ಪೂರ್ವ ನೌಕಾ ಕಮಾಂಡ್‌ನ ಫ್ಲೀಟ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ ಮತ್ತು ದಕ್ಷಿಣ ಮತ್ತು ಪೂರ್ವ ನೌಕಾ ಕಮಾಂಡ್‌ಗಳೆರಡಕ್ಕೂ ಕಮಾಂಡರ್ ಆಗಿದ್ದರು. ಅವರು 13ನೇ ಚೀಫ್ ಆಫ್ ನೇವಲ್ ಸ್ಟಾಫ್ (CNS) ಆಗಿ 30ನೇ ನವೆಂಬರ್ 1990 ರಂದು ಅಧಿಕಾರ ವಹಿಸಿಕೊಂಡಿದ್ದರು. ಅವರು 1993ರಲ್ಲಿ ಭಾರತೀಯ ನೌಕಾಪಡೆಯಿಂದ ನಿವೃತ್ತರಾಗಿದ್ದರು.

ನಿವೃತ್ತಿಯ ನಂತರ, ಅಡ್ಮಿರಲ್ ರಾಮದಾಸ್ ಅವರು ಮಹಾರಾಷ್ಟ್ರದ ಅಲಿಬಾಗ್‌ನ ಭೈಮಾಲಾ ಗ್ರಾಮದಲ್ಲಿ ವಾಸಿಸುತ್ತಿದ್ದರು. 1971ರ ಯುದ್ಧ ಕಾರ್ಯಾಚರಣೆಗಳಲ್ಲಿ ಅವರ ಶೌರ್ಯ ಕೃತ್ಯಗಳನ್ನು ಗುರುತಿಸಿ ಮಹಾರಾಷ್ಟ್ರ ಸರ್ಕಾರವು ಅವರಿಗೆ ನೀಡಿದ ಭೂಮಿಯಲ್ಲಿ ನೆಲೆಸಿದ್ದರು. ಅಲ್ಲಿ ಅವರು ಮತ್ತು ಅವರ ಪತ್ನಿ ಲಲಿತಾ ರಾಮದಾಸ್ ಅವರು ವೈವಿಧ್ಯಮಯ ಕೃಷಿ ಕಾರ್ಯವನ್ನು ಮಾಡಿದ್ದರು. ಸಾವಯವ ಕೃಷಿಯ ಜೊತೆ  ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇವುಗಳಲ್ಲಿ ಪಾಕಿಸ್ತಾನ ಇಂಡಿಯಾ ಪೀಪಲ್ಸ್ ಫೋರಮ್ ಫಾರ್ ಪೀಸ್ ಅಂಡ್ ಡೆಮಾಕ್ರಸಿ (ಪಿಐಪಿಪಿಎಫ್‌ಡಿ), ಇಂಡೋ-ಪಾಕಿಸ್ತಾನ್ ಸೋಲ್ಜರ್ಸ್ ಇನಿಶಿಯೇಟಿವ್ ಫಾರ್ ಪೀಸ್ (ಐಪಿಎಸ್‌ಐ),  ಪರಮಾಣು ನಿಶ್ಯಸ್ತ್ರೀಕರಣ ಮತ್ತು ಶಾಂತಿಗಾಗಿ ಒಕ್ಕೂಟದ ಜೊತೆಗೆ ತೊಡಗಿಸಿಕೊಂಡರು, ಅವರ ಹೋರಾಟವನ್ನು ಬೆಂಬಲಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 22 ಗಾಂವ್ ಬಚಾವೋ ಆಂದೋಲನ ಅಡಿಯಲ್ಲಿ SEZ ವಿರುದ್ಧ ಹೋರಾಟ, ಲಿಂಗ ಸಮಾನತೆ, ಮೀನುಗಾರರ ಹಕ್ಕುಗಳು, ರೈತರ ಹಕ್ಕುಗಳು, ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳು ಸೇರಿದಂತೆ ವಿವಿಧ ಹೋರಾಟಗಳಲ್ಲಿ ಇವರು ಮುಂಚೂಣಿಯಲ್ಲಿದ್ದರು.

ಸಂದೇಶದಲ್ಲೇನಿದೆ?

