Homeಮುಖಪುಟಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

- Advertisement -
- Advertisement -

ಅಡ್ಮಿರಲ್ ಲಕ್ಷ್ಮೀನಾರಾಯಣ ರಾಮದಾಸ್, ಪಿವಿಎಸ್‌ಎಂ, ಎವಿಎಸ್‌ಎಂ, ವೀರಚಕ್ರ, ವಿಎಸ್‌ಎಂ, ಎಡಿಸಿ ಅವರು ಭಾರತೀಯ ನೌಕಾಸೇನೆಯ ಮಾಜಿ ಮಹಾದಂಡನಾಯಕರಾಗಿದ್ದು, ಮೊದಲ ಪ್ರಧಾನಿ ನೆಹರೂ ಅವರು ಲಾಠಿ ಹಿಡಿದು ಹಿಂಸಾನಿರತ ಗುಂಪನ್ನು ಚದರಿಸಿದ ಘಟನೆಯನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

***

1947ರಲ್ಲಿ ನಾನು ಹದಿನಾಲ್ಕು ವರ್ಷದ ಹುಡುಗನಾಗಿದ್ದು, ದಿಲ್ಲಿಯಲ್ಲಿ ವಾಸಿಸುತ್ತಿದ್ದೆ. ದೇಶ ವಿಭಜನೆಯ ಯಾತನೆ ಮತ್ತು ಉದ್ವೇಗ ಹಾಗೂ ಸ್ವಾತಂತ್ರ್ಯದ ಭರವಸೆಯಲ್ಲಿ ನಾನಿದ್ದೆ. ನಾನು ನೌಕಾಪಡೆಗೆ ಸೇರಿದ್ದಕ್ಕೆ ಪ್ರೇರಣೆಯೇ ಅದು ದೇಶಸೇವೆಗೆ ಅವಕಾಶ ಒದಗಿಸಿ, ದೇಶ ಕಟ್ಟುವ ಕೆಲಸದಲ್ಲಿ ನೆರವಾಗಬಹುದೆಂಬ ನಿರೀಕ್ಷೆ. ನಾನು ಭಾರತದ ಕೊನೆಯ ವೈಸರಾಯ್ ಮತ್ತು ಮೊದಲ ಗವರ್ನರ್ ಜನರಲ್ ಆಗಿದ್ದ ಬರ್ಮಾದ ಲಾರ್ಡ್ ಲೂಯಿ ಮೌಂಟ್‌ಬ್ಯಾಟನ್ ಅವರ ಸ್ವಚ್ಛ, ಬಿಳಿ ಸಮವಸ್ತ್ರದಿಂದ ಸಂಪೂರ್ಣ ಮಂತ್ರಮುಗ್ಧನಾಗಿದ್ದೆ ಎಂಬುದನ್ನು ಒಪ್ಪಿಕೊಳ್ಳಬೇಕು. ನೆಹರೂ ಅವರನ್ನು ಅವರ ನಿಷ್ಕಳಂಕ ಚೂಡಿದಾರ್- ಕುರ್ತಾ ಮತ್ತು ವಿಶಿಷ್ಟ “ನೆಹರೂ” ಜ್ಯಾಕೆಟ್‌ನಲ್ಲಿ ನೋಡದಿರುವುದು ಸಾಧ್ಯವಿರಲಿಲ್ಲ- ಅದಕ್ಕೆ ಈ ದಿನಗಳಲ್ಲಿ ಬೇರೆಯೇ ಹೆಸರಿದೆ.

ನೆನಪಿನಲ್ಲಿ ಎದ್ದು ಕಾಣುವ ಆ ತಲೆಮಾರಿನ ನಾಯಕರ ಗುಣಗಳ ಕುರಿತು ಹಿಂತಿರುಗಿ ನೋಡಿದಾಗ ಒಂದು ಚಿತ್ರವನ್ನು ಅದೂ ತೀರಾ ಹತ್ತಿರದಿಂದ ನೋಡಿದ ಒಂದು ಚಿತ್ರವನ್ನು ನಾನೆಂದಿಗೂ ಮರೆಯಲಾರೆ. ಅದೆಂದರೆ “ಕಾರ್ಯಾಚರಣೆಯಲ್ಲಿ ನೆಹರೂ”.

ಆ ಭಯಾನಕ ದಿನಗಳ ಮೂರು ಚಿತ್ರಗಳು ನನ್ನ ಮನದಲ್ಲಿ ಅಚ್ಚೊತ್ತಿ ಉಳಿದಿವೆ-

– ನನ್ನ ಕಣ್ಣೆದುರೇ ಅಸಹಾಯಕ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಚೂರಿ ಇರಿತದ ಕ್ರೂರ ಘಟನೆ.