ನಮಸ್ಕಾರ, ನನ್ನ ಹೆಸರು ಲಲಿತಾ ರಾಮದಾಸ್‌, ನನ್ನ ಪತಿ ಭಾರತೀಯ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್, ಅವರು 90ನೇ ವರ್ಷದಲ್ಲಿ ಸಿಕಂದರಾಬಾದ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾನು ಅವರ ಧ್ವನಿಯನ್ನು ಕೇಳುತ್ತಿದ್ದೇನೆ. ದೇಶ, ಪ್ರೀತಿಯ ಜನರು, 45 ವರ್ಷಗಳ ಕಾಲ ಅವರು ಕೆಲಸ ಮಾಡಿದ ಭಾರತೀಯ ನೌಕಾಪಡೆ ಮತ್ತು ಸಂವಿಧಾನದ ಬಗ್ಗೆ ಅವರ ಕಾಳಜಿಯನ್ನು ನೆನಪಿಸಿಕೊಳ್ಳುತ್ತೇನೆ. ಅವರ ನಿವೃತ್ತಿ ಬಳಿಕ ನಾವು ರಾಯಗಢ ಜಿಲ್ಲೆಯ ಅಲಿಬಾಗ್‌ನ ಭೈಮಾಲಾ ಹಳ್ಳಿಯಲ್ಲಿ ವಾಸಿಸುತ್ತಿದ್ದೆವು. ಅವರು ಜಮಮೀನಿನಲ್ಲಿ ಕೆಲಸ ಮಾಡಿದರು, ಜಮೀನು, ಕೃಷಿ, ಕಾಡುಗಳ ಬಗ್ಗೆ ಜನರಿಂದ ತಿಳಿದರು. ಗಾಂವ್ ಬಚಾವೋ ಆಂದೋಲನದ ಅಡಿಯಲ್ಲಿ ವಿಶೇಷ ಆರ್ಥಿಕ ವಲಯದ (SEZ) ಬಗ್ಗೆ  ಹೋರಾಟವನ್ನು ಮಾಡಿದರು. ಅವರು ಆಂದೋಲನದ ನೇತೃತ್ವ ವಹಿಸಿದ್ದರು. 4 ವರ್ಷಗಳ ಕಾಲ ಅವರು  ಹೋರಾಟವನ್ನು ನಡೆಸಿದ್ದರು.

ಅಡ್ಮಿರಲ್ ರಾಮ್‌ದಾಸ್ ಅವರು ಸಂವಿಧಾನದ ಪ್ರಬಲ ಪ್ರತಿಪಾದಕರಾಗಿದ್ದು, 16ನೇ ವರ್ಷಕ್ಕೆ ನೌಕಾಪಡೆಗೆ ಸೇರ್ಪಡೆಯಾಗಿದ್ದರು. 16ರಿಂದ 90ರವರೆಗೆ ನಾಗರಿಕನಾಗಿ ಅವರು ಅವರು ಕೊನೆಯ ದಿನಗಳಲ್ಲಿ ಸಮಾನತೆ ಭ್ರಾತೃತ್ವ, ಸ್ವಾತಂತ್ರ್ಯ, ನ್ಯಾಯವನ್ನು ಗೌರವಿಸದ ಶಕ್ತಿಗಳಿಂದ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಅವರು ಕಳವಳವನ್ನು ವ್ಯಕ್ತಪಡಿಸಿದ್ದರು. ಅನಾರೋಗ್ಯದ ದಿನಗಳಲ್ಲೂ ಅವರು 2024ರ ಗಣರಾಜ್ಯೋತ್ಸವದ ದಿನದಂದು ಸಾರ್ವಜನಿಕ ಸ್ಥಳದಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ಏ.14ರಂದು ಅಂಬೇಡ್ಕರ್‌ ಜಯಂತಿಯನ್ನು ಆಚರಿಸುತ್ತೇವೆ. ಮುಂದಿನ ವಾರ ದೇಶದಲ್ಲಿ ಮತದಾನ ನಡೆಯಲಿದೆ. ಜನರು ದೇಶದಾದ್ಯಂತ ಮತದಾನ ಮಾಡಲಿದ್ದಾರೆ. ನಾನು ಅಲಿಬಾಗ್‌ಗೆ ಮತದಾನಕ್ಕೆ ಹೋಗುತ್ತಾನೆ. ನಾನು ಪತಿಯ ಜೊತೆ ಮತದಾನಕ್ಕೆ ಆಟೋ ರಿಕ್ಷಾದಲ್ಲಿ ಹೋದ ದಿನಗಳನ್ನು ನೆನಪಿಸುತ್ತೇನೆ, ಅವರು ತನ್ನ ಕೊನೆಯ ದಿನಗಳಲ್ಲಿ ನಾವು ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು, ನಿರ್ಭೀತಿಯಿಂದ ಮತ ಚಲಾಯಿಸುವ ಮೂಲಕ, ಪ್ರಜಾಪ್ರಭುತ್ವಕ್ಕಾಗಿ, ಜಾತ್ಯತೀತತೆಗಾಗಿ, ಪ್ರೀತಿ ಮತ್ತು ಶಾಂತಿಗಾಗಿ ವಿಭಜನೀಯ, ಸರ್ವಾಧಿಕಾರಿ ಶಕ್ತಿಗಳನ್ನು ಸೋಲಿಸಬೇಕು ಎಂದು ಹೇಳಿದ್ದಾರೆ ಎಂಬ ಉಲ್ಲೇಖವಿರುವ ಸಂದೇಶವನ್ನು ಓದಿದ್ದಾರೆ.

ಇದನ್ನು ಓದಿ: ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...