-ನಮ್ಮ ಬಂಗಾಳಿ ಮಾರ್ಕೆಟ್ ಮನೆಯ ಹೊರಗೆ ಉದ್ರಿಕ್ತ ಗುಂಪೊಂದು ನಮ್ಮ ಮನೆಯಲ್ಲಿ ಆಶ್ರಯ ಪಡೆದಿದ್ದ ನನ್ನ ತಂದೆಯವರ ಮಿತ್ರ ಹಾಗೂ ಸಹೋದ್ಯೋಗಿ ಗುಲಾಂ ಮೊಹಮ್ಮದ್ ಅವರನ್ನು ಹೊರಗೆ ಕಳುಹಿಸದಿದ್ದರೆ ತಂದೆಯವರಿಗೆ ಹಿಂಸಾಚಾರದ ಬೆದರಿಕೆ ಒಡ್ಡಿದ್ದು.

– ತನ್ನ ಸ್ವಂತ ಜೀವದ ಬೆದರಿಕೆಯನ್ನೂ ಲೆಕ್ಕಿಸದೆ ಪಂಡಿತ್ ನೆಹರೂ ಅವರು ಹಿಂಸಾನಿರತ ಉದ್ರಿಕ್ತ ಜನರ ಗುಂಪನ್ನು ಚದರಿಸಲು ಲಾಠಿ ಹಿಡಿದು ಧುಮುಕಿದ್ದು.

ಈ ಕೊನೆಯ ಘಟನೆಯನ್ನು ನೆನಪಿಸಿಕೊಳ್ಳಲು ನಾನು ಕೆಲವು ಸೆಕೆಂಡುಗಳನ್ನು ಕಳೆಯುತ್ತೇನೆ.

ನಾನು ಕನ್ನಾಟ್ ಸರ್ಕಸ್‌ನ ಅಗ್ನಿಶಾಮಕ ಠಾಣೆಯ ಎದುರಿದ್ದ ಕಟ್ಟಡವೊಂದರ ಮೊದಲ ಮಹಡಿಯಲ್ಲಿದ್ದ ನ್ಯೂ ಕ್ಯಾಂಬ್ರಿಡ್ಜ್ ಸ್ಕೂಲ್‌ನಿಂದ ಮನೆಗೆ ಮರಳುವ ಹಾದಿಯಲ್ಲಿದ್ದೆ. ಆಗ ಅಲ್ಲಲ್ಲಿ ಉದ್ರಿಕ್ತ ಮತ್ತು ಹಿಂಸಾಚಾರ ನಿರತ ಗುಂಪುಗಳಿರುತ್ತಿದ್ದವು. ಅಂತಹಾ ಒಂದು ಗುಂಪು ದಿಲ್ಲಿಯ ಹಲವಾರು ಜನರಿಗೆ ಪ್ರಿಯ ತಾಣವಾಗಿದ್ದ ಪ್ರಸಿದ್ಧ ಪುಸ್ತಕದಂಗಡಿಯಾಗಿದ್ದ ಎಸ್. ರಿಯಾಜುದ್ದೀನ್ ಎಂಡ್ ಸನ್ಸ್‌ನತ್ತ ಸಾಗುತ್ತಿತ್ತು.

ಏಕಾಏಕಿಯಾಗಿ ಒಂದು ಕೆನೆಬಣ್ಣದ ಅಂಬಾಸಿಡರ್ ಕಾರು ಬಂದು ನಿಂತಿತು, ಅದರ ಬಾಗಿಲು ತೆರೆಯಿತು ಮತ್ತು ನನ್ನನ್ನು ದಂಗುಬಡಿಸುವಂತಹ ಅಚ್ಚರಿಯಲ್ಲಿ ಕೆಡಹುವಂತೆ ಕೆಳಗಿಳಿದ ಜವಾಹರಲಾಲ್ ನೆಹರೂ ಅವರು ತನ್ನ ಕೈಯಲ್ಲಿದ್ದ ಲಾಠಿಯನ್ನು ಝಳಪಿಸುತ್ತಾ, ಹಿಂಸಾಚಾರ ನಿಲ್ಲಿಸುವಂತೆ ಕೂಗುತ್ತಾ ಗುಂಪಿನತ್ತ ಓಡಿದರು. ನಮ್ಮ ಪ್ರಧಾನಿಯವರೇ ಸ್ವಂತ ಭದ್ರತೆಯನ್ನು ಲೆಕ್ಕಿಸದೇ, ಯಾವುದೇ ಭದ್ರತೆ ಇಲ್ಲದೇ ಕಾರ್ಯಾಚರಣೆಗೆ ಧುಮುಕಿದ್ದನ್ನು ನೋಡಿ ದಂಗಾಗಿಹೋದೆ.

ಹೀಗೆ ನಡೆದಂತೆ, ನಾನು ಚಿಕ್ಕದೊಂದು ಭೇಟಿಗಾಗಿ ಮುಂಬಯಿಗೆ ಹೋಗಿದ್ದವನು ಮಹಮ್ಮದಾಲಿ ರಸ್ತೆಯಲ್ಲಿದ್ದಾಗ ದಿಲ್ಲಿಯ ಬಿರ್ಲಾ ಭವನದಲ್ಲಿ ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯಾದ ಸುದ್ದಿ ಬಂತು. ವ್ಯಾಪಾರಿಗಳು ತರಾತುರಿಯಲ್ಲಿ ಅಂಗಡಿ ಬಾಗಿಲುಗಳನ್ನು ಮುಚ್ಚುವುದನ್ನು ಮತ್ತು ಜನರು ಯದ್ವಾತದ್ವಾ ಓಡುವುದನ್ನು ಕಂಡೆ. ಗಾಂಧೀಜಿಯವರನ್ನು ಕೊಂದದ್ದು ಒಬ್ಬ ಹಿಂದೂ ಎಂದು ಆಕಾಶವಾಣಿಯಲ್ಲಿ ಮಾತನಾಡಿದ ಪ್ರಧಾನಿ ನೆಹರೂ ಮತ್ತೆ ಮತ್ತೆ ಹೇಳಿದ್ದನ್ನು ಕೇಳಿ ನಮಗೆಷ್ಟು ಸಮಾಧಾನವಾಯಿತು ಎಂಬುದನ್ನು ನೆನಪಿಸಿಕೊಳ್ಳಬಲ್ಲೆ. ಇದರಿಂದ ಅವರು ಅಲ್ಪಪಸಂಖ್ಯಾತ ಸಮುದಾಯದ ಮೇಲೆ ಕೋಪ ಸ್ಫೋಟಗೊಂಡು ಹಿಂಸಾಚಾರ ನಡೆಯದಂತೆ ಅವರು ಖಾತರಿಪಡಿಸಿದ್ದರು. ಇದಕ್ಕೆ ತೀಕ್ಷ್ಣವಾದ ಪ್ರಸಂಗಾವಧಾನತೆ ಮತ್ತು ನಮ್ಮ ದೇಶದ ಜಾತ್ಯಾತೀತ ಸ್ವರೂಪದ ರಕ್ಷಣೆಯ ಅಗತ್ಯದ ಕುರಿತು ಆಳವಾದ ನಂಬಿಕೆಯ ಅಗತ್ಯವಿತ್ತು.

ನಾನು ವರ್ಷಗಳ ಹಿಂದೆ ಕಣ್ಣುತಿರುಗಿಸಿ ನೋಡಿದಾಗ, ಅದರಲ್ಲೂ ಮುಖ್ಯವಾಗಿ ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಹಿಂಸಾಚಾರ ಗಮನಿಸಿದಾಗ ಅದನ್ನು 1947ರ ಅತ್ಯಂತ ಸ್ಫೋಟಕ ಪರಿಸ್ಥಿತಿಗೆ ಹೋಲಿಸುವುದು ಕಷ್ಟವಲ್ಲ. 2020ರಲ್ಲಿ ಯಾವುದೇ ರಾಜಕೀಯ ನಾಯಕರು ಹಿಂಸಾಚಾರವನ್ನಾಗಲೀ, ನಂತರದಲ್ಲಿ ದೇಶಕ್ಕೆ ಆಳವಾದ ಹಾನಿಯುಂಟುಮಾಡುವ ವಿಭಜನೆಯನ್ನಾಗಲೀ ದೈಹಿಕವಾಗಿ ನಿಯಂತ್ರಿಸಲು ವೈಯಕ್ತಿಕವಾಗಿ ಹಾಜರಿರಲಿಲ್ಲ.

ನಿಜವಾದ ನಾಯಕರೆಂದರೆ, ದಾರ್ಶನಿಕತೆ ಮತ್ತು ಧೈರ್ಯ ಹೊಂದಿರುವವರು. ಪಂಡಿತ್‌ಜೀ ಅವರು ಈ ಗುಣಗಳ ಮಾದರಿಯಾಗಿದ್ದಾರೆ.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿಚ್ಛಿದ್ರಕಾರಿ ಅಜೆಂಡಾ ತಡೆಯಲು ಮುಂದಾಗಿ: ಮೋದಿಗೆ ನೌಕಾಪಡೆ ಮಾಜಿ ಮುಖ್ಯಸ್ಥ ಎಲ್. ರಾಮದಾಸ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...